Homeಮುಖಪುಟಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

ಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ‘ಪರಾರಿಯಾಗಿದ್ದಾರೆ’ ಎಂದು ಮಂಗಳವಾರ ಜಾರಿ ನಿರ್ದೇಶನಾಲಯವು (ಇಡಿ) ಆರೋಪಿಸಿದೆ. ಆದರೆ, ಸಂಜೆ ಹೊತ್ತಿಗೆ ರಾಂಚಿಗೆ ತಲುಪಿದ ಸೊರೇನ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ನಡೆಸುವ ನಿಗದಿತ ವಿಚಾರಣೆಗೆ ಮುಂಚಿತವಾಗಿ ತಮ್ಮ ಪಕ್ಷ ಮತ್ತು ಮೈತ್ರಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದರು.

ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ರಾಂಚಿಯಲ್ಲಿ ಸೋರೆನ್ ಅವರನ್ನು ಪ್ರಶ್ನಿಸಲಿದೆ. ಆ ನಂತರ, ಅವರನ್ನು ಬಂಧಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೇಮಂತ್ ಸೊರೇನ್ ಅವರು ತಮ್ಮ ದಿಲ್ಲಿಯ ನಿವಾಸದಿಂದ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಡಿದ ನಂತರ, ಅವರ ಪತ್ನಿ ಕಲ್ಪನಾ ಸೊರೇನ್ ಅವರು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬ ಊಹಾಪೋಹಗಳು ಎದ್ದಿವೆ. ಸೋಮವಾರ ಇಡಿ ಪರಿಶೀಲನೆ ನಡೆಸಿದಾಗ ಸುಮಾರು 40 ಗಂಟೆಗಳ ಕಾಲ ಹೇಮಂತ್ ಸೋರೆನ್ ಅವರ ‘ನಾಪತ್ತೆ’ ಕುರಿತು ಭಾರಿ ಬೆಳವಣಿಗೆಗಳು ನಡೆದಿವೆ. ಕಲ್ಪನಾ ಸೊರೇನ್‌ರ ಸಂಭಾವ್ಯ ಹೆಸರು ಮುನ್ನಲೆಗೆ ಬಂದಿರುವುದು, ಬಿಹಾರದ ಲಾಲು ಪ್ರಸಾದ್ ಯಾದವ್ ಅವರ ಇದೇ ನಡೆಯನ್ನು ಪ್ರತಿಧ್ವನಿಸುತ್ತದೆ. ಅವರು ಬಂಧನಕ್ಕೆ ಒಳಗಾದಾಗ ಪತ್ನಿ ರಾಬ್ರಿ ದೇವಿ ಅವರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಿದರು.

ತನಿಖಾ ಸಂಸ್ಥೆಯು ಜನವರಿ 20ರಂದು ಹೇಮಂತ್ ಸೊರೇನ್ ಅವರನ್ನು ಪ್ರಶ್ನಿಸಿತು. ನಂತರ, ಹೊಸ ಸಮನ್ಸ್ ನೀಡಿ, ಜನವರಿ 29 ಅಥವಾ ಜನವರಿ 31 ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸಲು ಕೇಳಿದೆ.

ಕಲ್ಪನಾ ಸೊರೆನ್ ಯಾರು?

ಕಲ್ಪನಾ ಸೊರೇನ್ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ ಮತ್ತು ಮೂಲತಃ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರು. 1976ನೇ ಇಸವಿಯಲ್ಲಿ ರಾಂಚಿಯಲ್ಲಿ ಜನಿಸಿದ ಕಲ್ಪನಾ ಸೊರೇನ್ ಎಂಜಿನಿಯರಿಂಗ್ ಮತ್ತು ಎಂಬಿಎ ಓದಿದ್ದಾರೆ. ಫೆಬ್ರವರಿ 7, 2006 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ವಿವಾಹವಾದರು. ಅವರಿಗೆ ನಿಖಿಲ್ ಮತ್ತು ಅಂಶ್ ಎಂಬ ಇಬ್ಬರು ಮಕ್ಕಳಿದ್ದಾರೆ. ಕಲ್ಪನಾ ಅವರ ತಂದೆ ಉದ್ಯಮಿ ಮತ್ತು ತಾಯಿ ಗೃಹಿಣಿ. ಅವರು ವ್ಯಾಪಾರ ಮತ್ತು ಚಾರಿಟಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಲ್ಪನಾ ಸೊರೇನ್ ಅವರು ಶಾಲೆಯೊಂದನ್ನು ನಡೆಸುತ್ತಿದ್ದು, ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ಶಾಸಕಿ ಅಲ್ಲದ ಕಾರಣ, ಸಿಎಂ ಆಗಲು ಅವರ ಸ್ಥಾನವನ್ನು ಖಾಲಿ ಮಾಡಲು ಈಗಿನ ಶಾಸಕರ ಅಗತ್ಯವಿದೆ. ಹೇಮಂತ್ ಸೊರೇನ್ ಬಂಧನದ ವೇಳೆ ಪತ್ನಿ ಕಲ್ಪನಾ ಸೊರೇನ್ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬ ಊಹಾಪೋಹಗಳು ದಟ್ಟವಾಗಿರುವುದರಿಂದ ಹೇಮಂತ್ ಸೋರೆನ್ ಅವರಿಗೆ ಮೈತ್ರಿಕೂಟದ ಶಾಸಕರು ಹೆಸರಿಲ್ಲದೆ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದಾರೆ.

ಬಿಜೆಪಿಯ ನಿಶಿಕಾಂತ್ ದುಬೆ ಪ್ರಕಾರ, ಕಲ್ಪನಾ ಸಿಎಂ ಆಗುವ ಪ್ರಸ್ತಾಪವನ್ನು ಹೇಮಂತ್ ಸಹೋದರ ಬಸಂತ್ ಸೊರೆನ್ ಮತ್ತು ಸೊಸೆ ಸೀತಾ ಸೊರೆನ್ ಒಪ್ಪಲಿಲ್ಲ ಎನ್ನಲಾಗಿದೆ.

ರಾಂಚಿಯಲ್ಲಿ ಮಂಗಳವಾರ ನಡೆದ ರಾಜ್ಯದ ಸಚಿವರು ಮತ್ತು ಪಕ್ಷದ ಶಾಸಕರ ಸಭೆಗಳಲ್ಲಿ ಕಲ್ಪನಾ ಸೊರೇನ್ ಉಪಸ್ಥಿತರಿದ್ದರು. ಹೇಮಂತ್ ಸೊರೆನ್ ದೆಹಲಿಯ ನಿವಾಸದಲ್ಲಿ ಇಡಿಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆ ಎಂಬ ಬಿಜೆಪಿ ಹೇಳಿಕೆಗಳ ನಡುವೆಯೇ ಈ ಸಭೆಗಳು ನಡೆದಿವೆ. ಹೇಮಂತ್ ಸೊರೇನ್ ದೆಹಲಿಯಿಂದ ರಾಂಚಿಗೆ ರಸ್ತೆ ಮಾರ್ಗವಾಗಿ ತಲುಪಿ ಎರಡು ಸಭೆಗಳನ್ನು ನಡೆಸಿದರು.

ಇದನ್ನೂ ಓದಿ; ಇಂದಿನಿಂದ ಸಂಸತ್ ಅಧಿವೇಶನ ಆರಂಭ; ನಾಳೆ ಮಂಧ್ಯಂತರ ಬಜೆಟ್ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...