Homeಕರ್ನಾಟಕಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ 'ಥಗ್‌ ಲೈಫ್‌' ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

- Advertisement -
- Advertisement -

“ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ತನ್ನ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ನಾನು ಕ್ಷಮೆ ಕೋರುವುದಿಲ್ಲ ಎಂದು ನಟ ಕಮಲ್‌ ಹಾಸನ್ ಹೈಕೋರ್ಟ್ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ನಿರ್ಧರಿಸಿದೆ. ಈ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸಿದೆ. ಹಾಗಾಗಿ, ಕೋರ್ಟ್ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಕಮಲ್ ಹಾಸನ್ ಹೇಳಿಕೆ ಕನ್ನಡಿಗರಲ್ಲಿ ಆಕ್ರೋಶ ಉಂಟು ಮಾಡಿರುವ ಹಿನ್ನೆಲೆ, ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಕರ್ನಾಟಕದಲ್ಲಿ ಅವಕಾಶ ಮತ್ತು ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ ನಾರಾಯಣ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು (ಮಂಗಳವಾರ) ವಿಚಾರಣೆ ನಡೆಸಿತು.

ಮಧ್ಯಾಹ್ನದ ಊಟದ ವಿರಾಮಕ್ಕೂ ಮುನ್ನ ವಿ ನಾರಾಯಣ್‌ ಅವರ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲು ಮೌಖಿಕ ಸಲಹೆ ನೀಡಿತ್ತು.

ಈ ಸಂಬಂಧ ಕಮಲ್ ಹಾಸನ್ ಅವರ ಸೂಚನೆ ಪಡೆದು ವಾದಿಸುವುದಾಗಿ ಪೀಠಕ್ಕೆ ತಿಳಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು, ಮಧ್ಯಾಹ್ನದ ನಂತರದ ವಿಚಾರಣೆಯಲ್ಲಿ ಕೆಎಫ್‌ಸಿಸಿಗೆ ಕಮಲ್‌ ಹಾಸನ್‌ ಬರೆದಿರುವ ಪತ್ರವನ್ನು ಓದಿದರು. “ಸದ್ಯಕ್ಕೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡದಿರಲು ಕಮಲ್‌ ಹಾಸನ್‌ ತೀರ್ಮಾನಿಸಿದ್ದಾರೆ. ಹೀಗಾಗಿ, ಪೊಲೀಸ್‌ ರಕ್ಷಣೆ ಕೋರುವುದಿಲ್ಲ, ಈ ನಡುವೆ, ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲು ಅವರು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಧ್ಯಾನ್‌ ಚಿನ್ನಪ್ಪ ಅವರು, “ಕನ್ನಡ ನಾಡು ಮತ್ತು ಕರ್ನಾಟಕದ ಬಗ್ಗೆ ಪ್ರೀತಿ ಇದೆ ಎಂದು ಕಮಲ್‌ ಹಾಸನ್ ಹೇಳಿದ್ದಾರೆ. ದುರುದ್ದೇಶವಿದ್ದರೆ ಮಾತ್ರ ಕ್ಷಮೆ ಕೋರಬೇಕು ಎಂದು ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಅವರು ಘೋಷಣೆ ಮಾಡಿದ್ದಾರೆ, ಸ್ಪಷ್ಟನೆ ನೀಡಿಲ್ಲ. ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯನ್ನು ವಿಳಂಬಿಸಬಹುದು ಎಂದಿದ್ದಾರೆ. ಹೀಗಾಗಿ, ಸಿನಿಮಾ ಬಿಡುಗಡೆಗೆ ಪೊಲೀಸರ ರಕ್ಷಣೆಯ ವಿಚಾರ ಮುಂದು ಮಾಡುವುದಿಲ್ಲ. ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವ “ಅಹಂ ಮುಂದೆ ಮಾಡಿದ್ದೀರಿ. ಅದು ಕಮಲ್‌ ಹಾಸನ್‌ ಅಥವಾ ಬೇರೆ ಯಾರೇ ಆಗಿರಬಹುದು. ಇದು ಜನರ ಭಾವನೆಗಳಿಗೆ ಹಾನಿ ಮಾಡುವ ವಿಚಾರವಾಗಿದೆ. ಕಮಲ್‌ ಹಾಸನ್‌ ಹೇಳಿಕೆಯಿಂದ ಇಷ್ಟೆಲ್ಲಾ ಆಗಿದ್ದು, ಇದೆಲ್ಲವನ್ನೂ ಅವರ ಹೇಳಿಕೆಯೇ ನಿಲ್ಲಿಸಬಹುದು. ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಕ್ಷಮೆ ವಿಚಾರ ಹೊರತುಪಡಿಸಿ ಉಳಿದೆಲ್ಲವೂ ಇದೆ” ಎಂದಿದೆ.

ಅಂತಿಮವಾಗಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...