Homeಕರ್ನಾಟಕಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

- Advertisement -
- Advertisement -

ಕಲ್ಲಡ್ಕ ಪ್ರಭಾಕರ ಭಟ್ಟರ ಯಜಮಾನಿಕೆಯ ವಿದ್ಯಾಸಂಸ್ಥೆಗಳು ಒಂದರ ಹಿಂದೊಂದರಂತೆ ಸ್ಪರ್ಧೆಗೆ ಬಿದ್ದಂತೆ ವಿಕೃತಿ ಮೂಲಕವೇ ಲೋಕ ಪ್ರಸಿದ್ಧವಾಗುತ್ತಿವೆ! ಕಲ್ಲಡ್ಕದಲ್ಲಿ ಭಟ್ಟರು ನಡೆಸುವ ಶ್ರೀರಾಮ ವಿದ್ಯಾಕೇಂದ್ರದ ಮುಗ್ಧ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ಗುಂಬಜಗಳನ್ನು ರಣೋತ್ಸಾಹದಲ್ಲಿ ಉರುಳಿಸುವ “ಪ್ರಹಸನ” ಆಡಿಸಲಾಗಿದೆ! ಅಲ್ಲಿಗೆ ಹಿಂದೂತ್ವದ ಹರಿಕಾರ ಕಲ್ಲಡ್ಕ ಭಟ್ಟರು ಪ್ರಾಂಜಲ ಮನಸ್ಸಿನ ಮಕ್ಕಳ ಹೃದಯದಲ್ಲಿ ಕಾರ್ಕೋಟಕ ವಿಷ ತುಂಬುವ ಕಾರ್ಯದಲ್ಲಿ ತಲ್ಲೀನನಾಗಿರುವುದು ಪಕ್ಕಾ ಆಗಿಹೋಗಿದೆ…

ಕಲ್ಲಡ್ಕದ ಶ್ರೀರಾಮಶಾಲೆಯ ಪ್ರತಿ ವರ್ಷದ ಕ್ರೀಡೋತ್ಸವದಲ್ಲಿ ಯಾವುದಾದರೊಂದು ಮತಾಂಧ ಮಸಲತ್ತಿನ ಕಾರ್ಯಕ್ರಮ ಮಾಡಿಸದಿದ್ದರೆ ಭಟ್ಟರಿಗೆ ನಿದ್ದೆಯೇ ಬೀಳುವುದಿಲ್ಲ. ಕೊಲ್ಲೂರು ದೇವಳದ ಹುಂಡಿ ಹಣ ವಿದ್ಯಾರ್ಥಿಗಳ ಉದ್ಧಾರದ ನೆಪದಲ್ಲಿ ಸ್ವಾಹಾ ಮಾಡುತ್ತಿದ್ದ ಭಟ್ಟರು, ಆ ಅನುದಾನ ನಿಂತಾಗ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ರಮಾನಾಥ ರೈನನ್ನು ಧರ್ಮ ಭ್ರಷ್ಟನೆಂಬಂತೆ ಬಿಂಬಿಸಿ ಕಳೆದ ವರ್ಷದ ಕ್ರೀಡಾ ಉತ್ಸವದಲ್ಲಿ “ಆಟ” ಆಡಿಸಿದ್ದ. ಈ ಬಾರಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಠಿ ನಾಟಕ ವಿದ್ಯಾರ್ಥಿಗಳಿಂದ ಮಾಡಿಸಿ ಭಟ್ಟರು ಕೇಕೆ ಹಾಕಿದ್ದಾರೆ. ಕೇಂದ್ರದ ಗೊಬ್ಬರ ಮಂತ್ರಿ ಸದಾನಂದ ಗೌಡ ಮತ್ತು ಪಾಂಡಿಚೇರಿ ಲೆಫ್ಟೆನೆಂಟ್ ಗವರ್ನರ್ ಕಿರಣ್‍ಬೇಡಿ ಮುಖ್ಯ ಅತಿಥಿಗಳಾಗಿದ್ದ ಈ ಕಾರ್ಯಕ್ರಮದಲ್ಲಿ ಕೇಸರಿ-ಬಿಳಿ ಬಣ್ಣದ ಕರಸೇವಕ ವೇಷದಲ್ಲಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ರೋಷಾವೇಷದಲ್ಲಿ ಬಾಬರಿ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ.

ತೀರಾ ಅಸಹ್ಯವೆಂದರೆ, ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಸಹ ಈ ಕಾನೂನುಬಾಹಿರ ಆಟಾಟೋಪ ಆಸ್ವಾದಿಸಿದ್ದಾರೆ. ಅಷ್ಟೇ ಅಲ್ಲ, ಕಲ್ಲಡ್ಕ ಭಟ್ಟರ ತರಬೇತಿಯಲ್ಲಿ ದಾರಿ ತಪ್ಪುತ್ತಿರುವ ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಟ್ವೀಟ್ ಸಹ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಧರ್ಮಸೂಕ್ಷ್ಮ ‘ಮನರಂಜನೆ’ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆ ಕಣ್ಣು-ಬಾಯಿ ಬಿಟ್ಟುಕೊಂಡು ನೋಡಿತೇ ವಿನಃ ಇದು ಅನಾಹುತಕಾರಿ ಅತಿರೇಕದ ಮಿಮಿಕ್ರಿ ಎಂದು ತಡೆಯುವ ಕರ್ತವ್ಯ ಪ್ರಜ್ಞೆ ಪ್ರದರ್ಶಿಸಲಿಲ್ಲ!! ಕಲ್ಲಡ್ಕ ಭಟ್ಟರ ಅಡಿಯಾಳಿನಂತಿರುವ ಶ್ರೀರಾಮ ಶಾಲೆಯಲ್ಲಿ ಈ ವಿಧ್ವಂಸಕತೆಗೂ ಮೊದಲು ಎಲ್.ಕೆ.ಆಡ್ವಾಣಿ ಹಿಂದೆ ಮಾಡಿದ್ದ ರಥಯಾತ್ರೆ ಕಿತಾಪತಿಯ ಅಣುಕು ಪ್ರದರ್ಶನವೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಮಾಡಿಸಲಾಯಿತ್ತು.

ಕಲ್ಲಡ್ಕ ಭಟ್ಟರ ಧರ್ಮಕಾರಣಕ್ಕಾಗಿ ಶ್ರೀರಾಮ ಶಾಲೆಯಲ್ಲಿ ಕಲಿಯುವ ಮಕ್ಕಳು ದ್ವೇಷಾಸೂಯೆ-ಹಿಂಸೋನ್ಮಾದದ ಮನಃಸ್ಥಿತಿಯಲ್ಲಿ ಬೆಳೆಯಬೇಕಾಗಿ ಬಂದಿರುವುದು ದುರಂತ. ಬಾಸ್‍ನ ಸಂಪ್ರೀತಗೊಳಿಸಲು ಮಕ್ಕಳಿಗೆ ಮುಸ್ಲಿಮರ ದ್ವೇಷಿಸುವ, ಅಟ್ಟಾಡಿಸಿ ಹೊಡೆಯುವ “ವಿದ್ಯೆ” ಬೋಧಿಸುತ್ತಿರುವ ಶ್ರೀರಾಮ ಶಾಲೆಯ ಶಿಕ್ಷಕ ಗಣ ಅವರಿಗರಿವಿಲ್ಲದೆ ಸಮಾಜದ ಯುವಪೀಳಿಗೆಯನ್ನು ಸಮಾಜಘಾತುಕರಾಗಿ ತಯಾರಿಸುತ್ತಿದೆ. ಅಸಹಿಷ್ಣುತೆಯ ತರಬೇತಿ ಪಡೆಯುವ ಮಗು ಮುಂದೆ ಸಾಬರಿಗೇ ಘಾಸಿಗೊಳಿಸಬೇಕೆಂದೇನೂ ಇಲ್ಲ. ಭಿನ್ನಮತ ಬಂದಾಗ ಆ ಪಾಖಂಡಿ ಮಗು ಒಡಹುಟ್ಟಿದವರನ್ನೋ, ಸ್ವಂತ ಧರ್ಮದವರನ್ನೋ ಹಿಂಸಿಸಲು ಹಿಂಜರಿಯದು. ಇದು ಸರಳ ಸಮಾಜ ಶಾಸ್ತ್ರ. ಪಕ್ಕಾ ಮನೋವಿಜ್ಞಾನ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಶ್ರೀರಾಮ ಶಾಲೆಯ ಮಕ್ಕಳ ತಲೆಯಲ್ಲಿ ತುಂಬುತ್ತಿರುವ ಧರ್ಮ ಪಾಠ ಹುಲಿ ಸವಾರಿ ಆಗುವುದು ಗ್ಯಾರಂಟಿ!!

ಇವತ್ತು ಕರಾವಳಿಯಲ್ಲಿ ಆಗುತ್ತಿರುವುದು ಹಿಂದೂ ಧರ್ಮ ರಕ್ಷಣೆ ಸ್ವಧರ್ಮದವರಿಗೇ ತಿರುಗುಬಾಣವಾಗುತ್ತಿದೆ. ದನ ಸಾಗಿಸುತ್ತಾರೆಂಬ ಅನುಮಾನದಲ್ಲಿ ಪಾಪದ ಹಿಂದೂ ಹುಡುಗರೇ ಹತರಾಗಿದ್ದಾರೆ. ಸಹಪಾಠಿಗಳೊಂದಿಗೆ ಮಾತಾಡಿದರೂ ಸಾಕು, ಹಿಂದೂ ಹುಡುಗಿಯರು ವ್ಯಭಿಚಾರಿಣಿ ಪಟ್ಟ ಪಡೆದು ಹಿಂಸೆ-ಹಲ್ಲೆ ಅನುಭವಿಸಬೇಕಾಗಿ ಬಂದಿದೆ. ಹಲವು ಹಿಂದೂ ಹುಡುಗಿಯರ ಬದುಕು ಅನೈತಿಕ ಪೊಲೀಸ್‍ಗಿರಿಯಿಂದ ಬರ್ಬಾದಾಗಿ ಹೋಗಿದೆ. ಶ್ರೀರಾಮ ಶಾಲೆಯಲ್ಲಿ ಕಲಿಯುತ್ತಿರುವ ಮಗು ಅನಾಹುತಕಾರಿ ಅನೈತಿಕ ಪೊಲೀಸ್ ಆಗುತ್ತದೆಯೇ ಹೊರತು ಸಂಯಮ-ಸಹಬಾಳ್ವೆಯ ನೈತಿಕ ಶಿಷ್ಟಾಚಾರದ ಪ್ರಜೆಯಾಗಲು ಹೇಗೆ ಸಾಧ್ಯ? ಬೇವು ಬಿತ್ತಿ ಮಾವು ಬೇಕೆಂದರೆ ಹೇಗೆ?

ಭಟ್ಟರ ಆಟ-ಹೂಟಗಳನ್ನು ಶ್ರೀರಾಮ ಶಾಲೆ, ವಿವೇಕಾನಂದ ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು. ಭಟ್ಟರ ಶಾಲೆಯಲ್ಲಿ ಕೊಡುತ್ತಿರುವ ಅಸಹಿಷ್ಣುತೆ, ವ್ಯಗ್ರತೆ, ಸಂಘಟಿತ ಅಪರಾಧ ಕಲೆಯ ತರಬೇತಿಯ ಅಡ್ಡ ಪರಿಣಾಮ ಆಗುವುದು ತಮ್ಮ ಕುಂಟುಂಬದಲ್ಲೇ ಎಂಬುದು ಪಾಲಕರಿಗೆ ಅರಿವಾಗಬೇಕಿದೆ. ಶಾಲೆಯಂಥ ತೀರಾ ಸೂಕ್ಷ್ಮ ಮನಸ್ಸುಗಳಿರುವಲ್ಲಿ ಧ್ವಂಸ-ದ್ವೇಷದ ಕೇಸರಿ ಕಾರ್ಯಕ್ರಮ ನಡೆಸಿದ ಕಲ್ಲಡ್ಕ ಭಟ್ಟರಿಗೆ ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಮಂಗಳಾರತಿ ಆಗುತ್ತಿದೆ. ಭಟ್ಟರ ಮೇಲೆ ಕೇಸೇನೊ ದಾಖಲಾಗಿದೆ. ಆದರೆ, ಬಿಜೆಪಿ ಸರ್ಕಾರಕ್ಕೆ ಭಟ್ಟರಂತವರ ಕೋಮು ಅಜೆಂಡಾ ಅರ್ಥವಾದಷ್ಟು ಸಲೀಸಾಗಿ ಮಕ್ಕಳ ಮನೋಸಂಕೀರ್ಣತೆಯ ಮೇಲಾಗುತ್ತಿರುವ ಸೂಕ್ಷ್ಮ ಎಲ್ಲಿ ಅರ್ಥವಾದೀತು. ಪ್ರಕರಣ ಗಟ್ಟಿಯಾಗಿ ನಿಲ್ಲುವ ಸಂಭವವೇ ಇಲ್ಲ. ಆದರೆ ತಮ್ಮ ಮಕ್ಕಳು ರೂಪುಗೊಳ್ಳುತ್ತಿರುವ ಭಯಾನಕ ಭವಿಷ್ಯವನ್ನು ಈಗ ಹೆತ್ತವರೇ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆಯಷ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...