Homeಕರ್ನಾಟಕಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

- Advertisement -
- Advertisement -

ಕಲ್ಲಡ್ಕ ಪ್ರಭಾಕರ ಭಟ್ಟರ ಯಜಮಾನಿಕೆಯ ವಿದ್ಯಾಸಂಸ್ಥೆಗಳು ಒಂದರ ಹಿಂದೊಂದರಂತೆ ಸ್ಪರ್ಧೆಗೆ ಬಿದ್ದಂತೆ ವಿಕೃತಿ ಮೂಲಕವೇ ಲೋಕ ಪ್ರಸಿದ್ಧವಾಗುತ್ತಿವೆ! ಕಲ್ಲಡ್ಕದಲ್ಲಿ ಭಟ್ಟರು ನಡೆಸುವ ಶ್ರೀರಾಮ ವಿದ್ಯಾಕೇಂದ್ರದ ಮುಗ್ಧ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ಗುಂಬಜಗಳನ್ನು ರಣೋತ್ಸಾಹದಲ್ಲಿ ಉರುಳಿಸುವ “ಪ್ರಹಸನ” ಆಡಿಸಲಾಗಿದೆ! ಅಲ್ಲಿಗೆ ಹಿಂದೂತ್ವದ ಹರಿಕಾರ ಕಲ್ಲಡ್ಕ ಭಟ್ಟರು ಪ್ರಾಂಜಲ ಮನಸ್ಸಿನ ಮಕ್ಕಳ ಹೃದಯದಲ್ಲಿ ಕಾರ್ಕೋಟಕ ವಿಷ ತುಂಬುವ ಕಾರ್ಯದಲ್ಲಿ ತಲ್ಲೀನನಾಗಿರುವುದು ಪಕ್ಕಾ ಆಗಿಹೋಗಿದೆ…

ಕಲ್ಲಡ್ಕದ ಶ್ರೀರಾಮಶಾಲೆಯ ಪ್ರತಿ ವರ್ಷದ ಕ್ರೀಡೋತ್ಸವದಲ್ಲಿ ಯಾವುದಾದರೊಂದು ಮತಾಂಧ ಮಸಲತ್ತಿನ ಕಾರ್ಯಕ್ರಮ ಮಾಡಿಸದಿದ್ದರೆ ಭಟ್ಟರಿಗೆ ನಿದ್ದೆಯೇ ಬೀಳುವುದಿಲ್ಲ. ಕೊಲ್ಲೂರು ದೇವಳದ ಹುಂಡಿ ಹಣ ವಿದ್ಯಾರ್ಥಿಗಳ ಉದ್ಧಾರದ ನೆಪದಲ್ಲಿ ಸ್ವಾಹಾ ಮಾಡುತ್ತಿದ್ದ ಭಟ್ಟರು, ಆ ಅನುದಾನ ನಿಂತಾಗ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ರಮಾನಾಥ ರೈನನ್ನು ಧರ್ಮ ಭ್ರಷ್ಟನೆಂಬಂತೆ ಬಿಂಬಿಸಿ ಕಳೆದ ವರ್ಷದ ಕ್ರೀಡಾ ಉತ್ಸವದಲ್ಲಿ “ಆಟ” ಆಡಿಸಿದ್ದ. ಈ ಬಾರಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಠಿ ನಾಟಕ ವಿದ್ಯಾರ್ಥಿಗಳಿಂದ ಮಾಡಿಸಿ ಭಟ್ಟರು ಕೇಕೆ ಹಾಕಿದ್ದಾರೆ. ಕೇಂದ್ರದ ಗೊಬ್ಬರ ಮಂತ್ರಿ ಸದಾನಂದ ಗೌಡ ಮತ್ತು ಪಾಂಡಿಚೇರಿ ಲೆಫ್ಟೆನೆಂಟ್ ಗವರ್ನರ್ ಕಿರಣ್‍ಬೇಡಿ ಮುಖ್ಯ ಅತಿಥಿಗಳಾಗಿದ್ದ ಈ ಕಾರ್ಯಕ್ರಮದಲ್ಲಿ ಕೇಸರಿ-ಬಿಳಿ ಬಣ್ಣದ ಕರಸೇವಕ ವೇಷದಲ್ಲಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ರೋಷಾವೇಷದಲ್ಲಿ ಬಾಬರಿ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ.

ತೀರಾ ಅಸಹ್ಯವೆಂದರೆ, ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಸಹ ಈ ಕಾನೂನುಬಾಹಿರ ಆಟಾಟೋಪ ಆಸ್ವಾದಿಸಿದ್ದಾರೆ. ಅಷ್ಟೇ ಅಲ್ಲ, ಕಲ್ಲಡ್ಕ ಭಟ್ಟರ ತರಬೇತಿಯಲ್ಲಿ ದಾರಿ ತಪ್ಪುತ್ತಿರುವ ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಟ್ವೀಟ್ ಸಹ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಧರ್ಮಸೂಕ್ಷ್ಮ ‘ಮನರಂಜನೆ’ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆ ಕಣ್ಣು-ಬಾಯಿ ಬಿಟ್ಟುಕೊಂಡು ನೋಡಿತೇ ವಿನಃ ಇದು ಅನಾಹುತಕಾರಿ ಅತಿರೇಕದ ಮಿಮಿಕ್ರಿ ಎಂದು ತಡೆಯುವ ಕರ್ತವ್ಯ ಪ್ರಜ್ಞೆ ಪ್ರದರ್ಶಿಸಲಿಲ್ಲ!! ಕಲ್ಲಡ್ಕ ಭಟ್ಟರ ಅಡಿಯಾಳಿನಂತಿರುವ ಶ್ರೀರಾಮ ಶಾಲೆಯಲ್ಲಿ ಈ ವಿಧ್ವಂಸಕತೆಗೂ ಮೊದಲು ಎಲ್.ಕೆ.ಆಡ್ವಾಣಿ ಹಿಂದೆ ಮಾಡಿದ್ದ ರಥಯಾತ್ರೆ ಕಿತಾಪತಿಯ ಅಣುಕು ಪ್ರದರ್ಶನವೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಮಾಡಿಸಲಾಯಿತ್ತು.

ಕಲ್ಲಡ್ಕ ಭಟ್ಟರ ಧರ್ಮಕಾರಣಕ್ಕಾಗಿ ಶ್ರೀರಾಮ ಶಾಲೆಯಲ್ಲಿ ಕಲಿಯುವ ಮಕ್ಕಳು ದ್ವೇಷಾಸೂಯೆ-ಹಿಂಸೋನ್ಮಾದದ ಮನಃಸ್ಥಿತಿಯಲ್ಲಿ ಬೆಳೆಯಬೇಕಾಗಿ ಬಂದಿರುವುದು ದುರಂತ. ಬಾಸ್‍ನ ಸಂಪ್ರೀತಗೊಳಿಸಲು ಮಕ್ಕಳಿಗೆ ಮುಸ್ಲಿಮರ ದ್ವೇಷಿಸುವ, ಅಟ್ಟಾಡಿಸಿ ಹೊಡೆಯುವ “ವಿದ್ಯೆ” ಬೋಧಿಸುತ್ತಿರುವ ಶ್ರೀರಾಮ ಶಾಲೆಯ ಶಿಕ್ಷಕ ಗಣ ಅವರಿಗರಿವಿಲ್ಲದೆ ಸಮಾಜದ ಯುವಪೀಳಿಗೆಯನ್ನು ಸಮಾಜಘಾತುಕರಾಗಿ ತಯಾರಿಸುತ್ತಿದೆ. ಅಸಹಿಷ್ಣುತೆಯ ತರಬೇತಿ ಪಡೆಯುವ ಮಗು ಮುಂದೆ ಸಾಬರಿಗೇ ಘಾಸಿಗೊಳಿಸಬೇಕೆಂದೇನೂ ಇಲ್ಲ. ಭಿನ್ನಮತ ಬಂದಾಗ ಆ ಪಾಖಂಡಿ ಮಗು ಒಡಹುಟ್ಟಿದವರನ್ನೋ, ಸ್ವಂತ ಧರ್ಮದವರನ್ನೋ ಹಿಂಸಿಸಲು ಹಿಂಜರಿಯದು. ಇದು ಸರಳ ಸಮಾಜ ಶಾಸ್ತ್ರ. ಪಕ್ಕಾ ಮನೋವಿಜ್ಞಾನ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಶ್ರೀರಾಮ ಶಾಲೆಯ ಮಕ್ಕಳ ತಲೆಯಲ್ಲಿ ತುಂಬುತ್ತಿರುವ ಧರ್ಮ ಪಾಠ ಹುಲಿ ಸವಾರಿ ಆಗುವುದು ಗ್ಯಾರಂಟಿ!!

ಇವತ್ತು ಕರಾವಳಿಯಲ್ಲಿ ಆಗುತ್ತಿರುವುದು ಹಿಂದೂ ಧರ್ಮ ರಕ್ಷಣೆ ಸ್ವಧರ್ಮದವರಿಗೇ ತಿರುಗುಬಾಣವಾಗುತ್ತಿದೆ. ದನ ಸಾಗಿಸುತ್ತಾರೆಂಬ ಅನುಮಾನದಲ್ಲಿ ಪಾಪದ ಹಿಂದೂ ಹುಡುಗರೇ ಹತರಾಗಿದ್ದಾರೆ. ಸಹಪಾಠಿಗಳೊಂದಿಗೆ ಮಾತಾಡಿದರೂ ಸಾಕು, ಹಿಂದೂ ಹುಡುಗಿಯರು ವ್ಯಭಿಚಾರಿಣಿ ಪಟ್ಟ ಪಡೆದು ಹಿಂಸೆ-ಹಲ್ಲೆ ಅನುಭವಿಸಬೇಕಾಗಿ ಬಂದಿದೆ. ಹಲವು ಹಿಂದೂ ಹುಡುಗಿಯರ ಬದುಕು ಅನೈತಿಕ ಪೊಲೀಸ್‍ಗಿರಿಯಿಂದ ಬರ್ಬಾದಾಗಿ ಹೋಗಿದೆ. ಶ್ರೀರಾಮ ಶಾಲೆಯಲ್ಲಿ ಕಲಿಯುತ್ತಿರುವ ಮಗು ಅನಾಹುತಕಾರಿ ಅನೈತಿಕ ಪೊಲೀಸ್ ಆಗುತ್ತದೆಯೇ ಹೊರತು ಸಂಯಮ-ಸಹಬಾಳ್ವೆಯ ನೈತಿಕ ಶಿಷ್ಟಾಚಾರದ ಪ್ರಜೆಯಾಗಲು ಹೇಗೆ ಸಾಧ್ಯ? ಬೇವು ಬಿತ್ತಿ ಮಾವು ಬೇಕೆಂದರೆ ಹೇಗೆ?

ಭಟ್ಟರ ಆಟ-ಹೂಟಗಳನ್ನು ಶ್ರೀರಾಮ ಶಾಲೆ, ವಿವೇಕಾನಂದ ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು. ಭಟ್ಟರ ಶಾಲೆಯಲ್ಲಿ ಕೊಡುತ್ತಿರುವ ಅಸಹಿಷ್ಣುತೆ, ವ್ಯಗ್ರತೆ, ಸಂಘಟಿತ ಅಪರಾಧ ಕಲೆಯ ತರಬೇತಿಯ ಅಡ್ಡ ಪರಿಣಾಮ ಆಗುವುದು ತಮ್ಮ ಕುಂಟುಂಬದಲ್ಲೇ ಎಂಬುದು ಪಾಲಕರಿಗೆ ಅರಿವಾಗಬೇಕಿದೆ. ಶಾಲೆಯಂಥ ತೀರಾ ಸೂಕ್ಷ್ಮ ಮನಸ್ಸುಗಳಿರುವಲ್ಲಿ ಧ್ವಂಸ-ದ್ವೇಷದ ಕೇಸರಿ ಕಾರ್ಯಕ್ರಮ ನಡೆಸಿದ ಕಲ್ಲಡ್ಕ ಭಟ್ಟರಿಗೆ ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಮಂಗಳಾರತಿ ಆಗುತ್ತಿದೆ. ಭಟ್ಟರ ಮೇಲೆ ಕೇಸೇನೊ ದಾಖಲಾಗಿದೆ. ಆದರೆ, ಬಿಜೆಪಿ ಸರ್ಕಾರಕ್ಕೆ ಭಟ್ಟರಂತವರ ಕೋಮು ಅಜೆಂಡಾ ಅರ್ಥವಾದಷ್ಟು ಸಲೀಸಾಗಿ ಮಕ್ಕಳ ಮನೋಸಂಕೀರ್ಣತೆಯ ಮೇಲಾಗುತ್ತಿರುವ ಸೂಕ್ಷ್ಮ ಎಲ್ಲಿ ಅರ್ಥವಾದೀತು. ಪ್ರಕರಣ ಗಟ್ಟಿಯಾಗಿ ನಿಲ್ಲುವ ಸಂಭವವೇ ಇಲ್ಲ. ಆದರೆ ತಮ್ಮ ಮಕ್ಕಳು ರೂಪುಗೊಳ್ಳುತ್ತಿರುವ ಭಯಾನಕ ಭವಿಷ್ಯವನ್ನು ಈಗ ಹೆತ್ತವರೇ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆಯಷ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...