Homeಮುಖಪುಟಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

ಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ‘ಪರಾರಿಯಾಗಿದ್ದಾರೆ’ ಎಂದು ಮಂಗಳವಾರ ಜಾರಿ ನಿರ್ದೇಶನಾಲಯವು (ಇಡಿ) ಆರೋಪಿಸಿದೆ. ಆದರೆ, ಸಂಜೆ ಹೊತ್ತಿಗೆ ರಾಂಚಿಗೆ ತಲುಪಿದ ಸೊರೇನ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ನಡೆಸುವ ನಿಗದಿತ ವಿಚಾರಣೆಗೆ ಮುಂಚಿತವಾಗಿ ತಮ್ಮ ಪಕ್ಷ ಮತ್ತು ಮೈತ್ರಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದರು.

ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ರಾಂಚಿಯಲ್ಲಿ ಸೋರೆನ್ ಅವರನ್ನು ಪ್ರಶ್ನಿಸಲಿದೆ. ಆ ನಂತರ, ಅವರನ್ನು ಬಂಧಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೇಮಂತ್ ಸೊರೇನ್ ಅವರು ತಮ್ಮ ದಿಲ್ಲಿಯ ನಿವಾಸದಿಂದ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಡಿದ ನಂತರ, ಅವರ ಪತ್ನಿ ಕಲ್ಪನಾ ಸೊರೇನ್ ಅವರು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬ ಊಹಾಪೋಹಗಳು ಎದ್ದಿವೆ. ಸೋಮವಾರ ಇಡಿ ಪರಿಶೀಲನೆ ನಡೆಸಿದಾಗ ಸುಮಾರು 40 ಗಂಟೆಗಳ ಕಾಲ ಹೇಮಂತ್ ಸೋರೆನ್ ಅವರ ‘ನಾಪತ್ತೆ’ ಕುರಿತು ಭಾರಿ ಬೆಳವಣಿಗೆಗಳು ನಡೆದಿವೆ. ಕಲ್ಪನಾ ಸೊರೇನ್‌ರ ಸಂಭಾವ್ಯ ಹೆಸರು ಮುನ್ನಲೆಗೆ ಬಂದಿರುವುದು, ಬಿಹಾರದ ಲಾಲು ಪ್ರಸಾದ್ ಯಾದವ್ ಅವರ ಇದೇ ನಡೆಯನ್ನು ಪ್ರತಿಧ್ವನಿಸುತ್ತದೆ. ಅವರು ಬಂಧನಕ್ಕೆ ಒಳಗಾದಾಗ ಪತ್ನಿ ರಾಬ್ರಿ ದೇವಿ ಅವರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಿದರು.

ತನಿಖಾ ಸಂಸ್ಥೆಯು ಜನವರಿ 20ರಂದು ಹೇಮಂತ್ ಸೊರೇನ್ ಅವರನ್ನು ಪ್ರಶ್ನಿಸಿತು. ನಂತರ, ಹೊಸ ಸಮನ್ಸ್ ನೀಡಿ, ಜನವರಿ 29 ಅಥವಾ ಜನವರಿ 31 ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸಲು ಕೇಳಿದೆ.

ಕಲ್ಪನಾ ಸೊರೆನ್ ಯಾರು?

ಕಲ್ಪನಾ ಸೊರೇನ್ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ ಮತ್ತು ಮೂಲತಃ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರು. 1976ನೇ ಇಸವಿಯಲ್ಲಿ ರಾಂಚಿಯಲ್ಲಿ ಜನಿಸಿದ ಕಲ್ಪನಾ ಸೊರೇನ್ ಎಂಜಿನಿಯರಿಂಗ್ ಮತ್ತು ಎಂಬಿಎ ಓದಿದ್ದಾರೆ. ಫೆಬ್ರವರಿ 7, 2006 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ವಿವಾಹವಾದರು. ಅವರಿಗೆ ನಿಖಿಲ್ ಮತ್ತು ಅಂಶ್ ಎಂಬ ಇಬ್ಬರು ಮಕ್ಕಳಿದ್ದಾರೆ. ಕಲ್ಪನಾ ಅವರ ತಂದೆ ಉದ್ಯಮಿ ಮತ್ತು ತಾಯಿ ಗೃಹಿಣಿ. ಅವರು ವ್ಯಾಪಾರ ಮತ್ತು ಚಾರಿಟಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಲ್ಪನಾ ಸೊರೇನ್ ಅವರು ಶಾಲೆಯೊಂದನ್ನು ನಡೆಸುತ್ತಿದ್ದು, ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ಶಾಸಕಿ ಅಲ್ಲದ ಕಾರಣ, ಸಿಎಂ ಆಗಲು ಅವರ ಸ್ಥಾನವನ್ನು ಖಾಲಿ ಮಾಡಲು ಈಗಿನ ಶಾಸಕರ ಅಗತ್ಯವಿದೆ. ಹೇಮಂತ್ ಸೊರೇನ್ ಬಂಧನದ ವೇಳೆ ಪತ್ನಿ ಕಲ್ಪನಾ ಸೊರೇನ್ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬ ಊಹಾಪೋಹಗಳು ದಟ್ಟವಾಗಿರುವುದರಿಂದ ಹೇಮಂತ್ ಸೋರೆನ್ ಅವರಿಗೆ ಮೈತ್ರಿಕೂಟದ ಶಾಸಕರು ಹೆಸರಿಲ್ಲದೆ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದಾರೆ.

ಬಿಜೆಪಿಯ ನಿಶಿಕಾಂತ್ ದುಬೆ ಪ್ರಕಾರ, ಕಲ್ಪನಾ ಸಿಎಂ ಆಗುವ ಪ್ರಸ್ತಾಪವನ್ನು ಹೇಮಂತ್ ಸಹೋದರ ಬಸಂತ್ ಸೊರೆನ್ ಮತ್ತು ಸೊಸೆ ಸೀತಾ ಸೊರೆನ್ ಒಪ್ಪಲಿಲ್ಲ ಎನ್ನಲಾಗಿದೆ.

ರಾಂಚಿಯಲ್ಲಿ ಮಂಗಳವಾರ ನಡೆದ ರಾಜ್ಯದ ಸಚಿವರು ಮತ್ತು ಪಕ್ಷದ ಶಾಸಕರ ಸಭೆಗಳಲ್ಲಿ ಕಲ್ಪನಾ ಸೊರೇನ್ ಉಪಸ್ಥಿತರಿದ್ದರು. ಹೇಮಂತ್ ಸೊರೆನ್ ದೆಹಲಿಯ ನಿವಾಸದಲ್ಲಿ ಇಡಿಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆ ಎಂಬ ಬಿಜೆಪಿ ಹೇಳಿಕೆಗಳ ನಡುವೆಯೇ ಈ ಸಭೆಗಳು ನಡೆದಿವೆ. ಹೇಮಂತ್ ಸೊರೇನ್ ದೆಹಲಿಯಿಂದ ರಾಂಚಿಗೆ ರಸ್ತೆ ಮಾರ್ಗವಾಗಿ ತಲುಪಿ ಎರಡು ಸಭೆಗಳನ್ನು ನಡೆಸಿದರು.

ಇದನ್ನೂ ಓದಿ; ಇಂದಿನಿಂದ ಸಂಸತ್ ಅಧಿವೇಶನ ಆರಂಭ; ನಾಳೆ ಮಂಧ್ಯಂತರ ಬಜೆಟ್ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...