Homeಕರ್ನಾಟಕಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

- Advertisement -
- Advertisement -

ದಕ್ಷಿಣ ಕನ್ನಡದ ಸಂಘ ಪರಿವಾರದಲ್ಲಿ ನಡೆಯುತ್ತಿರುವ ಶೀತಲ ಸಮರ ಈ ಚುನಾವಣೆಯಿಂದ ಬೀದಿಗೆ ಬಂದಿದೆ. ಕಳೆದೆರೆಡು ದಶಕದಿಂದ ಕರಾವಳಿಯ ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಬಿಜೆಪಿಯ ತೆರೆಮರೆಯ ಪ್ರಶ್ನಾತೀತ ತಂತ್ರಗಾರನಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ಟರು ಈಗ ಸಂಘ ಪರಿವಾರಕ್ಕೇ ಬೇಡವಾಗಿದ್ದಾರಾ ಎಂಬ ಸಂಶಯ ಕೇಸರಿ ಪಡೆಯ ಪ್ರಚಾರ ವೈಖರಿ ನೋಡಿದವರನ್ನು ಕಾಡಲು ಶುರು ಮಾಡಿದೆ. ಕರಾವಳಿಯ ಮೂರು ಜಿಲ್ಲೆಗಳ ಬಿಜೆಪಿ ಸಂಸದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಿಂದ ಹಿಡಿದು ಪ್ರಚಾರದ ಪ್ರತಿ ಹಂತದಲ್ಲೂ ಭಟ್ಟರನ್ನು ಬದಿಗಿಡಲಾಗಿತ್ತು. ಮೋದಿ ಮಂಗಳೂರಿಗೆ ಬಂದಾಗಲೂ ಭಟ್ಟರಿಗೆ ಯಾವ ಮಾನ-ಮರ್ಯಾದೆಯೂ ಇರಲಿಲ್ಲ.

ಅದೊಂದು ಕಾಲವಿತ್ತು. ಕರಾವಳಿ ಬಿಜೆಪಿಯ ಗ್ರಾಮ ಪಂಚಾಯ್ತಿ ಕ್ಯಾಂಡಿಡೇಟ್‍ನಿಂದ ಲೋಕಸಭೆ ಹುರಿಯಾಳಿನ ಆಯ್ಕೆ ಕಲ್ಲಡ್ಕ ಭಟ್ಟರ ಇಷ್ಟಾನಿಷ್ಟದಂತೆಯೇ ನಡೆಯುತ್ತಿತ್ತು. ಜೊತೆಗೆ ಉಡುಪಿಯ ನಾಜೂಕಯ್ಯ ವೇದವ್ಯಾಸ ಆಚಾರ್ಯ ಮತ್ತು ಕುಂದಾಪುರದ ವಿಪ್ರ ಭೀಷ್ಮ ಎ.ಜಿ.ಕೊಡ್ಗಿ ಇರುತ್ತಿದ್ದರು. ಯಡ್ಡಿ ಸಿಎಂ ಆಗಿದ್ದಾಗ ಆತನ ಸರ್ಕಾರದ ಅಂಕಿ-ಸಂಖ್ಯೆಯ ಮೆದುಳಾಗಿದ್ದ ಆಚಾರ್ಯ ಮಂತ್ರಿಯಾಗಿರುವಾಗಲೇ ಹಠಾತ್ ನಿಧನರಾದರು; ಕುಂದಾಪುರದ ಕೊಡ್ಗಿ, ಸ್ಥಳೀಯ ಶೂದ್ರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯನ್ನು ಪಳಗಿಸಲಾಗದ ಹತಾಶೆಯಿಂದ ರಾಜಕಾರಣದಿಂದ ದೂರಾದರು. ಆಗ ಕಲ್ಲಡ್ಕ ಭಟ್ಟರು ಬಿಜೆಪಿಯ ಏಕಮೇವಾದ್ವಿತೀಯ ನಾಯಕನಾಗಿ ಹೋದರು! ಯಾವ ಮಟ್ಟಿಗೆಂದರೆ ಪುತ್ತೂರಿನ ಜನಸಂಘ ಕಾಲದ ಶಾಸಕನೂ ತನ್ನ ಖಾಸಾ ಭಾಮೈದುನನೂ ಆದ ರಾಮಭಟ್ಟರನ್ನೇ ಮೂಲೆಗೆ ಸರಿಸಿ ಅಟ್ಟಹಾಸದಿಂದ ಹಾರಾಡತೊಡಗಿದರು.

ಇವತ್ತು ಕರಾವಳಿ, ಕೋಮುವಾದದ ರಣರಂಗವಾಗಿ ಭೀತಿಯ ಓಟ್ ಬ್ಯಾಂಕ್ ರಾಜಕಾರಣ ಹದವಾಗಿದ್ದರೆ, ಅದು ಕಲ್ಲಡ್ಕರ ಕೊಡುಗೆ! ಹಾಗಾಗಿ ಭಟ್ಟರು ಹೇಳಿದವರಿಗೆ ಪರಿವಾರ ಎಮ್ಮೆಲ್ಲೆ, ಎಂಪಿ, ಜಿಪಂ, ತಾಪಂ ಮೆಂಬರಿಕೆ ಟಿಕೆಟ್ ಕೊಡುತ್ತಿತ್ತು. ಆರ್‍ಎಸ್‍ಎಸ್‍ನಲ್ಲಿ ಭಟ್ಟರ ಮಾತೇ ಕರಾವಳಿ ರಾಜಜಕಾರಣದ ಮಟ್ಟಿಗೆ ಅಂತಿಮವಾಣಿಯಾಗಿತ್ತು. ಬಿಜೆಪಿಯ ಸಂಸದ, ಶಾಸಕರಿಗೆಲ್ಲಾ ಭಟ್ಟರೆಂದರೆ ಒಂಥರಾ ಅವ್ಯಕ್ತ ಭಯ-ಭಕ್ತಿ. ಸಾರ್ವಜನಿಕವಾಗೇ ಭಟ್ಟರ ಕಾಲಿಗೆ ಡೈ ಹೊಡೆಯದ ಸಂಸದ-ಶಾಸಕ ಬಿಜೆಪಿಯಲ್ಲಿರಲು ಸಾಧ್ಯವೇ ಇಲ್ಲವೆಂಬಂಥ ಪರಿಸ್ಥಿತಿ ನಿರ್ಮಾಣ ಆಗಿತ್ತು!

ಈ ‘ದೊರೆತನ’ವನ್ನು ಭಟ್ಟರು ಸ್ವಾರ್ಥ ಸಾಧನೆಗೆ, ಆರ್ಥಿಕ ಉನ್ನತಿಗೆ ವ್ಯವಸ್ಥಿತವಾಗಿ ಬಳಸಿಕೊಳ್ಳತೊಡಗಿದರು. ತನ್ನ ಶಿಕ್ಷಣ ಸಂಸ್ಥೆಗೆ ‘ದೇಣಿಗೆ’ ಕೊಡದ ಶಾಸಕರಿಗೆ ಕಿರುಕುಳ ಕೊಡಲು ಶುರು ಮಾಡಿದರು. ಪುತ್ತೂರಿನ ಬಿಜೆಪಿ ಶಾಸಕಿ ಶಕುಂತಲಾ ಶೆಟ್ಟಿ ಗುರುಕಾಣಿಕೆ ಕೊಡಲಾಗದೆ ‘ಕಾಫಿರ್’ ಎನಿಸಿಕೊಂಡು ಕಾಂಗ್ರೆಸ್ ಪಾಲಾಗಬೇಕಾಗಿ ಬಂತು. ಭಟ್ಟರ ವಿರುದ್ಧ ವಯೋವೃದ್ಧ ರಾಮಭಟ್ಟರು ಬಂಡಾಯವೆದ್ದರೂ ಪ್ರಯೋಜನ ಆಗಲಿಲ್ಲ. ಹಲ್ಮುಖಿ ಸದಾನಂದ ಗೌಡ ಅಂಜುತ್ತ-ಅಳುಕುತ್ತ ಭಟ್ಟರ ವಿರುದ್ಧ ಒಂದೊಂದು ಪದ ಪಟಾಕಿ ಸಿಡಿಸಿದ್ದರು. ಭಟ್ಟರ ಕೆಂಗಣ್ಣಿಗೆ ತುತ್ತಾದ ಈ ಅರೆಭಾಷೆ ಗೌಡರಿಗೆ ಮತ್ತೆ ದಕ್ಷಿಣ ಕನ್ನಡದಿಂದ ಎಂಪಿಯಾಗುವ ಧೈರ್ಯ ಬರಲಿಲ್ಲ. ತನ್ನ ಬಾಲಕ್ಕೆ ಬೆಂಕಿ ಇಡುವ ಭಯದಿಂದ ಗೌಡ ಪಕ್ಕದ ಉಡುಪಿ-ಚಿಕ್ಕಮಗಳೂರಿಗೆ ಪಲಾಯನ ಮಾಡಬೇಕಾಗಿ ಬಂತು. ಭಟ್ಟರಿಗೆ ಕಪ್ಪ ಒಪ್ಪಿಸಿ ಹೈರಾಣಾದ ದೊಡ್ಡ ಪಟ್ಟಿಯೇ ಬಿಜೆಪಿಯಲ್ಲಿದೆ.

ಕುಂದಾಪುರದ ಐ.ಎಂ.ಜಯರಾಮ ಶೆಟ್ಟಿ ಕಲ್ಲಡ್ಕ ಭಟ್ಟಗೆ ಕಾಸು ಕೊಟ್ಟೇ ಎಂಪಿ ಟಿಕೆಟ್ ಪಡೆದಿದ್ದರು. ಕಳಪೆ ರಸಗೊಬ್ಬರ, ಬೀಜ ಉದ್ಯಮಿಯಾಗಿದ್ದ ಶೆಟ್ಟಿಯ ಜುಟ್ಟು ಹಿಡಿದು ಕುಣಿಸುತ್ತಿದ್ದರು. ಭಟ್ಟ ಮತ್ತು ಆಚಾರ್ಯರಿಗೆ ಕಾಸು ಕೊಡಲಾಗದಿದ್ದಾಗ ಶೆಟ್ಟಿ ಬಿಜೆಪಿಯಲ್ಲಿ ಉಳಿಯಲಾಗಲಿಲ್ಲ.

ಸುಳ್ಯದ ದಲಿತ ಚೆಡ್ಡಿ ಶಾಸಕ ಅಂಗಾರನಂತೂ ಭಟ್ಟರ ಕೇಸರಿ ಸಂಘ-ಸಂಸ್ಥೆಗಳಿಗೆ ದೊಡ್ಡ ಧನಾಧಾರವೆಂಬ ಪುಕಾರುಗಳಿವೆ. ಈ ಪಾಪದ ದಲಿತ ಸುಳ್ಯಕ್ಕೆ ನಯಾಪೈಸೆಯ ಒಳಿತು ಮಾಡದಿದ್ದರೂ ತಾನು ಬಲಿತು ಗುರು ಶಿಷ್ಯರನ್ನು ಸಂಪ್ರೀತಗೊಳಿಸುತ್ತಾ ಬಂದಿದ್ದಾನೆ. ಶಿಪ್ಪಿಂಗ್ ಉದ್ಯಮಿ ನಾಗರಾಜ ಶೆಟ್ಟಿ ಬಂಟ್ವಾಳದ ಶಾಸಕನಾಗಿದ್ದು ಭಟ್ಟರ ಕೃಪೆಯಿಂದ. ಆದರೆ ಭಟ್ಟರನ್ನು ನಿರಂತರವಾಗಿ ‘ಖುಷಿ’ ಪಡಿಸಲಾಗದೇ ಆತ ಭೀತಿಯಿಂದ ಹೊರಹೋಗಬೇಕಾಗಿ ಬಂತು! ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಟ್ರಿಗೆ ಸೆಡ್ಡುಹೊಡೆದ ತಪ್ಪಿಗೆ ಮಂತ್ರಿಗಿರಿಯಿಂದ ‘ವಂಚಿತ’ನಾಗಬೇಕಾಯ್ತು.

ಭಟ್ಟರ ಗುರುದಕ್ಷಿಣೆ ದಾಹಕ್ಕೆ ಕಳೆದೊಂದು ದಶಕದಿಂದ ಬಿಜೆಪಿ-ಸಂಘಪರಿವಾರ ಎರಡೂ ತತ್ತರಿಸಿ ಹೋದವು. ಈ ಬಗ್ಗೆ ಸಂಘ ಪರಿವಾರದಲ್ಲಿ ದೊಡ್ಡ ಚರ್ಚೆ ಎಬ್ಬಿಸಿತು! ಸ್ವಾಮಿ ರಾಘುನ ಪರವಹಿಸಿ ಭಟ್ಟರು ವಕಾಲತ್ತು ಶುರುಹಚ್ಚಿಕೊಂಡಿದ್ದು ಆರ್‍ಎಸ್‍ಎಸ್‍ನಲ್ಲಿ ಅಸಮಾಧಾನ ಮೂಡಿಸಿತ್ತು. ಆರ್‍ಎಸ್‍ಎಸ್‍ನ ಅತ್ಯುನ್ನತ ಹೈಕಮಾಂಡಿನ ಮಾಂಡಲೀಕನಂತಿರುವ ದತ್ತಾತ್ರೇಯ ಹೊಸಬಾಳೆ ಬಳಗ ರಾಘುನ ರಂಗೀಲಾ ಚಟುವಟಿಕೆ ವಿರುದ್ಧ ಬಂಡೆದ್ದು ಆತನ ಪೀಠೋಚ್ಛಾಟನೆಗೆ ಅಣಿಯಾಗಿದ್ದರು. ಆ ಸಂದರ್ಭದಲ್ಲಿ ಕಲ್ಲಡ್ಕ ಭಟ್ರು ಮಾತ್ರ ಹವ್ಯಕ ಕುಲಕಂಠಕ ರಾಘುನ ಬಚಾಯಿಸಲು ಹವಣಿಸಿದ್ದರು. ಭಟ್ಟರ ಧನ ದೌರ್ಬಲ್ಯ ಬಲ್ಲ ರಾಘು ಮಾನ್ಯ ಆರ್‍ಎಸ್‍ಎಸ್‍ನಲ್ಲೂ ಒಡಕು ಮೂಡುವಂತೆ ಕಾಂಚಾಣ ಕಾರಸ್ಥಾನ ನಡೆಸಿದ್ದಾನೆಂದು ಹವ್ಯಕ ವಲಯವೇ ಪಿಸುಗುಡುತ್ತಿದೆ.

ಭಟ್ಟರ ದುಡ್ಡಿನ ದಾಹ ಬಿಜೆಪಿ ಮತ್ತು ಸಂಘಪರಿವಾರದಲ್ಲಿ ಮುಜುಗರ ಮೂಡಿಸಿತ್ತು. ಭಟ್ಟರ ವ್ಯವಹಾರ ಹೀಗೆ ಮುಂದುವರೆದರೆ ಆರ್‍ಎಸ್‍ಎಸ್-ಬಿಜೆಪಿಗೆ ಕೆಟ್ಟ ಹೆಸರು ಬರುತ್ತದೆಂದು ಆತಂಕ ಶುರುವಾಗಿತ್ತು.

ಭಟ್ಟರನ್ನು ಬದಿಗೆ ಸರಿಸಲು ಸ್ಕೆಚ್ ರೆಡಿಯಾಗತೊಡಗಿದ್ದೇ ಆಗ. ಹಾಗೆ ನೋಡಿದರೆ ಭಟ್ಟರ ಬಗ್ಗೆ ಸಂಘ ಪರಿವಾರದಲ್ಲಿ ವಿರೋಧ ಉದ್ಭವವಾದದ್ದು 2014 ಲೋಕಸಭಾ ಚುನಾವಣೆ ಹೊತ್ತಲ್ಲೇ. ತನಗೆ ವಿಧೇಯತೆ ತೋರದ ಮಾಜಿ ಶಿಷ್ಯ ನಳಿನ್‍ಕುಮಾರ್ ಕಟೀಲ್‍ಗೆ ಮತ್ತೆ ಎಂಪಿ ಟಿಕೆಟ್ ಕೊಡುವ ಮನಸ್ಸು ಭಟ್ಟರಿಗೆ ಇರಲಿಲ್ಲ. ಹಾಗಾಗಿ ಆತನ ಅನೈತಿಕ ಪುರಾಣವೊಂದು ಬೀದಿಗೆ ಬರುವಂತೆ ತನ್ನ ಹಿಂಬಾಲಕರ ಮೂಲಕ ಭಟ್ಟರು ನೋಡಿಕೊಂಡಿದ್ದರು.

ಭಟ್ಟರ ಈ ಕಿತಾಪತಿಯನ್ನು ಆರ್‍ಎಸ್‍ಎಸ್‍ನ ದೊಡ್ಡವರಿಗೆ ಮನಮುಟ್ಟುವಂತೆ ವಿವರಿಸಿದ್ದ ಕಟೀಲ್ ಗುರು ವಿರುದ್ಧ ಸರಿಯಾಗೇ ಪಿಟ್ಟಿಂಗ್ ಇಟ್ಟು ಮತ್ತೆ ಟಿಕೆಟ್ ತಂದಿದ್ದರು. ಈ ಅಸಮಾಧಾನ ಹೆಚ್ಚಾಗುತ್ತಾ ಹೋಯಿತು. ಭಟ್ಟರ ಹಣಿಯಲು ಪ್ಲಾನ್ ಹಾಕಿಕೊಂಡಿದ್ದ ಪರಿವಾರಿಗಳು ಕಟೀಲ್‍ನ ಛೂಬಿಟ್ಟರು. ಆತ ಹೇಳಿದವರಿಗೆ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಟಿಕೆಟ್ ಕೊಡಲಾಯಿತು. ಭಟ್ಟರ ಮಾತು ನಡೆಯಲಿಲ್ಲ. ಮುಗಿದ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನಳಿನ್‍ಗೆ ಟಿಕೆಟ್ ತಪ್ಪಿಸಲು ಭಟ್ಟರು ತಿಪ್ಪರಲಾಗ ಹಾಕಿದರು. ಭಟ್ಟರ ಹಣಿಯಲು ಇದೇ ಸರಿಯಾದ ಸಮಯ ಎಂದೆಣಿಸಿದ್ದ ಕೇಸರಿ ಚಿಂತಕರ ತಂಡ ಕಟೀಲ್‍ನನ್ನೇ ಅಭ್ಯರ್ಥಿ ಮಾಡಿದರು. ಕೆರಳಿದ ಕಲ್ಲಡ್ಕ ಭಟ್ಟರು ಬಿಜೆಪಿ ಪ್ರಚಾರಕ್ಕೆ ಹೋಗಲಿಲ್ಲ.
ಕಟೀಲ್ ವಿರುದ್ಧ ರಹಸ್ಯ ಕಾರ್ಯಾಚರಣೆ ನಡೆಸಿದರು. ಮೋದಿ ಮೇಲೆ ಪಕ್ಷ ಅವಲಂಬಿಸಿರುವುದು ಅಪಾಯಕಾರಿ ಎಂದು ಸ್ಟೇಟ್‍ಮೆಂಟ್ ಒಗಾಯಿಸಿದರು. ಹಿಂದುತ್ವದ ಪ್ರಶ್ನೆ ಬಂದಾಗ ನಳಿನ್‍ಗಿಂತ ಕಾಂಗ್ರೆಸ್ ಹುರಿಯಾಳು ಮಿಥುನ್ ರೈನೇ ಬೆಟರ್ ಎಂದು ಹೇಳಿದರು. ಈ ವೀಡಿಯೊ ವೈರಲ್ ಆಯಿತು. ನಳಿನ್‍ಗೆ ದೊಡ್ಡ ಹೊಡೆತ ಕೊಟ್ಟಿತು. ಭಟ್ಟರಿಗೆ ಬುದ್ಧಿ ಕಲಿಸಬೇಕೆಂಬ ಹಠದಿಂದ ಕೇಸರಿಪಡೆಯೂ ವ್ಯವಸ್ಥಿತವಾಗಿ ಕೆಲಸ ಮಾಡಿದೆ. ಆದರೆ ನಳಿನ್ ದಂಡಪಿಂಡ ಸಂಸದನೆಂಬ ಅಸಮಾಧಾನ ಮತ್ತು ಭಟ್ಟರ ಅಸಹಕಾರ ಕಾಂಗ್ರೆಸ್‍ಗೆ ವರವಾಗಿದೆ. ಹೀಗಾಗಿ ಕತ್ತುಕತ್ತಿನ ಹೋರಾಟ ನಡೆದಿದೆ. ಯಾರು ಬೇಕಿದ್ದರೂ ಗೆಲ್ಲಬಹುದೆಂಬ ಪರಿಸ್ಥಿತಿ ಇರುವುದರಿಂದ ಬೆಟ್ಟಿಂಗ್ ಸಹ ನಡೆಯುತ್ತಿಲ್ಲ.

ಒಂದಂತೂ ಖರೆ. ಈ ಪಾರ್ಲಿಮೆಂಟ್ ಎಲೆಕ್ಷನ್ ಭಟ್ಟರನ್ನು ಬಿಜೆಪಿ-ಆರ್‍ಎಸ್‍ಎಸ್‍ನಲ್ಲಿ ಮೂಲೆಗುಂಪು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯದ ಪರಿಸ್ಥಿತಿಯಲ್ಲಿ ಇದು ಒಂದು ಒಳ್ಳೆಯ ಉದಾಹರಣೆ.
    ಪಾಪದ ಕೊಡ ತುಂಬಿದ ನಂತರ ಯಾರೂ ಉಳಿಯಬಾರದು

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....