Homeಮುಖಪುಟಕಮಲ್ ಹಾಸನ್ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ: ನಟ, ರಾಜಕಾರಣಿ ಶರತ್‌ ಕುಮಾರ್ ಘೋಷಣೆ

ಕಮಲ್ ಹಾಸನ್ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ: ನಟ, ರಾಜಕಾರಣಿ ಶರತ್‌ ಕುಮಾರ್ ಘೋಷಣೆ

- Advertisement -
- Advertisement -

“ಮಕ್ಕಳ್ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ ಅವರು ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ” ಎಂದು ಎಐಎಸ್‌ಎಂಕೆ ಪಕ್ಷದ ಮುಖ್ಯಸ್ಥ ಮತ್ತು ನಟ ಆರ್‌.ಶರತ್‌ ಕುಮಾರ್ ಘೋಷಿಸಿದ್ದಾರೆ. ತಮಿಳುನಾಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 6ರಂದು ಚುನಾವಣೆ ನಡೆಯಲಿದ್ದು, ಕಮಲ್‌ ಹಾಸನ್,‌ “ಸಮಾನ ಯೋಚನೆಗಳಿರುವ ಪಕ್ಷಗಳೊಂದಿಗೆ ಮೈತ್ರಿ ಮಾತುಕತೆ ನಡೆಯುತ್ತಿದೆ” ಎಂದಿದ್ದಾರೆ.

ಈಗಾಗಲೇ ಎಐಎಸ್‌ಎಂಕೆ ಮತ್ತು ಎಂಎನ್‌ಎಂ ಪಕ್ಷಗಳ ಮೈತ್ರಿ ಖಚಿತಪಟ್ಟಿದ್ದು, “ತೃತೀಯ ರಂಗಕ್ಕೆ ಕಮಲ್‌ ಹಾಸನ್‌ ನೇತೃತ್ವ ಇರಲಿದೆ. ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಾರೆ” ಎಂದು ಶರತ್‌ ಕುಮಾರ್‌ ಹೇಳಿದ್ದಾರೆ. ಎಐಎಡಿಎಂಕೆ ಜೊತೆಗೆ ಕಳೆದ 10 ವರ್ಷಗಳಿಂದ ಎಐಎಸ್‌ಎಂಕೆ ಪಕ್ಷವು ಮೈತ್ರಿ ಮಾಡಿಕೊಂಡಿತ್ತು.

ಶರತ್‌ ಕುಮಾರ್ ಅವರ ಪತ್ನಿ, ಎಐಎಸ್‌ಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ರಾಧಿಕಾ ಶರತ್‌ಕುಮಾರ್‌ ಕೋವಿಲ್‌ಪಟ್ಟಿ ಅಥವಾ ವೇಲಚೇರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಹಂಬಲ ವ್ಯಕ್ತಪಡಿಸಿರುವ ಕಮಲ್‌ ಹಾಸನ್‌, “ಹಲವು ಪಕ್ಷಗಳೊಂದಿಗೆ ಮೈತ್ರಿ ಮಾತುಕತೆ ನಡೆಯುತ್ತಿದೆ, ಸೀಟು ಹಂಚಿಕೆ ನಿರ್ಧಾರಗಳಿಗೂ ಮುನ್ನ ಮೈತ್ರಿ ಪೂರ್ಣಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ” ಎಂದಿದ್ದಾರೆ.

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಅವರ ವೈಜ್ಞಾನಿಕ ಸಲಹೆಗಾರರಾಗಿದ್ದ ವಿ.ಪೊನರಾಜ್‌ ಅವರು ಎಂಎನ್‌ಎಂ ಪಕ್ಷದ ಉಪಾಧ್ಯಕ್ಷರಾಗಿ ಜವಾಬ್ದಾರಿ ವಹಿಸಲಿದ್ದಾರೆ ಎಂದು ಕಮಲ್‌ ಹಾಸನ್ ಪ್ರಕಟಿಸಿದ್ದಾರೆ.

ಗೃಹಿಣಿಯರನ್ನು ಮುನ್ನೆಲೆಗೆ ತರುವ ಕಾರ್ಯವನ್ನು ಪಕ್ಷ ಮಾಡಲಿದೆ. ಮಹಿಳೆಯರಿಗೆ ಶೇ 50 ಮೀಸಲಾತಿ, ಪ್ರತಿ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಉಳಿದುಕೊಳ್ಳಲು ಅನುಕೂಲವಾಗಲು ಹಾಸ್ಟೆಲ್‌ಗಳ ವ್ಯವಸ್ಥೆ, ಮಹಿಳೆಯರಿಗಾಗಿ ಮಹಿಳೆಯರೇ ನಡೆಸುವ ಬ್ಯಾಂಕ್‌ ಸ್ಥಾಪನೆ ಮತ್ತು 50 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಪಕ್ಷದ ಕಾರ್ಯಸೂಚಿಯಲ್ಲಿ ನೀಡಲಾಗಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷದ ಅಭ್ಯರ್ಥಿಗಳಾಗಲು ಬಯಸುವವರು ₹ 25 ಸಾವಿರ ಪಾವತಿಸಿ: ಕಮಲ್ ಹಾಸನ್‌

“ತಮಿಳರು ಮಾರಾಟಕ್ಕಿಲ್ಲ, ಅವರ ಮತಗಳು ಸಹ ಮಾರಾಟಕ್ಕಿಲ್ಲ” ಎಂದು ಘೋಷಿಸಿರುವ ಕಮಲ್‌ ಹಾಸನ್,‌ ಭ್ರಷ್ಟಾಚಾರ ಮುಕ್ತ ಸರ್ಕಾರ ಸ್ಥಾಪನೆಗಾಗಿ ಬೆಂಬಲಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...