Homeಮುಖಪುಟಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

ಕಲ್ಪನಾ ಸೊರೇನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ‘ಪರಾರಿಯಾಗಿದ್ದಾರೆ’ ಎಂದು ಮಂಗಳವಾರ ಜಾರಿ ನಿರ್ದೇಶನಾಲಯವು (ಇಡಿ) ಆರೋಪಿಸಿದೆ. ಆದರೆ, ಸಂಜೆ ಹೊತ್ತಿಗೆ ರಾಂಚಿಗೆ ತಲುಪಿದ ಸೊರೇನ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ನಡೆಸುವ ನಿಗದಿತ ವಿಚಾರಣೆಗೆ ಮುಂಚಿತವಾಗಿ ತಮ್ಮ ಪಕ್ಷ ಮತ್ತು ಮೈತ್ರಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದರು.

ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ರಾಂಚಿಯಲ್ಲಿ ಸೋರೆನ್ ಅವರನ್ನು ಪ್ರಶ್ನಿಸಲಿದೆ. ಆ ನಂತರ, ಅವರನ್ನು ಬಂಧಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೇಮಂತ್ ಸೊರೇನ್ ಅವರು ತಮ್ಮ ದಿಲ್ಲಿಯ ನಿವಾಸದಿಂದ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಡಿದ ನಂತರ, ಅವರ ಪತ್ನಿ ಕಲ್ಪನಾ ಸೊರೇನ್ ಅವರು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬ ಊಹಾಪೋಹಗಳು ಎದ್ದಿವೆ. ಸೋಮವಾರ ಇಡಿ ಪರಿಶೀಲನೆ ನಡೆಸಿದಾಗ ಸುಮಾರು 40 ಗಂಟೆಗಳ ಕಾಲ ಹೇಮಂತ್ ಸೋರೆನ್ ಅವರ ‘ನಾಪತ್ತೆ’ ಕುರಿತು ಭಾರಿ ಬೆಳವಣಿಗೆಗಳು ನಡೆದಿವೆ. ಕಲ್ಪನಾ ಸೊರೇನ್‌ರ ಸಂಭಾವ್ಯ ಹೆಸರು ಮುನ್ನಲೆಗೆ ಬಂದಿರುವುದು, ಬಿಹಾರದ ಲಾಲು ಪ್ರಸಾದ್ ಯಾದವ್ ಅವರ ಇದೇ ನಡೆಯನ್ನು ಪ್ರತಿಧ್ವನಿಸುತ್ತದೆ. ಅವರು ಬಂಧನಕ್ಕೆ ಒಳಗಾದಾಗ ಪತ್ನಿ ರಾಬ್ರಿ ದೇವಿ ಅವರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಿದರು.

ತನಿಖಾ ಸಂಸ್ಥೆಯು ಜನವರಿ 20ರಂದು ಹೇಮಂತ್ ಸೊರೇನ್ ಅವರನ್ನು ಪ್ರಶ್ನಿಸಿತು. ನಂತರ, ಹೊಸ ಸಮನ್ಸ್ ನೀಡಿ, ಜನವರಿ 29 ಅಥವಾ ಜನವರಿ 31 ರಂದು ವಿಚಾರಣೆಗೆ ಅವರ ಲಭ್ಯತೆಯನ್ನು ಖಚಿತಪಡಿಸಲು ಕೇಳಿದೆ.

ಕಲ್ಪನಾ ಸೊರೆನ್ ಯಾರು?

ಕಲ್ಪನಾ ಸೊರೇನ್ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ ಮತ್ತು ಮೂಲತಃ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರು. 1976ನೇ ಇಸವಿಯಲ್ಲಿ ರಾಂಚಿಯಲ್ಲಿ ಜನಿಸಿದ ಕಲ್ಪನಾ ಸೊರೇನ್ ಎಂಜಿನಿಯರಿಂಗ್ ಮತ್ತು ಎಂಬಿಎ ಓದಿದ್ದಾರೆ. ಫೆಬ್ರವರಿ 7, 2006 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ವಿವಾಹವಾದರು. ಅವರಿಗೆ ನಿಖಿಲ್ ಮತ್ತು ಅಂಶ್ ಎಂಬ ಇಬ್ಬರು ಮಕ್ಕಳಿದ್ದಾರೆ. ಕಲ್ಪನಾ ಅವರ ತಂದೆ ಉದ್ಯಮಿ ಮತ್ತು ತಾಯಿ ಗೃಹಿಣಿ. ಅವರು ವ್ಯಾಪಾರ ಮತ್ತು ಚಾರಿಟಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕಲ್ಪನಾ ಸೊರೇನ್ ಅವರು ಶಾಲೆಯೊಂದನ್ನು ನಡೆಸುತ್ತಿದ್ದು, ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ಶಾಸಕಿ ಅಲ್ಲದ ಕಾರಣ, ಸಿಎಂ ಆಗಲು ಅವರ ಸ್ಥಾನವನ್ನು ಖಾಲಿ ಮಾಡಲು ಈಗಿನ ಶಾಸಕರ ಅಗತ್ಯವಿದೆ. ಹೇಮಂತ್ ಸೊರೇನ್ ಬಂಧನದ ವೇಳೆ ಪತ್ನಿ ಕಲ್ಪನಾ ಸೊರೇನ್ ಅವರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬ ಊಹಾಪೋಹಗಳು ದಟ್ಟವಾಗಿರುವುದರಿಂದ ಹೇಮಂತ್ ಸೋರೆನ್ ಅವರಿಗೆ ಮೈತ್ರಿಕೂಟದ ಶಾಸಕರು ಹೆಸರಿಲ್ಲದೆ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದಾರೆ.

ಬಿಜೆಪಿಯ ನಿಶಿಕಾಂತ್ ದುಬೆ ಪ್ರಕಾರ, ಕಲ್ಪನಾ ಸಿಎಂ ಆಗುವ ಪ್ರಸ್ತಾಪವನ್ನು ಹೇಮಂತ್ ಸಹೋದರ ಬಸಂತ್ ಸೊರೆನ್ ಮತ್ತು ಸೊಸೆ ಸೀತಾ ಸೊರೆನ್ ಒಪ್ಪಲಿಲ್ಲ ಎನ್ನಲಾಗಿದೆ.

ರಾಂಚಿಯಲ್ಲಿ ಮಂಗಳವಾರ ನಡೆದ ರಾಜ್ಯದ ಸಚಿವರು ಮತ್ತು ಪಕ್ಷದ ಶಾಸಕರ ಸಭೆಗಳಲ್ಲಿ ಕಲ್ಪನಾ ಸೊರೇನ್ ಉಪಸ್ಥಿತರಿದ್ದರು. ಹೇಮಂತ್ ಸೊರೆನ್ ದೆಹಲಿಯ ನಿವಾಸದಲ್ಲಿ ಇಡಿಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆ ಎಂಬ ಬಿಜೆಪಿ ಹೇಳಿಕೆಗಳ ನಡುವೆಯೇ ಈ ಸಭೆಗಳು ನಡೆದಿವೆ. ಹೇಮಂತ್ ಸೊರೇನ್ ದೆಹಲಿಯಿಂದ ರಾಂಚಿಗೆ ರಸ್ತೆ ಮಾರ್ಗವಾಗಿ ತಲುಪಿ ಎರಡು ಸಭೆಗಳನ್ನು ನಡೆಸಿದರು.

ಇದನ್ನೂ ಓದಿ; ಇಂದಿನಿಂದ ಸಂಸತ್ ಅಧಿವೇಶನ ಆರಂಭ; ನಾಳೆ ಮಂಧ್ಯಂತರ ಬಜೆಟ್ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...