Homeಕರ್ನಾಟಕಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

- Advertisement -
- Advertisement -

ಕಲ್ಲಡ್ಕ ಪ್ರಭಾಕರ ಭಟ್ಟರ ಯಜಮಾನಿಕೆಯ ವಿದ್ಯಾಸಂಸ್ಥೆಗಳು ಒಂದರ ಹಿಂದೊಂದರಂತೆ ಸ್ಪರ್ಧೆಗೆ ಬಿದ್ದಂತೆ ವಿಕೃತಿ ಮೂಲಕವೇ ಲೋಕ ಪ್ರಸಿದ್ಧವಾಗುತ್ತಿವೆ! ಕಲ್ಲಡ್ಕದಲ್ಲಿ ಭಟ್ಟರು ನಡೆಸುವ ಶ್ರೀರಾಮ ವಿದ್ಯಾಕೇಂದ್ರದ ಮುಗ್ಧ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ಗುಂಬಜಗಳನ್ನು ರಣೋತ್ಸಾಹದಲ್ಲಿ ಉರುಳಿಸುವ “ಪ್ರಹಸನ” ಆಡಿಸಲಾಗಿದೆ! ಅಲ್ಲಿಗೆ ಹಿಂದೂತ್ವದ ಹರಿಕಾರ ಕಲ್ಲಡ್ಕ ಭಟ್ಟರು ಪ್ರಾಂಜಲ ಮನಸ್ಸಿನ ಮಕ್ಕಳ ಹೃದಯದಲ್ಲಿ ಕಾರ್ಕೋಟಕ ವಿಷ ತುಂಬುವ ಕಾರ್ಯದಲ್ಲಿ ತಲ್ಲೀನನಾಗಿರುವುದು ಪಕ್ಕಾ ಆಗಿಹೋಗಿದೆ…

ಕಲ್ಲಡ್ಕದ ಶ್ರೀರಾಮಶಾಲೆಯ ಪ್ರತಿ ವರ್ಷದ ಕ್ರೀಡೋತ್ಸವದಲ್ಲಿ ಯಾವುದಾದರೊಂದು ಮತಾಂಧ ಮಸಲತ್ತಿನ ಕಾರ್ಯಕ್ರಮ ಮಾಡಿಸದಿದ್ದರೆ ಭಟ್ಟರಿಗೆ ನಿದ್ದೆಯೇ ಬೀಳುವುದಿಲ್ಲ. ಕೊಲ್ಲೂರು ದೇವಳದ ಹುಂಡಿ ಹಣ ವಿದ್ಯಾರ್ಥಿಗಳ ಉದ್ಧಾರದ ನೆಪದಲ್ಲಿ ಸ್ವಾಹಾ ಮಾಡುತ್ತಿದ್ದ ಭಟ್ಟರು, ಆ ಅನುದಾನ ನಿಂತಾಗ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ರಮಾನಾಥ ರೈನನ್ನು ಧರ್ಮ ಭ್ರಷ್ಟನೆಂಬಂತೆ ಬಿಂಬಿಸಿ ಕಳೆದ ವರ್ಷದ ಕ್ರೀಡಾ ಉತ್ಸವದಲ್ಲಿ “ಆಟ” ಆಡಿಸಿದ್ದ. ಈ ಬಾರಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಠಿ ನಾಟಕ ವಿದ್ಯಾರ್ಥಿಗಳಿಂದ ಮಾಡಿಸಿ ಭಟ್ಟರು ಕೇಕೆ ಹಾಕಿದ್ದಾರೆ. ಕೇಂದ್ರದ ಗೊಬ್ಬರ ಮಂತ್ರಿ ಸದಾನಂದ ಗೌಡ ಮತ್ತು ಪಾಂಡಿಚೇರಿ ಲೆಫ್ಟೆನೆಂಟ್ ಗವರ್ನರ್ ಕಿರಣ್‍ಬೇಡಿ ಮುಖ್ಯ ಅತಿಥಿಗಳಾಗಿದ್ದ ಈ ಕಾರ್ಯಕ್ರಮದಲ್ಲಿ ಕೇಸರಿ-ಬಿಳಿ ಬಣ್ಣದ ಕರಸೇವಕ ವೇಷದಲ್ಲಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ರೋಷಾವೇಷದಲ್ಲಿ ಬಾಬರಿ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ.

ತೀರಾ ಅಸಹ್ಯವೆಂದರೆ, ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಸಹ ಈ ಕಾನೂನುಬಾಹಿರ ಆಟಾಟೋಪ ಆಸ್ವಾದಿಸಿದ್ದಾರೆ. ಅಷ್ಟೇ ಅಲ್ಲ, ಕಲ್ಲಡ್ಕ ಭಟ್ಟರ ತರಬೇತಿಯಲ್ಲಿ ದಾರಿ ತಪ್ಪುತ್ತಿರುವ ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಟ್ವೀಟ್ ಸಹ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಧರ್ಮಸೂಕ್ಷ್ಮ ‘ಮನರಂಜನೆ’ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆ ಕಣ್ಣು-ಬಾಯಿ ಬಿಟ್ಟುಕೊಂಡು ನೋಡಿತೇ ವಿನಃ ಇದು ಅನಾಹುತಕಾರಿ ಅತಿರೇಕದ ಮಿಮಿಕ್ರಿ ಎಂದು ತಡೆಯುವ ಕರ್ತವ್ಯ ಪ್ರಜ್ಞೆ ಪ್ರದರ್ಶಿಸಲಿಲ್ಲ!! ಕಲ್ಲಡ್ಕ ಭಟ್ಟರ ಅಡಿಯಾಳಿನಂತಿರುವ ಶ್ರೀರಾಮ ಶಾಲೆಯಲ್ಲಿ ಈ ವಿಧ್ವಂಸಕತೆಗೂ ಮೊದಲು ಎಲ್.ಕೆ.ಆಡ್ವಾಣಿ ಹಿಂದೆ ಮಾಡಿದ್ದ ರಥಯಾತ್ರೆ ಕಿತಾಪತಿಯ ಅಣುಕು ಪ್ರದರ್ಶನವೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಮಾಡಿಸಲಾಯಿತ್ತು.

ಕಲ್ಲಡ್ಕ ಭಟ್ಟರ ಧರ್ಮಕಾರಣಕ್ಕಾಗಿ ಶ್ರೀರಾಮ ಶಾಲೆಯಲ್ಲಿ ಕಲಿಯುವ ಮಕ್ಕಳು ದ್ವೇಷಾಸೂಯೆ-ಹಿಂಸೋನ್ಮಾದದ ಮನಃಸ್ಥಿತಿಯಲ್ಲಿ ಬೆಳೆಯಬೇಕಾಗಿ ಬಂದಿರುವುದು ದುರಂತ. ಬಾಸ್‍ನ ಸಂಪ್ರೀತಗೊಳಿಸಲು ಮಕ್ಕಳಿಗೆ ಮುಸ್ಲಿಮರ ದ್ವೇಷಿಸುವ, ಅಟ್ಟಾಡಿಸಿ ಹೊಡೆಯುವ “ವಿದ್ಯೆ” ಬೋಧಿಸುತ್ತಿರುವ ಶ್ರೀರಾಮ ಶಾಲೆಯ ಶಿಕ್ಷಕ ಗಣ ಅವರಿಗರಿವಿಲ್ಲದೆ ಸಮಾಜದ ಯುವಪೀಳಿಗೆಯನ್ನು ಸಮಾಜಘಾತುಕರಾಗಿ ತಯಾರಿಸುತ್ತಿದೆ. ಅಸಹಿಷ್ಣುತೆಯ ತರಬೇತಿ ಪಡೆಯುವ ಮಗು ಮುಂದೆ ಸಾಬರಿಗೇ ಘಾಸಿಗೊಳಿಸಬೇಕೆಂದೇನೂ ಇಲ್ಲ. ಭಿನ್ನಮತ ಬಂದಾಗ ಆ ಪಾಖಂಡಿ ಮಗು ಒಡಹುಟ್ಟಿದವರನ್ನೋ, ಸ್ವಂತ ಧರ್ಮದವರನ್ನೋ ಹಿಂಸಿಸಲು ಹಿಂಜರಿಯದು. ಇದು ಸರಳ ಸಮಾಜ ಶಾಸ್ತ್ರ. ಪಕ್ಕಾ ಮನೋವಿಜ್ಞಾನ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಶ್ರೀರಾಮ ಶಾಲೆಯ ಮಕ್ಕಳ ತಲೆಯಲ್ಲಿ ತುಂಬುತ್ತಿರುವ ಧರ್ಮ ಪಾಠ ಹುಲಿ ಸವಾರಿ ಆಗುವುದು ಗ್ಯಾರಂಟಿ!!

ಇವತ್ತು ಕರಾವಳಿಯಲ್ಲಿ ಆಗುತ್ತಿರುವುದು ಹಿಂದೂ ಧರ್ಮ ರಕ್ಷಣೆ ಸ್ವಧರ್ಮದವರಿಗೇ ತಿರುಗುಬಾಣವಾಗುತ್ತಿದೆ. ದನ ಸಾಗಿಸುತ್ತಾರೆಂಬ ಅನುಮಾನದಲ್ಲಿ ಪಾಪದ ಹಿಂದೂ ಹುಡುಗರೇ ಹತರಾಗಿದ್ದಾರೆ. ಸಹಪಾಠಿಗಳೊಂದಿಗೆ ಮಾತಾಡಿದರೂ ಸಾಕು, ಹಿಂದೂ ಹುಡುಗಿಯರು ವ್ಯಭಿಚಾರಿಣಿ ಪಟ್ಟ ಪಡೆದು ಹಿಂಸೆ-ಹಲ್ಲೆ ಅನುಭವಿಸಬೇಕಾಗಿ ಬಂದಿದೆ. ಹಲವು ಹಿಂದೂ ಹುಡುಗಿಯರ ಬದುಕು ಅನೈತಿಕ ಪೊಲೀಸ್‍ಗಿರಿಯಿಂದ ಬರ್ಬಾದಾಗಿ ಹೋಗಿದೆ. ಶ್ರೀರಾಮ ಶಾಲೆಯಲ್ಲಿ ಕಲಿಯುತ್ತಿರುವ ಮಗು ಅನಾಹುತಕಾರಿ ಅನೈತಿಕ ಪೊಲೀಸ್ ಆಗುತ್ತದೆಯೇ ಹೊರತು ಸಂಯಮ-ಸಹಬಾಳ್ವೆಯ ನೈತಿಕ ಶಿಷ್ಟಾಚಾರದ ಪ್ರಜೆಯಾಗಲು ಹೇಗೆ ಸಾಧ್ಯ? ಬೇವು ಬಿತ್ತಿ ಮಾವು ಬೇಕೆಂದರೆ ಹೇಗೆ?

ಭಟ್ಟರ ಆಟ-ಹೂಟಗಳನ್ನು ಶ್ರೀರಾಮ ಶಾಲೆ, ವಿವೇಕಾನಂದ ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು. ಭಟ್ಟರ ಶಾಲೆಯಲ್ಲಿ ಕೊಡುತ್ತಿರುವ ಅಸಹಿಷ್ಣುತೆ, ವ್ಯಗ್ರತೆ, ಸಂಘಟಿತ ಅಪರಾಧ ಕಲೆಯ ತರಬೇತಿಯ ಅಡ್ಡ ಪರಿಣಾಮ ಆಗುವುದು ತಮ್ಮ ಕುಂಟುಂಬದಲ್ಲೇ ಎಂಬುದು ಪಾಲಕರಿಗೆ ಅರಿವಾಗಬೇಕಿದೆ. ಶಾಲೆಯಂಥ ತೀರಾ ಸೂಕ್ಷ್ಮ ಮನಸ್ಸುಗಳಿರುವಲ್ಲಿ ಧ್ವಂಸ-ದ್ವೇಷದ ಕೇಸರಿ ಕಾರ್ಯಕ್ರಮ ನಡೆಸಿದ ಕಲ್ಲಡ್ಕ ಭಟ್ಟರಿಗೆ ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಮಂಗಳಾರತಿ ಆಗುತ್ತಿದೆ. ಭಟ್ಟರ ಮೇಲೆ ಕೇಸೇನೊ ದಾಖಲಾಗಿದೆ. ಆದರೆ, ಬಿಜೆಪಿ ಸರ್ಕಾರಕ್ಕೆ ಭಟ್ಟರಂತವರ ಕೋಮು ಅಜೆಂಡಾ ಅರ್ಥವಾದಷ್ಟು ಸಲೀಸಾಗಿ ಮಕ್ಕಳ ಮನೋಸಂಕೀರ್ಣತೆಯ ಮೇಲಾಗುತ್ತಿರುವ ಸೂಕ್ಷ್ಮ ಎಲ್ಲಿ ಅರ್ಥವಾದೀತು. ಪ್ರಕರಣ ಗಟ್ಟಿಯಾಗಿ ನಿಲ್ಲುವ ಸಂಭವವೇ ಇಲ್ಲ. ಆದರೆ ತಮ್ಮ ಮಕ್ಕಳು ರೂಪುಗೊಳ್ಳುತ್ತಿರುವ ಭಯಾನಕ ಭವಿಷ್ಯವನ್ನು ಈಗ ಹೆತ್ತವರೇ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆಯಷ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...