Homeಕರ್ನಾಟಕಕಲ್ಯಾಣ ಕರ್ನಾಟಕ: ಹೆಸರೇನೋ ಬದಲಾಯಿತು – ಕಲ್ಯಾಣ ಎಂದು?

ಕಲ್ಯಾಣ ಕರ್ನಾಟಕ: ಹೆಸರೇನೋ ಬದಲಾಯಿತು – ಕಲ್ಯಾಣ ಎಂದು?

ಕಳೆದ ವರ್ಷ ಸೆಪ್ಟಂಬರ್ 17 ಕ್ಕೆ ಕಲಬುರಗಿಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಹೊಸ ಭಾಷ್ಯೆ ಬರೆಯುವದಾಗಿ, 371ಜೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವದಾಗಿ ಪುಂಗಿ ಊದಿ ಹೋಗಿದ್ದು ಬಿಟ್ಟರೆ ಇಲ್ಲಿಯವರೆಗೆ ಏನೂ ಮಾಡಲಿಲ್ಲ ಎನ್ನುವದು ಸತ್ಯ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನೂತನ ಸರಕಾರ ರಚನೆಯಾದ ಮೇಲೆ ಭಾರಿ ಬದಲಾವಣೆಯಾಗುತ್ತೆ ಎನ್ನುವ ನಂಬಿಕೆಯ ಮೇಲೆ ಜನರಿದ್ದರು. ಅದೇ ಸಂದರ್ಭದಲ್ಲಿ ಸರಕಾರ ಹೈದ್ರಾಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಮಾಡಿತ್ತು. ಇದರಿಂದ ಉತ್ತೇಜಿತರಾದ ಈ ಭಾಗದ ಜನ ಬಹಳಷ್ಟು ಅಭಿವೃದ್ದಿಯ ನಿರೀಕ್ಷೆಯನ್ನಿಟ್ಟುಕೊಂಡಿದ್ದರು. ಕಳೆದ ವರ್ಷ ಸೆಪ್ಟಂಬರ್ 17 ಕ್ಕೆ ಕಲಬುರಗಿಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಹೊಸ ಭಾಷ್ಯೆ ಬರೆಯುವದಾಗಿ, 371ಜೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವದಾಗಿ ಪುಂಗಿ ಊದಿ ಹೋಗಿದ್ದು ಬಿಟ್ಟರೆ ಇಲ್ಲಿಯವರೆಗೆ ಏನೂ ಮಾಡಲಿಲ್ಲ ಎನ್ನುವದು ಸತ್ಯ.

ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ದಿ 371ಜೆಯ ಸಮರ್ಪಕ ಅನುಷ್ಠಾನದಿಂದ ಸಾಧ್ಯ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ಹೆಚ್ಚಿನ ಅನುದಾನ ನೀಡಿ ಅದರ ಸದ್ಬಳಕೆಗೆ ಸೂಕ್ತ ವ್ಯವಸ್ಥೆ ಮಾಡಿದಾಗ ಮಾತ್ರ ಆ ಪ್ರದೇಶದ ಮೂಲಭೂತ ಸೌಕರ್ಯ ಹಾಗೂ ಜನಜೀವನ ಸುಧಾರಣೆಯಾಗುತ್ತದೆ. ಆದರೆ, ಬಿ.ಎಸ್.ಯಡಿಯೂರಪ್ಪನವರ ಸರಕಾರ ಬಂದ ಮೇಲೆ ಇಲ್ಲಿಯವರೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ಅಧ್ಯಕ್ಷರನ್ನೇ ನೇಮಿಸದೇ ನಿರ್ಲಕ್ಷ್ಯ ಮಾಡಲಾಗಿದೆ. ಅಧ್ಯಕ್ಷರೇ ಇಲ್ಲದೆ ಸದರಿ ಮಂಡಳಿ ಸಂಪೂರ್ಣ ನೆಲ ಕಚ್ಚಿದ್ದು, ಇದಕ್ಕೆ ತಾಜಾ ಉದಾಹರಣೆಯಂತೆ ಕಳೆದ ಆರ್ಥಿಕ ವರ್ಷದ 1500 ಕೋಟಿ ರೂ. ಅನುದಾನದಲ್ಲಿ ಕೇವಲ 306.55 ಕೋಟಿ ರೂ ಮಾತ್ರ ಖರ್ಚು ಮಾಡಲಾಗಿದೆ. ಸಾವಿರಾರು ಸಮಸ್ಯೆಗಳಿದ್ದುರೂ, ಕೋಟ್ಯಂತರ ರೂ ಅನುದಾನ ಲಭ್ಯವಿದ್ದರೂ ಖರ್ಚು ಮಾಡದೇ ಜನರ ಜೀವನದ ಜೊತೆಗೆ ಚೆಲ್ಲಾಟವಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ನಡುವೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ, ಆ ಪ್ರದೇಶದ ಜಿಲ್ಲಾ ಉಸ್ತವಾರಿ ಸಚಿವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿಯಮವಿದ್ದ ಕಾನೂನು ತಿದ್ದುಪಡಿ ಮಾಡಿ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಅಧಿಸೂಚನೆ ನೀಡಿದೆ. ಇದರಿಂದ ತಮ್ಮ ಪಕ್ಷದ ಶಾಸಕರನ್ನು ತೃಪ್ತಿಪಡಿಸಲು ಶಾಸನಬದ್ಧ ಮಂಡಳಿಯನ್ನೇ ಬಲಿ ಕೊಡಲು ಬಿ.ಎಸ್.ಯಡಿಯೂರಪ್ಪ ಮುಂದಾಗಿರುವದು ಅತ್ಯಂತ ನಾಚೀಕೆಗೇಡಿನ ಸಂಗತಿ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಈ ಭಾಗದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, 12 ಜನ ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಒಬ್ಬರು ಲೋಕಸಭಾ ಸದಸ್ಯರು, ಒಬ್ಬರು ರಾಜ್ಯಸಭಾ ಸದಸ್ಯರು, ಒಬ್ಬರು ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಸದಸ್ಯರಾಗಿದ್ದಾರೆ. ಅಂತಹ ಮಂಡಳಿಗೆ ಸಚಿವರೇ ಅಧ್ಯಕ್ಷರಾಗಿದ್ದರೆ, ಮಂಡಳಿ ಕಾರ್ಯನಿರ್ವಹಿಸಲು ಸೂಕ್ತವಾಗಿರುತ್ತಿತ್ತು. ಆದರೆ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಲ್ಲಿ ಮಂಡಳಿ ಸಂಪೂರ್ಣ ನೆಲಕಚ್ಚುವ ಸಾದ್ಯತೆಯಿದೆ. ಈ ಹಿಂದೆ 1991 ರಿಂದ 2013 ರವರೆಗೆ ಇದ್ದಂತಹ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ ಎನ್ನುವದು ಈ ಭಾಗದ ಜನ ನೋಡಿದ್ದಾರೆ. ಸಿದ್ದರಾಮಯ್ಯನವರ ಸರಕಾರದಲ್ಲಿ ದಿ.ಖಮರುಲ್ ಇಸ್ಲಾಂ, ಡಾ.ಶರಣ ಪ್ರಕಾಶ ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಸಚಿವರಾಗಿ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ, ಅದೇ ರೀತಿ ಹೆಚ್.ಡಿ ಕುಮಾರಸ್ವಾಮಿ ಸರಕಾರದಲ್ಲಿ ರಾಜಶೇಖರ ಪಾಟೀಲ್ ಹುಮನಾಬಾದ, ಸಚಿವರಾಗಿ ಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಈ ಅವಧಿಯಲ್ಲಿ ಒಂದು ದಿನವೂ ಮಂಡಳಿಯ ಅಧ್ಯಕ್ಷ ಸ್ಥಾನ ಖಾಲಿ ಇಡಲಾಗಿಲ್ಲ. ಆದರೆ, ಈಗಿನ ಬಿ.ಎಸ್.ಯಡಿಯೂರಪ್ಪನವರ ಸರಕಾರ ಬಂದು ಒಂದು ವರ್ಷವಾದರೂ ಮಂಡಳಿಗೆ ಅಧ್ಯಕ್ಷರನ್ನು ನೇಮಿಸದೇ ಈ ಪ್ರದೇಶವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎನ್ನುವದ ಭಾವನೆ ಜನರಲ್ಲಿ ಮೂಡಿದೆ.

ಅದೇ ರೀತಿ 371ಜೆ ಸಮರ್ಪಕ ಅನುಷ್ಠಾನಕ್ಕಾಗಿ ಹಿಂದಿನ ಸಿದ್ದರಾಮಯ್ಯನವರ ಸರಕಾರ 371ಜೆ ಅನುಷ್ಠಾನ ಸಚಿವ ಸಂಪುಟ ಉಪಸಮಿತಿ ರಚಿಸಿ, ಅದಕ್ಕೆ ಹೆಚ್.ಕೆ.ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿತ್ತು. ನಂತರ ಹೆಚ್.ಡಿ.ಕುಮಾರಸ್ವಾಮಿಯವರ ಸರಕಾರದಲ್ಲಿ ಪ್ರಿಯಾಂಕ ಖರ್ಗೆ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಸಮಿತಿಯು ನಿಯಮಿತವಾಗಿ ಸಭೆಗಳನ್ನು ಮಾಡಿ 371ಜೆ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ಮಾಡುತ್ತಿರಬೇಕು. ಈಗಿನ ಸರಕಾರ ಹಿರಿಯರಾದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದೆ. ಆದರೆ ಈ ಮಹಾಶಯರು ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಸಭೆ ಮಾಡದೇ, ಯಾರನ್ನು ಭೇಟಿ ಮಾಡದೇ ಉಡಾಫೆಯ ಮಾತನಾಡುತ್ತ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಸಂಪೂರ್ಣ ಹಾಳು ಮಾಡಲು ಹೊರಟಿದ್ದಾರೆ. ಇಂತಹವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದರಿಂದ ಈ ಭಾಗ ಹಳ್ಳ ಹಿಡಿಯುತ್ತದೆ ಎಂದು ಹೋರಾಟಗಾರು ಭಾವಿಸಿದ್ದಾರೆ.

ಇನ್ನೂ ಸರಕಾರದಲ್ಲಿ ಈಗಾಗಲೇ ಲಕ್ಷಾಂತರ ಹುದ್ದೆಗಳು ಖಾಲಿ ಇರುವದು ಅಂಕಿ ಅಂಶಗಳಲ್ಲಿ ಸ್ಪಷ್ಟವಾಗಿವೆ. 2019 ರಲ್ಲಿ 2,57,000 ಹುದ್ದೆಗಳು ಖಾಲಿ ಇವೆ ಎಂದು ಸರಕಾರ ಹೇಳಿದೆ. ಆದರೆ, ಈಗ ಕೋವಿಡ್-19 ಹೆಸರಿನಲ್ಲಿ ಆರ್ಥಿಕ ಇಲಾಖೆಯ ಮುಂದಿನ ಆದೇಶದವರೆಗೆ ಎಲ್ಲ ನೇಮಕಾತಿಗಳನ್ನು ತಡೆಹಿಡಿಯಲಾಗಿದೆ ಎಂದು ಸೂಚಿಸಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳು, ಬ್ಯಾಕಲಾಗ್ ಹುದ್ದೆಗಳು ಸೇರಿದಂತೆ ಎಲ್ಲ ರೀತಿಯ ನೇರ ನೇಮಕಾತಿಗಳನ್ನು ತಡೆಹಿಡಿದಿದ್ದಾರೆ. ಹಿಂದಿನ ಸರಕಾರ 371ಜೆ ಕಾನೂನು ರಚಿಸುವಾಗ ನಿಯಮಗಳಲ್ಲಿ ಸ್ಥಳೀಯ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಪೂರ್ವಾನುಮತಿ ಇದೆಯೆಂದು ಭಾವಿಸತಕ್ಕದ್ದು ಎಂದೂ ಮತ್ತು ಯಾವುದೇ ಆರ್ಥಿಕ ಮಿತವ್ಯಯ ಅನ್ವಯಿಸುವದಿಲ್ಲವೆಂದು ಆದೇಶಿಸಿದೆ. ಇದರಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಹುದ್ದೆಗಳನ್ನಿಟ್ಟುಕೊಂಡು ಅಭಿವೃದ್ದಿ ಯಾವ ರೀತಿ ಮಾಡಲಾಗುತ್ತದೆ ಎಂದು ಪ್ರಶ್ನೆ ಮಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ.

ಡಾ.ಡಿ.ಎಂ.ನಂಜುಂಡಪ್ಪನವರ ವರದಿ 2007-08 ರಲ್ಲಿ ಅನುಷ್ಠಾನವಾಗಿ 2014-15ರ ವರೆಗೆ ರಾಜ್ಯದ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಯ ದೃಷ್ಠಿಕೋನ ಹೊಂದಿತ್ತು. ಆದರೆ, ಹಿಂದುಳಿದ ತಾಲ್ಲೂಕುಗಳ ಪರಸ್ಥಿತಿ ಸಂಪೂರ್ಣವಾಗಿ ಸುಧಾರಿಸಲಿ ಎನ್ನುವ ಕಾರಣಕ್ಕೆ 2015 ರಲ್ಲಿ ಸಿದ್ದರಾಮಯ್ಯನವರು ಡಾ.ಡಿ.ಎಂ.ನಂಜುಂಡಪ್ಪನವರ ವರದಿಯ ಅನುಷ್ಠಾನವನ್ನು ಮುಂದಿನ 5 ವರ್ಷಗಳ ಅವಧಿಗೆ ಮುಂದುವರೆಸಿ ಆದೇಶಿಸಿದ್ದರು. ಅದು 2020ಕ್ಕೆ ಮುಗಿಯಬೇಕಾಗಿತ್ತು. ಈ ಹಂತದಲ್ಲಿ ಬಿ.ಎಸ್.ಯಡಿಯೂರಪ್ಪನವರ ಸರಕಾರ ಅದನ್ನು 2020-21ನೇ ಸಾಲಿಗೆ ಮುಂದುವರೆಸಿದೆ, ಆದರೆ ಎಲ್ಲಿಯವರೆಗೆ ಮುಂದುವರೆಸಲಾಗಿದೆ ಎಂದು ಎಲ್ಲಿಯೂ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಇದರಿಂದ ಹಿಂದುಳಿದ ತಾಲ್ಲೂಕುಗಳ ಜನತೆಗೆ ತುಂಬಾ ಅನುಮಾನ ಉಂಡಾಗಿದೆ. ಯಾಕೆಂದರೆ ಕಳೆದ 15 ವರ್ಷಗಳಿಂದ ಅನುಷ್ಠಾನದಲ್ಲಿರುವ ಈ ವರದಿಯು ಕೇವಲ 6 ತಾಲ್ಲೂಕುಗಳನ್ನು ಮಾತ್ರ ಹಿಂದುಳಿದ ಪಟ್ಟಿಯಿಂದ ಅಭಿವೃದ್ದಿ ಹೊಂದಿದ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ಸಾದ್ಯವಾಗಿದೆ. ಅಂದರೆ ಇನ್ನುಳಿದ 108 ಹಿಂದುಳಿದ ತಾಲ್ಲೂಕುಗಳನ್ನು ಅಭಿವೃದ್ದಿಪಡಿಸಲು ಇನ್ನೂ 150 ವರ್ಷವಾದರೂ ಬೇಕಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಷ್ಟರ ಮಟ್ಟಿಗೆ ಸರಕಾರ ಹಾಗೂ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಸರಕಾರದ ಈ ಬೇಜವಾಬ್ದಾರಿ ನಡೆಯಿಂದಾಗಿ ಜನತೆ ಪರಿತಪಿಸುವಂತಾಗಿದ್ದರೂ ಸರಕಾರ ಯಾವುದೇ ಅಳುಕು ಇಲ್ಲದ ರೀತಿ ವರ್ತಿಸುತ್ತಿದೆ. ಇನ್ನು ಮುಂದಾದರೂ ಜನತೆ ಎಚ್ಚೆತ್ತುಕೊಂಡು ಸರಕಾರದ ಈ ಅನೀತಿಗಳ ವಿರುದ್ದ ಸಾಂಘಿಕವಾಗಿ ಹೋರಾಟ ಮಾಡಬೇಕಿದೆ.

  • ರಜಾಕ್ ಉಸ್ತಾದ್ (ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖ ಮುಖಂಡರು.)

ಇದನ್ನು ಓದಿ: ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...