Homeಕರ್ನಾಟಕಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

- Advertisement -
- Advertisement -

ಕಲ್ಲಡ್ಕ ಪ್ರಭಾಕರ ಭಟ್ಟರ ಯಜಮಾನಿಕೆಯ ವಿದ್ಯಾಸಂಸ್ಥೆಗಳು ಒಂದರ ಹಿಂದೊಂದರಂತೆ ಸ್ಪರ್ಧೆಗೆ ಬಿದ್ದಂತೆ ವಿಕೃತಿ ಮೂಲಕವೇ ಲೋಕ ಪ್ರಸಿದ್ಧವಾಗುತ್ತಿವೆ! ಕಲ್ಲಡ್ಕದಲ್ಲಿ ಭಟ್ಟರು ನಡೆಸುವ ಶ್ರೀರಾಮ ವಿದ್ಯಾಕೇಂದ್ರದ ಮುಗ್ಧ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ಗುಂಬಜಗಳನ್ನು ರಣೋತ್ಸಾಹದಲ್ಲಿ ಉರುಳಿಸುವ “ಪ್ರಹಸನ” ಆಡಿಸಲಾಗಿದೆ! ಅಲ್ಲಿಗೆ ಹಿಂದೂತ್ವದ ಹರಿಕಾರ ಕಲ್ಲಡ್ಕ ಭಟ್ಟರು ಪ್ರಾಂಜಲ ಮನಸ್ಸಿನ ಮಕ್ಕಳ ಹೃದಯದಲ್ಲಿ ಕಾರ್ಕೋಟಕ ವಿಷ ತುಂಬುವ ಕಾರ್ಯದಲ್ಲಿ ತಲ್ಲೀನನಾಗಿರುವುದು ಪಕ್ಕಾ ಆಗಿಹೋಗಿದೆ…

ಕಲ್ಲಡ್ಕದ ಶ್ರೀರಾಮಶಾಲೆಯ ಪ್ರತಿ ವರ್ಷದ ಕ್ರೀಡೋತ್ಸವದಲ್ಲಿ ಯಾವುದಾದರೊಂದು ಮತಾಂಧ ಮಸಲತ್ತಿನ ಕಾರ್ಯಕ್ರಮ ಮಾಡಿಸದಿದ್ದರೆ ಭಟ್ಟರಿಗೆ ನಿದ್ದೆಯೇ ಬೀಳುವುದಿಲ್ಲ. ಕೊಲ್ಲೂರು ದೇವಳದ ಹುಂಡಿ ಹಣ ವಿದ್ಯಾರ್ಥಿಗಳ ಉದ್ಧಾರದ ನೆಪದಲ್ಲಿ ಸ್ವಾಹಾ ಮಾಡುತ್ತಿದ್ದ ಭಟ್ಟರು, ಆ ಅನುದಾನ ನಿಂತಾಗ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ರಮಾನಾಥ ರೈನನ್ನು ಧರ್ಮ ಭ್ರಷ್ಟನೆಂಬಂತೆ ಬಿಂಬಿಸಿ ಕಳೆದ ವರ್ಷದ ಕ್ರೀಡಾ ಉತ್ಸವದಲ್ಲಿ “ಆಟ” ಆಡಿಸಿದ್ದ. ಈ ಬಾರಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಠಿ ನಾಟಕ ವಿದ್ಯಾರ್ಥಿಗಳಿಂದ ಮಾಡಿಸಿ ಭಟ್ಟರು ಕೇಕೆ ಹಾಕಿದ್ದಾರೆ. ಕೇಂದ್ರದ ಗೊಬ್ಬರ ಮಂತ್ರಿ ಸದಾನಂದ ಗೌಡ ಮತ್ತು ಪಾಂಡಿಚೇರಿ ಲೆಫ್ಟೆನೆಂಟ್ ಗವರ್ನರ್ ಕಿರಣ್‍ಬೇಡಿ ಮುಖ್ಯ ಅತಿಥಿಗಳಾಗಿದ್ದ ಈ ಕಾರ್ಯಕ್ರಮದಲ್ಲಿ ಕೇಸರಿ-ಬಿಳಿ ಬಣ್ಣದ ಕರಸೇವಕ ವೇಷದಲ್ಲಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ರೋಷಾವೇಷದಲ್ಲಿ ಬಾಬರಿ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ.

ತೀರಾ ಅಸಹ್ಯವೆಂದರೆ, ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಸಹ ಈ ಕಾನೂನುಬಾಹಿರ ಆಟಾಟೋಪ ಆಸ್ವಾದಿಸಿದ್ದಾರೆ. ಅಷ್ಟೇ ಅಲ್ಲ, ಕಲ್ಲಡ್ಕ ಭಟ್ಟರ ತರಬೇತಿಯಲ್ಲಿ ದಾರಿ ತಪ್ಪುತ್ತಿರುವ ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಟ್ವೀಟ್ ಸಹ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಧರ್ಮಸೂಕ್ಷ್ಮ ‘ಮನರಂಜನೆ’ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆ ಕಣ್ಣು-ಬಾಯಿ ಬಿಟ್ಟುಕೊಂಡು ನೋಡಿತೇ ವಿನಃ ಇದು ಅನಾಹುತಕಾರಿ ಅತಿರೇಕದ ಮಿಮಿಕ್ರಿ ಎಂದು ತಡೆಯುವ ಕರ್ತವ್ಯ ಪ್ರಜ್ಞೆ ಪ್ರದರ್ಶಿಸಲಿಲ್ಲ!! ಕಲ್ಲಡ್ಕ ಭಟ್ಟರ ಅಡಿಯಾಳಿನಂತಿರುವ ಶ್ರೀರಾಮ ಶಾಲೆಯಲ್ಲಿ ಈ ವಿಧ್ವಂಸಕತೆಗೂ ಮೊದಲು ಎಲ್.ಕೆ.ಆಡ್ವಾಣಿ ಹಿಂದೆ ಮಾಡಿದ್ದ ರಥಯಾತ್ರೆ ಕಿತಾಪತಿಯ ಅಣುಕು ಪ್ರದರ್ಶನವೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಮಾಡಿಸಲಾಯಿತ್ತು.

ಕಲ್ಲಡ್ಕ ಭಟ್ಟರ ಧರ್ಮಕಾರಣಕ್ಕಾಗಿ ಶ್ರೀರಾಮ ಶಾಲೆಯಲ್ಲಿ ಕಲಿಯುವ ಮಕ್ಕಳು ದ್ವೇಷಾಸೂಯೆ-ಹಿಂಸೋನ್ಮಾದದ ಮನಃಸ್ಥಿತಿಯಲ್ಲಿ ಬೆಳೆಯಬೇಕಾಗಿ ಬಂದಿರುವುದು ದುರಂತ. ಬಾಸ್‍ನ ಸಂಪ್ರೀತಗೊಳಿಸಲು ಮಕ್ಕಳಿಗೆ ಮುಸ್ಲಿಮರ ದ್ವೇಷಿಸುವ, ಅಟ್ಟಾಡಿಸಿ ಹೊಡೆಯುವ “ವಿದ್ಯೆ” ಬೋಧಿಸುತ್ತಿರುವ ಶ್ರೀರಾಮ ಶಾಲೆಯ ಶಿಕ್ಷಕ ಗಣ ಅವರಿಗರಿವಿಲ್ಲದೆ ಸಮಾಜದ ಯುವಪೀಳಿಗೆಯನ್ನು ಸಮಾಜಘಾತುಕರಾಗಿ ತಯಾರಿಸುತ್ತಿದೆ. ಅಸಹಿಷ್ಣುತೆಯ ತರಬೇತಿ ಪಡೆಯುವ ಮಗು ಮುಂದೆ ಸಾಬರಿಗೇ ಘಾಸಿಗೊಳಿಸಬೇಕೆಂದೇನೂ ಇಲ್ಲ. ಭಿನ್ನಮತ ಬಂದಾಗ ಆ ಪಾಖಂಡಿ ಮಗು ಒಡಹುಟ್ಟಿದವರನ್ನೋ, ಸ್ವಂತ ಧರ್ಮದವರನ್ನೋ ಹಿಂಸಿಸಲು ಹಿಂಜರಿಯದು. ಇದು ಸರಳ ಸಮಾಜ ಶಾಸ್ತ್ರ. ಪಕ್ಕಾ ಮನೋವಿಜ್ಞಾನ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಶ್ರೀರಾಮ ಶಾಲೆಯ ಮಕ್ಕಳ ತಲೆಯಲ್ಲಿ ತುಂಬುತ್ತಿರುವ ಧರ್ಮ ಪಾಠ ಹುಲಿ ಸವಾರಿ ಆಗುವುದು ಗ್ಯಾರಂಟಿ!!

ಇವತ್ತು ಕರಾವಳಿಯಲ್ಲಿ ಆಗುತ್ತಿರುವುದು ಹಿಂದೂ ಧರ್ಮ ರಕ್ಷಣೆ ಸ್ವಧರ್ಮದವರಿಗೇ ತಿರುಗುಬಾಣವಾಗುತ್ತಿದೆ. ದನ ಸಾಗಿಸುತ್ತಾರೆಂಬ ಅನುಮಾನದಲ್ಲಿ ಪಾಪದ ಹಿಂದೂ ಹುಡುಗರೇ ಹತರಾಗಿದ್ದಾರೆ. ಸಹಪಾಠಿಗಳೊಂದಿಗೆ ಮಾತಾಡಿದರೂ ಸಾಕು, ಹಿಂದೂ ಹುಡುಗಿಯರು ವ್ಯಭಿಚಾರಿಣಿ ಪಟ್ಟ ಪಡೆದು ಹಿಂಸೆ-ಹಲ್ಲೆ ಅನುಭವಿಸಬೇಕಾಗಿ ಬಂದಿದೆ. ಹಲವು ಹಿಂದೂ ಹುಡುಗಿಯರ ಬದುಕು ಅನೈತಿಕ ಪೊಲೀಸ್‍ಗಿರಿಯಿಂದ ಬರ್ಬಾದಾಗಿ ಹೋಗಿದೆ. ಶ್ರೀರಾಮ ಶಾಲೆಯಲ್ಲಿ ಕಲಿಯುತ್ತಿರುವ ಮಗು ಅನಾಹುತಕಾರಿ ಅನೈತಿಕ ಪೊಲೀಸ್ ಆಗುತ್ತದೆಯೇ ಹೊರತು ಸಂಯಮ-ಸಹಬಾಳ್ವೆಯ ನೈತಿಕ ಶಿಷ್ಟಾಚಾರದ ಪ್ರಜೆಯಾಗಲು ಹೇಗೆ ಸಾಧ್ಯ? ಬೇವು ಬಿತ್ತಿ ಮಾವು ಬೇಕೆಂದರೆ ಹೇಗೆ?

ಭಟ್ಟರ ಆಟ-ಹೂಟಗಳನ್ನು ಶ್ರೀರಾಮ ಶಾಲೆ, ವಿವೇಕಾನಂದ ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು. ಭಟ್ಟರ ಶಾಲೆಯಲ್ಲಿ ಕೊಡುತ್ತಿರುವ ಅಸಹಿಷ್ಣುತೆ, ವ್ಯಗ್ರತೆ, ಸಂಘಟಿತ ಅಪರಾಧ ಕಲೆಯ ತರಬೇತಿಯ ಅಡ್ಡ ಪರಿಣಾಮ ಆಗುವುದು ತಮ್ಮ ಕುಂಟುಂಬದಲ್ಲೇ ಎಂಬುದು ಪಾಲಕರಿಗೆ ಅರಿವಾಗಬೇಕಿದೆ. ಶಾಲೆಯಂಥ ತೀರಾ ಸೂಕ್ಷ್ಮ ಮನಸ್ಸುಗಳಿರುವಲ್ಲಿ ಧ್ವಂಸ-ದ್ವೇಷದ ಕೇಸರಿ ಕಾರ್ಯಕ್ರಮ ನಡೆಸಿದ ಕಲ್ಲಡ್ಕ ಭಟ್ಟರಿಗೆ ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಮಂಗಳಾರತಿ ಆಗುತ್ತಿದೆ. ಭಟ್ಟರ ಮೇಲೆ ಕೇಸೇನೊ ದಾಖಲಾಗಿದೆ. ಆದರೆ, ಬಿಜೆಪಿ ಸರ್ಕಾರಕ್ಕೆ ಭಟ್ಟರಂತವರ ಕೋಮು ಅಜೆಂಡಾ ಅರ್ಥವಾದಷ್ಟು ಸಲೀಸಾಗಿ ಮಕ್ಕಳ ಮನೋಸಂಕೀರ್ಣತೆಯ ಮೇಲಾಗುತ್ತಿರುವ ಸೂಕ್ಷ್ಮ ಎಲ್ಲಿ ಅರ್ಥವಾದೀತು. ಪ್ರಕರಣ ಗಟ್ಟಿಯಾಗಿ ನಿಲ್ಲುವ ಸಂಭವವೇ ಇಲ್ಲ. ಆದರೆ ತಮ್ಮ ಮಕ್ಕಳು ರೂಪುಗೊಳ್ಳುತ್ತಿರುವ ಭಯಾನಕ ಭವಿಷ್ಯವನ್ನು ಈಗ ಹೆತ್ತವರೇ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆಯಷ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...