Homeಮುಖಪುಟಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

ಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ‘ಪರಾರಿಯಾಗಿದ್ದಾರೆ’ ಎಂದು ಮಂಗಳವಾರ ಜಾರಿ ನಿರ್ದೇಶನಾಲಯವು (ಇಡಿ) ಆರೋಪಿಸಿದೆ. ಆದರೆ, ಸಂಜೆ ಹೊತ್ತಿಗೆ ರಾಂಚಿಗೆ ತಲುಪಿದ ಸೊರೇನ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ನಡೆಸುವ ನಿಗದಿತ ವಿಚಾರಣೆಗೆ ಮುಂಚಿತವಾಗಿ ತಮ್ಮ ಪಕ್ಷ ಮತ್ತು ಮೈತ್ರಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದರು.

ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ರಾಂಚಿಯಲ್ಲಿ ಸೋರೆನ್ ಅವರನ್ನು ಪ್ರಶ್ನಿಸಲಿದೆ. ಆ ನಂತರ, ಅವರನ್ನು ಬಂಧಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೇಮಂತ್ ಸೊರೇನ್ ಅವರು ತಮ್ಮ ದಿಲ್ಲಿಯ ನಿವಾಸದಿಂದ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಡಿದ ನಂತರ, ಅವರ ಪತ್ನಿ ಕಲ್ಪನಾ ಸೊರೇನ್ ಅವರು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬ ಊಹಾಪೋಹಗಳು ಎದ್ದಿವೆ. ಸೋಮವಾರ ಇಡಿ ಪರಿಶೀಲನೆ ನಡೆಸಿದಾಗ ಸುಮಾರು 40 ಗಂಟೆಗಳ ಕಾಲ ಹೇಮಂತ್ ಸೋರೆನ್ ಅವರ ‘ನಾಪತ್ತೆ’ ಕುರಿತು ಭಾರಿ ಬೆಳವಣಿಗೆಗಳು ನಡೆದಿವೆ. ಕಲ್ಪನಾ ಸೊರೇನ್‌ರ ಸಂಭಾವ್ಯ ಹೆಸರು ಮುನ್ನಲೆಗೆ ಬಂದಿರುವುದು, ಬಿಹಾರದ ಲಾಲು ಪ್ರಸಾದ್ ಯಾದವ್ ಅವರ ಇದೇ ನಡೆಯನ್ನು ಪ್ರತಿಧ್ವನಿಸುತ್ತದೆ. ಅವರು ಬಂಧನಕ್ಕೆ ಒಳಗಾದಾಗ ಪತ್ನಿ ರಾಬ್ರಿ ದೇವಿ ಅವರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಿದರು.

ತನಿಖಾ ಸಂಸ್ಥೆಯು ಜನವರಿ 20ರಂದು ಹೇಮಂತ್ ಸೊರೇನ್ ಅವರನ್ನು ಪ್ರಶ್ನಿಸಿತು. ನಂತರ, ಹೊಸ ಸಮನ್ಸ್ ನೀಡಿ, ಜನವರಿ 29 ಅಥವಾ ಜನವರಿ 31 ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸಲು ಕೇಳಿದೆ.

ಕಲ್ಪನಾ ಸೊರೆನ್ ಯಾರು?

ಕಲ್ಪನಾ ಸೊರೇನ್ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ ಮತ್ತು ಮೂಲತಃ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರು. 1976ನೇ ಇಸವಿಯಲ್ಲಿ ರಾಂಚಿಯಲ್ಲಿ ಜನಿಸಿದ ಕಲ್ಪನಾ ಸೊರೇನ್ ಎಂಜಿನಿಯರಿಂಗ್ ಮತ್ತು ಎಂಬಿಎ ಓದಿದ್ದಾರೆ. ಫೆಬ್ರವರಿ 7, 2006 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ವಿವಾಹವಾದರು. ಅವರಿಗೆ ನಿಖಿಲ್ ಮತ್ತು ಅಂಶ್ ಎಂಬ ಇಬ್ಬರು ಮಕ್ಕಳಿದ್ದಾರೆ. ಕಲ್ಪನಾ ಅವರ ತಂದೆ ಉದ್ಯಮಿ ಮತ್ತು ತಾಯಿ ಗೃಹಿಣಿ. ಅವರು ವ್ಯಾಪಾರ ಮತ್ತು ಚಾರಿಟಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಲ್ಪನಾ ಸೊರೇನ್ ಅವರು ಶಾಲೆಯೊಂದನ್ನು ನಡೆಸುತ್ತಿದ್ದು, ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ಶಾಸಕಿ ಅಲ್ಲದ ಕಾರಣ, ಸಿಎಂ ಆಗಲು ಅವರ ಸ್ಥಾನವನ್ನು ಖಾಲಿ ಮಾಡಲು ಈಗಿನ ಶಾಸಕರ ಅಗತ್ಯವಿದೆ. ಹೇಮಂತ್ ಸೊರೇನ್ ಬಂಧನದ ವೇಳೆ ಪತ್ನಿ ಕಲ್ಪನಾ ಸೊರೇನ್ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬ ಊಹಾಪೋಹಗಳು ದಟ್ಟವಾಗಿರುವುದರಿಂದ ಹೇಮಂತ್ ಸೋರೆನ್ ಅವರಿಗೆ ಮೈತ್ರಿಕೂಟದ ಶಾಸಕರು ಹೆಸರಿಲ್ಲದೆ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದಾರೆ.

ಬಿಜೆಪಿಯ ನಿಶಿಕಾಂತ್ ದುಬೆ ಪ್ರಕಾರ, ಕಲ್ಪನಾ ಸಿಎಂ ಆಗುವ ಪ್ರಸ್ತಾಪವನ್ನು ಹೇಮಂತ್ ಸಹೋದರ ಬಸಂತ್ ಸೊರೆನ್ ಮತ್ತು ಸೊಸೆ ಸೀತಾ ಸೊರೆನ್ ಒಪ್ಪಲಿಲ್ಲ ಎನ್ನಲಾಗಿದೆ.

ರಾಂಚಿಯಲ್ಲಿ ಮಂಗಳವಾರ ನಡೆದ ರಾಜ್ಯದ ಸಚಿವರು ಮತ್ತು ಪಕ್ಷದ ಶಾಸಕರ ಸಭೆಗಳಲ್ಲಿ ಕಲ್ಪನಾ ಸೊರೇನ್ ಉಪಸ್ಥಿತರಿದ್ದರು. ಹೇಮಂತ್ ಸೊರೆನ್ ದೆಹಲಿಯ ನಿವಾಸದಲ್ಲಿ ಇಡಿಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆ ಎಂಬ ಬಿಜೆಪಿ ಹೇಳಿಕೆಗಳ ನಡುವೆಯೇ ಈ ಸಭೆಗಳು ನಡೆದಿವೆ. ಹೇಮಂತ್ ಸೊರೇನ್ ದೆಹಲಿಯಿಂದ ರಾಂಚಿಗೆ ರಸ್ತೆ ಮಾರ್ಗವಾಗಿ ತಲುಪಿ ಎರಡು ಸಭೆಗಳನ್ನು ನಡೆಸಿದರು.

ಇದನ್ನೂ ಓದಿ; ಇಂದಿನಿಂದ ಸಂಸತ್ ಅಧಿವೇಶನ ಆರಂಭ; ನಾಳೆ ಮಂಧ್ಯಂತರ ಬಜೆಟ್ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...