Homeಕರ್ನಾಟಕಕಲ್ಯಾಣ ಕರ್ನಾಟಕ: ಹೆಸರೇನೋ ಬದಲಾಯಿತು – ಕಲ್ಯಾಣ ಎಂದು?

ಕಲ್ಯಾಣ ಕರ್ನಾಟಕ: ಹೆಸರೇನೋ ಬದಲಾಯಿತು – ಕಲ್ಯಾಣ ಎಂದು?

ಕಳೆದ ವರ್ಷ ಸೆಪ್ಟಂಬರ್ 17 ಕ್ಕೆ ಕಲಬುರಗಿಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಹೊಸ ಭಾಷ್ಯೆ ಬರೆಯುವದಾಗಿ, 371ಜೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವದಾಗಿ ಪುಂಗಿ ಊದಿ ಹೋಗಿದ್ದು ಬಿಟ್ಟರೆ ಇಲ್ಲಿಯವರೆಗೆ ಏನೂ ಮಾಡಲಿಲ್ಲ ಎನ್ನುವದು ಸತ್ಯ.

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನೂತನ ಸರಕಾರ ರಚನೆಯಾದ ಮೇಲೆ ಭಾರಿ ಬದಲಾವಣೆಯಾಗುತ್ತೆ ಎನ್ನುವ ನಂಬಿಕೆಯ ಮೇಲೆ ಜನರಿದ್ದರು. ಅದೇ ಸಂದರ್ಭದಲ್ಲಿ ಸರಕಾರ ಹೈದ್ರಾಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಮಾಡಿತ್ತು. ಇದರಿಂದ ಉತ್ತೇಜಿತರಾದ ಈ ಭಾಗದ ಜನ ಬಹಳಷ್ಟು ಅಭಿವೃದ್ದಿಯ ನಿರೀಕ್ಷೆಯನ್ನಿಟ್ಟುಕೊಂಡಿದ್ದರು. ಕಳೆದ ವರ್ಷ ಸೆಪ್ಟಂಬರ್ 17 ಕ್ಕೆ ಕಲಬುರಗಿಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಹೊಸ ಭಾಷ್ಯೆ ಬರೆಯುವದಾಗಿ, 371ಜೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವದಾಗಿ ಪುಂಗಿ ಊದಿ ಹೋಗಿದ್ದು ಬಿಟ್ಟರೆ ಇಲ್ಲಿಯವರೆಗೆ ಏನೂ ಮಾಡಲಿಲ್ಲ ಎನ್ನುವದು ಸತ್ಯ.

ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ದಿ 371ಜೆಯ ಸಮರ್ಪಕ ಅನುಷ್ಠಾನದಿಂದ ಸಾಧ್ಯ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ಹೆಚ್ಚಿನ ಅನುದಾನ ನೀಡಿ ಅದರ ಸದ್ಬಳಕೆಗೆ ಸೂಕ್ತ ವ್ಯವಸ್ಥೆ ಮಾಡಿದಾಗ ಮಾತ್ರ ಆ ಪ್ರದೇಶದ ಮೂಲಭೂತ ಸೌಕರ್ಯ ಹಾಗೂ ಜನಜೀವನ ಸುಧಾರಣೆಯಾಗುತ್ತದೆ. ಆದರೆ, ಬಿ.ಎಸ್.ಯಡಿಯೂರಪ್ಪನವರ ಸರಕಾರ ಬಂದ ಮೇಲೆ ಇಲ್ಲಿಯವರೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ಅಧ್ಯಕ್ಷರನ್ನೇ ನೇಮಿಸದೇ ನಿರ್ಲಕ್ಷ್ಯ ಮಾಡಲಾಗಿದೆ. ಅಧ್ಯಕ್ಷರೇ ಇಲ್ಲದೆ ಸದರಿ ಮಂಡಳಿ ಸಂಪೂರ್ಣ ನೆಲ ಕಚ್ಚಿದ್ದು, ಇದಕ್ಕೆ ತಾಜಾ ಉದಾಹರಣೆಯಂತೆ ಕಳೆದ ಆರ್ಥಿಕ ವರ್ಷದ 1500 ಕೋಟಿ ರೂ. ಅನುದಾನದಲ್ಲಿ ಕೇವಲ 306.55 ಕೋಟಿ ರೂ ಮಾತ್ರ ಖರ್ಚು ಮಾಡಲಾಗಿದೆ. ಸಾವಿರಾರು ಸಮಸ್ಯೆಗಳಿದ್ದುರೂ, ಕೋಟ್ಯಂತರ ರೂ ಅನುದಾನ ಲಭ್ಯವಿದ್ದರೂ ಖರ್ಚು ಮಾಡದೇ ಜನರ ಜೀವನದ ಜೊತೆಗೆ ಚೆಲ್ಲಾಟವಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ನಡುವೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ, ಆ ಪ್ರದೇಶದ ಜಿಲ್ಲಾ ಉಸ್ತವಾರಿ ಸಚಿವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿಯಮವಿದ್ದ ಕಾನೂನು ತಿದ್ದುಪಡಿ ಮಾಡಿ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಅಧಿಸೂಚನೆ ನೀಡಿದೆ. ಇದರಿಂದ ತಮ್ಮ ಪಕ್ಷದ ಶಾಸಕರನ್ನು ತೃಪ್ತಿಪಡಿಸಲು ಶಾಸನಬದ್ಧ ಮಂಡಳಿಯನ್ನೇ ಬಲಿ ಕೊಡಲು ಬಿ.ಎಸ್.ಯಡಿಯೂರಪ್ಪ ಮುಂದಾಗಿರುವದು ಅತ್ಯಂತ ನಾಚೀಕೆಗೇಡಿನ ಸಂಗತಿ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಈ ಭಾಗದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, 12 ಜನ ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಒಬ್ಬರು ಲೋಕಸಭಾ ಸದಸ್ಯರು, ಒಬ್ಬರು ರಾಜ್ಯಸಭಾ ಸದಸ್ಯರು, ಒಬ್ಬರು ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಸದಸ್ಯರಾಗಿದ್ದಾರೆ. ಅಂತಹ ಮಂಡಳಿಗೆ ಸಚಿವರೇ ಅಧ್ಯಕ್ಷರಾಗಿದ್ದರೆ, ಮಂಡಳಿ ಕಾರ್ಯನಿರ್ವಹಿಸಲು ಸೂಕ್ತವಾಗಿರುತ್ತಿತ್ತು. ಆದರೆ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಲ್ಲಿ ಮಂಡಳಿ ಸಂಪೂರ್ಣ ನೆಲಕಚ್ಚುವ ಸಾದ್ಯತೆಯಿದೆ. ಈ ಹಿಂದೆ 1991 ರಿಂದ 2013 ರವರೆಗೆ ಇದ್ದಂತಹ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ ಎನ್ನುವದು ಈ ಭಾಗದ ಜನ ನೋಡಿದ್ದಾರೆ. ಸಿದ್ದರಾಮಯ್ಯನವರ ಸರಕಾರದಲ್ಲಿ ದಿ.ಖಮರುಲ್ ಇಸ್ಲಾಂ, ಡಾ.ಶರಣ ಪ್ರಕಾಶ ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಸಚಿವರಾಗಿ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ, ಅದೇ ರೀತಿ ಹೆಚ್.ಡಿ ಕುಮಾರಸ್ವಾಮಿ ಸರಕಾರದಲ್ಲಿ ರಾಜಶೇಖರ ಪಾಟೀಲ್ ಹುಮನಾಬಾದ, ಸಚಿವರಾಗಿ ಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಈ ಅವಧಿಯಲ್ಲಿ ಒಂದು ದಿನವೂ ಮಂಡಳಿಯ ಅಧ್ಯಕ್ಷ ಸ್ಥಾನ ಖಾಲಿ ಇಡಲಾಗಿಲ್ಲ. ಆದರೆ, ಈಗಿನ ಬಿ.ಎಸ್.ಯಡಿಯೂರಪ್ಪನವರ ಸರಕಾರ ಬಂದು ಒಂದು ವರ್ಷವಾದರೂ ಮಂಡಳಿಗೆ ಅಧ್ಯಕ್ಷರನ್ನು ನೇಮಿಸದೇ ಈ ಪ್ರದೇಶವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎನ್ನುವದ ಭಾವನೆ ಜನರಲ್ಲಿ ಮೂಡಿದೆ.

ಅದೇ ರೀತಿ 371ಜೆ ಸಮರ್ಪಕ ಅನುಷ್ಠಾನಕ್ಕಾಗಿ ಹಿಂದಿನ ಸಿದ್ದರಾಮಯ್ಯನವರ ಸರಕಾರ 371ಜೆ ಅನುಷ್ಠಾನ ಸಚಿವ ಸಂಪುಟ ಉಪಸಮಿತಿ ರಚಿಸಿ, ಅದಕ್ಕೆ ಹೆಚ್.ಕೆ.ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿತ್ತು. ನಂತರ ಹೆಚ್.ಡಿ.ಕುಮಾರಸ್ವಾಮಿಯವರ ಸರಕಾರದಲ್ಲಿ ಪ್ರಿಯಾಂಕ ಖರ್ಗೆ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಸಮಿತಿಯು ನಿಯಮಿತವಾಗಿ ಸಭೆಗಳನ್ನು ಮಾಡಿ 371ಜೆ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ಮಾಡುತ್ತಿರಬೇಕು. ಈಗಿನ ಸರಕಾರ ಹಿರಿಯರಾದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದೆ. ಆದರೆ ಈ ಮಹಾಶಯರು ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಸಭೆ ಮಾಡದೇ, ಯಾರನ್ನು ಭೇಟಿ ಮಾಡದೇ ಉಡಾಫೆಯ ಮಾತನಾಡುತ್ತ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಸಂಪೂರ್ಣ ಹಾಳು ಮಾಡಲು ಹೊರಟಿದ್ದಾರೆ. ಇಂತಹವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದರಿಂದ ಈ ಭಾಗ ಹಳ್ಳ ಹಿಡಿಯುತ್ತದೆ ಎಂದು ಹೋರಾಟಗಾರು ಭಾವಿಸಿದ್ದಾರೆ.

ಇನ್ನೂ ಸರಕಾರದಲ್ಲಿ ಈಗಾಗಲೇ ಲಕ್ಷಾಂತರ ಹುದ್ದೆಗಳು ಖಾಲಿ ಇರುವದು ಅಂಕಿ ಅಂಶಗಳಲ್ಲಿ ಸ್ಪಷ್ಟವಾಗಿವೆ. 2019 ರಲ್ಲಿ 2,57,000 ಹುದ್ದೆಗಳು ಖಾಲಿ ಇವೆ ಎಂದು ಸರಕಾರ ಹೇಳಿದೆ. ಆದರೆ, ಈಗ ಕೋವಿಡ್-19 ಹೆಸರಿನಲ್ಲಿ ಆರ್ಥಿಕ ಇಲಾಖೆಯ ಮುಂದಿನ ಆದೇಶದವರೆಗೆ ಎಲ್ಲ ನೇಮಕಾತಿಗಳನ್ನು ತಡೆಹಿಡಿಯಲಾಗಿದೆ ಎಂದು ಸೂಚಿಸಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳು, ಬ್ಯಾಕಲಾಗ್ ಹುದ್ದೆಗಳು ಸೇರಿದಂತೆ ಎಲ್ಲ ರೀತಿಯ ನೇರ ನೇಮಕಾತಿಗಳನ್ನು ತಡೆಹಿಡಿದಿದ್ದಾರೆ. ಹಿಂದಿನ ಸರಕಾರ 371ಜೆ ಕಾನೂನು ರಚಿಸುವಾಗ ನಿಯಮಗಳಲ್ಲಿ ಸ್ಥಳೀಯ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಪೂರ್ವಾನುಮತಿ ಇದೆಯೆಂದು ಭಾವಿಸತಕ್ಕದ್ದು ಎಂದೂ ಮತ್ತು ಯಾವುದೇ ಆರ್ಥಿಕ ಮಿತವ್ಯಯ ಅನ್ವಯಿಸುವದಿಲ್ಲವೆಂದು ಆದೇಶಿಸಿದೆ. ಇದರಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಹುದ್ದೆಗಳನ್ನಿಟ್ಟುಕೊಂಡು ಅಭಿವೃದ್ದಿ ಯಾವ ರೀತಿ ಮಾಡಲಾಗುತ್ತದೆ ಎಂದು ಪ್ರಶ್ನೆ ಮಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ.

ಡಾ.ಡಿ.ಎಂ.ನಂಜುಂಡಪ್ಪನವರ ವರದಿ 2007-08 ರಲ್ಲಿ ಅನುಷ್ಠಾನವಾಗಿ 2014-15ರ ವರೆಗೆ ರಾಜ್ಯದ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಯ ದೃಷ್ಠಿಕೋನ ಹೊಂದಿತ್ತು. ಆದರೆ, ಹಿಂದುಳಿದ ತಾಲ್ಲೂಕುಗಳ ಪರಸ್ಥಿತಿ ಸಂಪೂರ್ಣವಾಗಿ ಸುಧಾರಿಸಲಿ ಎನ್ನುವ ಕಾರಣಕ್ಕೆ 2015 ರಲ್ಲಿ ಸಿದ್ದರಾಮಯ್ಯನವರು ಡಾ.ಡಿ.ಎಂ.ನಂಜುಂಡಪ್ಪನವರ ವರದಿಯ ಅನುಷ್ಠಾನವನ್ನು ಮುಂದಿನ 5 ವರ್ಷಗಳ ಅವಧಿಗೆ ಮುಂದುವರೆಸಿ ಆದೇಶಿಸಿದ್ದರು. ಅದು 2020ಕ್ಕೆ ಮುಗಿಯಬೇಕಾಗಿತ್ತು. ಈ ಹಂತದಲ್ಲಿ ಬಿ.ಎಸ್.ಯಡಿಯೂರಪ್ಪನವರ ಸರಕಾರ ಅದನ್ನು 2020-21ನೇ ಸಾಲಿಗೆ ಮುಂದುವರೆಸಿದೆ, ಆದರೆ ಎಲ್ಲಿಯವರೆಗೆ ಮುಂದುವರೆಸಲಾಗಿದೆ ಎಂದು ಎಲ್ಲಿಯೂ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಇದರಿಂದ ಹಿಂದುಳಿದ ತಾಲ್ಲೂಕುಗಳ ಜನತೆಗೆ ತುಂಬಾ ಅನುಮಾನ ಉಂಡಾಗಿದೆ. ಯಾಕೆಂದರೆ ಕಳೆದ 15 ವರ್ಷಗಳಿಂದ ಅನುಷ್ಠಾನದಲ್ಲಿರುವ ಈ ವರದಿಯು ಕೇವಲ 6 ತಾಲ್ಲೂಕುಗಳನ್ನು ಮಾತ್ರ ಹಿಂದುಳಿದ ಪಟ್ಟಿಯಿಂದ ಅಭಿವೃದ್ದಿ ಹೊಂದಿದ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ಸಾದ್ಯವಾಗಿದೆ. ಅಂದರೆ ಇನ್ನುಳಿದ 108 ಹಿಂದುಳಿದ ತಾಲ್ಲೂಕುಗಳನ್ನು ಅಭಿವೃದ್ದಿಪಡಿಸಲು ಇನ್ನೂ 150 ವರ್ಷವಾದರೂ ಬೇಕಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಷ್ಟರ ಮಟ್ಟಿಗೆ ಸರಕಾರ ಹಾಗೂ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಸರಕಾರದ ಈ ಬೇಜವಾಬ್ದಾರಿ ನಡೆಯಿಂದಾಗಿ ಜನತೆ ಪರಿತಪಿಸುವಂತಾಗಿದ್ದರೂ ಸರಕಾರ ಯಾವುದೇ ಅಳುಕು ಇಲ್ಲದ ರೀತಿ ವರ್ತಿಸುತ್ತಿದೆ. ಇನ್ನು ಮುಂದಾದರೂ ಜನತೆ ಎಚ್ಚೆತ್ತುಕೊಂಡು ಸರಕಾರದ ಈ ಅನೀತಿಗಳ ವಿರುದ್ದ ಸಾಂಘಿಕವಾಗಿ ಹೋರಾಟ ಮಾಡಬೇಕಿದೆ.

  • ರಜಾಕ್ ಉಸ್ತಾದ್ (ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖ ಮುಖಂಡರು.)

ಇದನ್ನು ಓದಿ: ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...