Homeಕರ್ನಾಟಕಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

- Advertisement -
- Advertisement -

ಕಲ್ಲಡ್ಕ ಪ್ರಭಾಕರ ಭಟ್ಟರ ಯಜಮಾನಿಕೆಯ ವಿದ್ಯಾಸಂಸ್ಥೆಗಳು ಒಂದರ ಹಿಂದೊಂದರಂತೆ ಸ್ಪರ್ಧೆಗೆ ಬಿದ್ದಂತೆ ವಿಕೃತಿ ಮೂಲಕವೇ ಲೋಕ ಪ್ರಸಿದ್ಧವಾಗುತ್ತಿವೆ! ಕಲ್ಲಡ್ಕದಲ್ಲಿ ಭಟ್ಟರು ನಡೆಸುವ ಶ್ರೀರಾಮ ವಿದ್ಯಾಕೇಂದ್ರದ ಮುಗ್ಧ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ಗುಂಬಜಗಳನ್ನು ರಣೋತ್ಸಾಹದಲ್ಲಿ ಉರುಳಿಸುವ “ಪ್ರಹಸನ” ಆಡಿಸಲಾಗಿದೆ! ಅಲ್ಲಿಗೆ ಹಿಂದೂತ್ವದ ಹರಿಕಾರ ಕಲ್ಲಡ್ಕ ಭಟ್ಟರು ಪ್ರಾಂಜಲ ಮನಸ್ಸಿನ ಮಕ್ಕಳ ಹೃದಯದಲ್ಲಿ ಕಾರ್ಕೋಟಕ ವಿಷ ತುಂಬುವ ಕಾರ್ಯದಲ್ಲಿ ತಲ್ಲೀನನಾಗಿರುವುದು ಪಕ್ಕಾ ಆಗಿಹೋಗಿದೆ…

ಕಲ್ಲಡ್ಕದ ಶ್ರೀರಾಮಶಾಲೆಯ ಪ್ರತಿ ವರ್ಷದ ಕ್ರೀಡೋತ್ಸವದಲ್ಲಿ ಯಾವುದಾದರೊಂದು ಮತಾಂಧ ಮಸಲತ್ತಿನ ಕಾರ್ಯಕ್ರಮ ಮಾಡಿಸದಿದ್ದರೆ ಭಟ್ಟರಿಗೆ ನಿದ್ದೆಯೇ ಬೀಳುವುದಿಲ್ಲ. ಕೊಲ್ಲೂರು ದೇವಳದ ಹುಂಡಿ ಹಣ ವಿದ್ಯಾರ್ಥಿಗಳ ಉದ್ಧಾರದ ನೆಪದಲ್ಲಿ ಸ್ವಾಹಾ ಮಾಡುತ್ತಿದ್ದ ಭಟ್ಟರು, ಆ ಅನುದಾನ ನಿಂತಾಗ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ರಮಾನಾಥ ರೈನನ್ನು ಧರ್ಮ ಭ್ರಷ್ಟನೆಂಬಂತೆ ಬಿಂಬಿಸಿ ಕಳೆದ ವರ್ಷದ ಕ್ರೀಡಾ ಉತ್ಸವದಲ್ಲಿ “ಆಟ” ಆಡಿಸಿದ್ದ. ಈ ಬಾರಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಠಿ ನಾಟಕ ವಿದ್ಯಾರ್ಥಿಗಳಿಂದ ಮಾಡಿಸಿ ಭಟ್ಟರು ಕೇಕೆ ಹಾಕಿದ್ದಾರೆ. ಕೇಂದ್ರದ ಗೊಬ್ಬರ ಮಂತ್ರಿ ಸದಾನಂದ ಗೌಡ ಮತ್ತು ಪಾಂಡಿಚೇರಿ ಲೆಫ್ಟೆನೆಂಟ್ ಗವರ್ನರ್ ಕಿರಣ್‍ಬೇಡಿ ಮುಖ್ಯ ಅತಿಥಿಗಳಾಗಿದ್ದ ಈ ಕಾರ್ಯಕ್ರಮದಲ್ಲಿ ಕೇಸರಿ-ಬಿಳಿ ಬಣ್ಣದ ಕರಸೇವಕ ವೇಷದಲ್ಲಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ರೋಷಾವೇಷದಲ್ಲಿ ಬಾಬರಿ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ.

ತೀರಾ ಅಸಹ್ಯವೆಂದರೆ, ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಸಹ ಈ ಕಾನೂನುಬಾಹಿರ ಆಟಾಟೋಪ ಆಸ್ವಾದಿಸಿದ್ದಾರೆ. ಅಷ್ಟೇ ಅಲ್ಲ, ಕಲ್ಲಡ್ಕ ಭಟ್ಟರ ತರಬೇತಿಯಲ್ಲಿ ದಾರಿ ತಪ್ಪುತ್ತಿರುವ ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಟ್ವೀಟ್ ಸಹ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಧರ್ಮಸೂಕ್ಷ್ಮ ‘ಮನರಂಜನೆ’ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ವ್ಯವಸ್ಥೆ ಕಣ್ಣು-ಬಾಯಿ ಬಿಟ್ಟುಕೊಂಡು ನೋಡಿತೇ ವಿನಃ ಇದು ಅನಾಹುತಕಾರಿ ಅತಿರೇಕದ ಮಿಮಿಕ್ರಿ ಎಂದು ತಡೆಯುವ ಕರ್ತವ್ಯ ಪ್ರಜ್ಞೆ ಪ್ರದರ್ಶಿಸಲಿಲ್ಲ!! ಕಲ್ಲಡ್ಕ ಭಟ್ಟರ ಅಡಿಯಾಳಿನಂತಿರುವ ಶ್ರೀರಾಮ ಶಾಲೆಯಲ್ಲಿ ಈ ವಿಧ್ವಂಸಕತೆಗೂ ಮೊದಲು ಎಲ್.ಕೆ.ಆಡ್ವಾಣಿ ಹಿಂದೆ ಮಾಡಿದ್ದ ರಥಯಾತ್ರೆ ಕಿತಾಪತಿಯ ಅಣುಕು ಪ್ರದರ್ಶನವೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಮಾಡಿಸಲಾಯಿತ್ತು.

ಕಲ್ಲಡ್ಕ ಭಟ್ಟರ ಧರ್ಮಕಾರಣಕ್ಕಾಗಿ ಶ್ರೀರಾಮ ಶಾಲೆಯಲ್ಲಿ ಕಲಿಯುವ ಮಕ್ಕಳು ದ್ವೇಷಾಸೂಯೆ-ಹಿಂಸೋನ್ಮಾದದ ಮನಃಸ್ಥಿತಿಯಲ್ಲಿ ಬೆಳೆಯಬೇಕಾಗಿ ಬಂದಿರುವುದು ದುರಂತ. ಬಾಸ್‍ನ ಸಂಪ್ರೀತಗೊಳಿಸಲು ಮಕ್ಕಳಿಗೆ ಮುಸ್ಲಿಮರ ದ್ವೇಷಿಸುವ, ಅಟ್ಟಾಡಿಸಿ ಹೊಡೆಯುವ “ವಿದ್ಯೆ” ಬೋಧಿಸುತ್ತಿರುವ ಶ್ರೀರಾಮ ಶಾಲೆಯ ಶಿಕ್ಷಕ ಗಣ ಅವರಿಗರಿವಿಲ್ಲದೆ ಸಮಾಜದ ಯುವಪೀಳಿಗೆಯನ್ನು ಸಮಾಜಘಾತುಕರಾಗಿ ತಯಾರಿಸುತ್ತಿದೆ. ಅಸಹಿಷ್ಣುತೆಯ ತರಬೇತಿ ಪಡೆಯುವ ಮಗು ಮುಂದೆ ಸಾಬರಿಗೇ ಘಾಸಿಗೊಳಿಸಬೇಕೆಂದೇನೂ ಇಲ್ಲ. ಭಿನ್ನಮತ ಬಂದಾಗ ಆ ಪಾಖಂಡಿ ಮಗು ಒಡಹುಟ್ಟಿದವರನ್ನೋ, ಸ್ವಂತ ಧರ್ಮದವರನ್ನೋ ಹಿಂಸಿಸಲು ಹಿಂಜರಿಯದು. ಇದು ಸರಳ ಸಮಾಜ ಶಾಸ್ತ್ರ. ಪಕ್ಕಾ ಮನೋವಿಜ್ಞಾನ ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಶ್ರೀರಾಮ ಶಾಲೆಯ ಮಕ್ಕಳ ತಲೆಯಲ್ಲಿ ತುಂಬುತ್ತಿರುವ ಧರ್ಮ ಪಾಠ ಹುಲಿ ಸವಾರಿ ಆಗುವುದು ಗ್ಯಾರಂಟಿ!!

ಇವತ್ತು ಕರಾವಳಿಯಲ್ಲಿ ಆಗುತ್ತಿರುವುದು ಹಿಂದೂ ಧರ್ಮ ರಕ್ಷಣೆ ಸ್ವಧರ್ಮದವರಿಗೇ ತಿರುಗುಬಾಣವಾಗುತ್ತಿದೆ. ದನ ಸಾಗಿಸುತ್ತಾರೆಂಬ ಅನುಮಾನದಲ್ಲಿ ಪಾಪದ ಹಿಂದೂ ಹುಡುಗರೇ ಹತರಾಗಿದ್ದಾರೆ. ಸಹಪಾಠಿಗಳೊಂದಿಗೆ ಮಾತಾಡಿದರೂ ಸಾಕು, ಹಿಂದೂ ಹುಡುಗಿಯರು ವ್ಯಭಿಚಾರಿಣಿ ಪಟ್ಟ ಪಡೆದು ಹಿಂಸೆ-ಹಲ್ಲೆ ಅನುಭವಿಸಬೇಕಾಗಿ ಬಂದಿದೆ. ಹಲವು ಹಿಂದೂ ಹುಡುಗಿಯರ ಬದುಕು ಅನೈತಿಕ ಪೊಲೀಸ್‍ಗಿರಿಯಿಂದ ಬರ್ಬಾದಾಗಿ ಹೋಗಿದೆ. ಶ್ರೀರಾಮ ಶಾಲೆಯಲ್ಲಿ ಕಲಿಯುತ್ತಿರುವ ಮಗು ಅನಾಹುತಕಾರಿ ಅನೈತಿಕ ಪೊಲೀಸ್ ಆಗುತ್ತದೆಯೇ ಹೊರತು ಸಂಯಮ-ಸಹಬಾಳ್ವೆಯ ನೈತಿಕ ಶಿಷ್ಟಾಚಾರದ ಪ್ರಜೆಯಾಗಲು ಹೇಗೆ ಸಾಧ್ಯ? ಬೇವು ಬಿತ್ತಿ ಮಾವು ಬೇಕೆಂದರೆ ಹೇಗೆ?

ಭಟ್ಟರ ಆಟ-ಹೂಟಗಳನ್ನು ಶ್ರೀರಾಮ ಶಾಲೆ, ವಿವೇಕಾನಂದ ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರು ಅರ್ಥಮಾಡಿಕೊಳ್ಳಬೇಕಾದ ಸಂದರ್ಭವಿದು. ಭಟ್ಟರ ಶಾಲೆಯಲ್ಲಿ ಕೊಡುತ್ತಿರುವ ಅಸಹಿಷ್ಣುತೆ, ವ್ಯಗ್ರತೆ, ಸಂಘಟಿತ ಅಪರಾಧ ಕಲೆಯ ತರಬೇತಿಯ ಅಡ್ಡ ಪರಿಣಾಮ ಆಗುವುದು ತಮ್ಮ ಕುಂಟುಂಬದಲ್ಲೇ ಎಂಬುದು ಪಾಲಕರಿಗೆ ಅರಿವಾಗಬೇಕಿದೆ. ಶಾಲೆಯಂಥ ತೀರಾ ಸೂಕ್ಷ್ಮ ಮನಸ್ಸುಗಳಿರುವಲ್ಲಿ ಧ್ವಂಸ-ದ್ವೇಷದ ಕೇಸರಿ ಕಾರ್ಯಕ್ರಮ ನಡೆಸಿದ ಕಲ್ಲಡ್ಕ ಭಟ್ಟರಿಗೆ ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಮಂಗಳಾರತಿ ಆಗುತ್ತಿದೆ. ಭಟ್ಟರ ಮೇಲೆ ಕೇಸೇನೊ ದಾಖಲಾಗಿದೆ. ಆದರೆ, ಬಿಜೆಪಿ ಸರ್ಕಾರಕ್ಕೆ ಭಟ್ಟರಂತವರ ಕೋಮು ಅಜೆಂಡಾ ಅರ್ಥವಾದಷ್ಟು ಸಲೀಸಾಗಿ ಮಕ್ಕಳ ಮನೋಸಂಕೀರ್ಣತೆಯ ಮೇಲಾಗುತ್ತಿರುವ ಸೂಕ್ಷ್ಮ ಎಲ್ಲಿ ಅರ್ಥವಾದೀತು. ಪ್ರಕರಣ ಗಟ್ಟಿಯಾಗಿ ನಿಲ್ಲುವ ಸಂಭವವೇ ಇಲ್ಲ. ಆದರೆ ತಮ್ಮ ಮಕ್ಕಳು ರೂಪುಗೊಳ್ಳುತ್ತಿರುವ ಭಯಾನಕ ಭವಿಷ್ಯವನ್ನು ಈಗ ಹೆತ್ತವರೇ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆಯಷ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...