Homeಮುಖಪುಟನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? - ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌...

ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!

- Advertisement -
- Advertisement -

ರಾಜಕಾರಣಿಯಾಗಿ ಬದಲಾಗಿರುವ ಪ್ರತಿಭಾನ್ವಿತ ಬಹುಭಾಷಾ ಚಿತ್ರತಾರೆ ಕಮಲಹಾಸನ್ ಅವರು ಕೊರೋನ ಲಾಕ್‌ಡೌನ್ ಮತ್ತು ಅದು ಬಡವರಿಗೆ ಒಡ್ಡಿರುವ ಸಂಕಷ್ಟಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಪತ್ರ ಬರೆದಿದ್ದಾರೆ. ಸುದೀರ್ಘವಾಗಿರುವ ಈ ಪತ್ರದ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

-ಇವರಿಗೆ
ಗೌರವಾನ್ವಿತ ಪ್ರಧಾನಮಂತ್ರಿಯವರು,
ಭಾರತ ಗಣರಾಜ್ಯ

ಗೌರವಾನ್ವಿತರೇ,

ಇದು ನಾನು ನಿಮಗೆ ಬರೆಯುತ್ತಿರುವ ಎರಡನೇ ಪತ್ರವಾಗಿದೆ. ಈ ಹಿಂದೆ ಮಾರ್ಚ್‌ 23ರಂದು ಈ ದೇಶದ ಒಬ್ಬ ನಾಗರಿಕನಾಗಿ ಒಂದು ಪತ್ರ ಬರೆದಿದ್ದೆ. ಇದೀಗ ಮತ್ತೊಮ್ಮೆ ಅದೇ ನೆಲೆಯಲ್ಲಿ, ಆದರೆ ನಿರಾಶೆಯಿಂದ ಈ ಬಹಿರಂಗ ಪತ್ರವನ್ನು ನಿಮ್ಮ ಮುಂದಿಡುತ್ತಿದ್ದೇನೆ. ನನ್ನ ಮೊದಲ ಪತ್ರದಲ್ಲಿ ನಾನು ಸಮಾಜದ ದೀನ ದಲಿತರ, ದುರ್ಬಲರ ಹಾಗೂ ಅವಗಣಿತರ ಬಗ್ಗೆ ಯಾವುದೇ ನಿರ್ಲಕ್ಷ್ಯ ತೋರಬೇಡಿ ಎಂದು ಒತ್ತಾಯಿಸಿದ್ದೆ.

ಅದರೆ, ಅದರ ಮರುದಿನವೇ ದೇಶಾದ್ಯಂತ ಕಟ್ಟುನಿಟ್ಟಿನ ಹಾಗೂ ತಕ್ಷಣವೇ ಜಾರಿಗೆ ಬರುವಂತೆ ಲಾಕ್‌ಡೌನ್‌ ಘೋಷಿಸಲಾಯಿತು. ಇದು ಬಹುತೇಕ ನೋಟು ಅಪಮೌಲ್ಯಗೊಳಿಸಿದ ರೀತಿಯಲ್ಲಿಯೇ ಇತ್ತು. ಆದರೂ ನಾನು ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೆ. ಏಕೆಂದರೆ ನಾನು ಆಯ್ಕೆ ಮಾಡಿದ ನಾಯಕ ನೀವಾಗಿದ್ದಿರಿ ಮತ್ತು ಭರವಸೆ ಇಡಬಹುದಾದ ನಾಯಕರೂ ಆಗಿದ್ದಿರಿ. ನೋಟು ಅಪಮೌಲ್ಯದ ಸಂದರ್ಭದಲ್ಲೂ ನಾನು ನಿಮ್ಮ ಮೇಲೆ ಅತಿಯಾದ ಭರವಸೆ ಹೊಂದಿದ್ದೆ. ಆದರೆ, ನಂತರದಲ್ಲಿ ನಾನಿಟ್ಟಿದ್ದ ಭರವಸೆ ತಪ್ಪು ಎಂದು ಗೊತ್ತಾಯಿತು. ಮಾತ್ರವಲ್ಲ, ನೀವು ಕೂಡಾ ತಪ್ಪಾಗಿದ್ದೀರಿ ಎಂದು ಕಾಲವೇ ತಿಳಿಸಿತು.

ನಾನು ಈಗಲೂ ನಂಬಿರುವುದು ಏನೆಂದರೆ, ನೀವು ಈಗಲೂ 1.4 ಬಿಲಿಯನ್ ಭಾರತೀಯರ ನಾಯಕನಾಗಿದ್ದೀರಿ; ಅದರಲ್ಲೂ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ನಿಮ್ಮನ್ನು ನಿಜವಾಗಿಯೂ ಹಿಂಬಾಲಿಸುತ್ತಿರುವವರ ನಾಯಕನಾಗಿದ್ದೀರಿ ಎಂದು. ಜೊತೆಗೆ ಜಗತ್ತಿನಲ್ಲಿ ನಿಮ್ಮಂತಹ ಪ್ರಭಾವಿ ನಾಯಕ ಬೇರೆ ಯಾರೂ ಇಲ್ಲ ಎಂದೇ ಭಾವಿಸಿದ್ದೇನೆ ಕೂಡಾ. ನೀವು ಏನೇ ಹೇಳಿದರೂ, ಜನರು ಅದನ್ನು ಪಾಲಿಸುತ್ತಿದ್ದಾರೆ. ಇಂದಿಗೂ ಅದೆಷ್ಟರ ಮಟ್ಟಿಗೆ ನಿಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ ಎಂದರೆ, ನೀವು ಚಪ್ಪಾಳೆ ತಟ್ಟಿ ಎಂದಾಗ, ಅಸಂಖ್ಯಾತ ಆರೋಗ್ಯ ಸಿಬ್ಬಂದಿಗಳಿಗೆ ದೇಶಾದ್ಯಂತ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಲಾಯಿತು. ನಾವು ನಿಮ್ಮ ವಿಚಾರ ಹಾಗೂ ಆದೇಶಗಳನ್ನು ಪಾಲಿಸಿದ್ದೇವೆ. ಆದರೆ, ನಮ್ಮ ಮಾತುಗಳು ಮಾತ್ರ ಕೇವಲ ನಮಗೆ ಮಾತ್ರ ಸೀಮಿತವಾಗಬಾರದಲ್ಲವೇ? ಜನರ ಜೊತೆ ಬೆರೆಯುವ ಒಬ್ಬ ನಾಯಕನಾಗಿ ನನ್ನಲ್ಲೂ ಕೆಲವು ಪ್ರಶ್ನೆಗಳಿವೆ.

ನನ್ನ ಆತಂಕವೇನೆಂದರೆ, ನೋಟು ಅಪಮೌಲ್ಯಗೊಳಿಸಿದ ಸಂದರ್ಭದಲ್ಲಾದ ಸಂಕಷ್ಟವು ಮತ್ತೊಮ್ಮೆ ದೊಡ್ಡ ಮಟ್ಟದಲ್ಲಿ ಎದುರಾಗುವ ಸಾಧ್ಯತೆಯಿದೆ. ನೋಟು ಅಪಮೌಲ್ಯಗೊಳಿಸಿದ ಸಂದರ್ಭದಲ್ಲಿ ಅದು ಬಡಜನರ ಉಳಿತಾಯ ಮತ್ತು ಜೀವನೋಪಾಯದ ಮೇಲೆ ಭಾರೀ ಪರಿಣಾಮ ಬೀರಿತ್ತು. ಅಂತದ್ದೇ ಪರಿಸ್ಥಿತಿಯನ್ನು ನಾವೀಗ ಮತ್ತೆ ಎದುರು ನೋಡುತ್ತಿದ್ದೇವೆ. ಯೋಜನಾರಹಿತವಾದ ಈ ಲಾಕ್‌ಡೌನ್‌ನಿಂದಾಗಿ ಬಡಜನರು ಮತ್ತೊಮ್ಮೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೂ, ಆ ಬಡಜನರಿಗೆ ನಿಮ್ಮ ಹೊರತು ಬೇರೆ ಯಾರೂ ಕಾಣುವುದಿಲ್ಲ. ಒಂದು ಕಡೆಯಲ್ಲಿ ನೀವು ಶ್ರೀಮಂತರಲ್ಲಿ ದೀಪ ಬೆಳಗಿಸುವಂತೆ ಮೂಲಕ ಅದ್ಬುತ ಚಿತ್ರವನ್ನು  ತೋರಿಸುತ್ತಿದ್ದರೆ, ಇನ್ನೊಂದೆಡೆ ಬಡವರ ದುಸ್ಥಿತಿಯ ನಾಚಿಕೆಗೇಡಿನ ಚಿತ್ರಣ ಕಾಣುವಂತಾಗಿದೆ. ಮಾತ್ರವಲ್ಲದೇ, ನಿಮ್ಮ ಜಗತ್ತಿಗೆ ಸೇರಿದವರು ಬಾಲ್ಕನಿಯಲ್ಲಿ ಎಣ್ಣೆ ಸುರಿದು ದೀಪ ಹಚ್ಚುವವುದರಲ್ಲಿ ನಿರತರಾಗಿದ್ದರೆ, ಅದೇ ಇನ್ನೊಂದು ಕಡೆಯಲ್ಲಿ ಬಡವರು ತಮ್ಮಲ್ಲಿ ಉಳಿದಿರುವ ಎಣ್ಣೆಯಲ್ಲಿ ಎಷ್ಟು ದಿನ ರೊಟ್ಟಿ ಬೇಯಿಸಬಹುದು ಎಂದು ಲೆಕ್ಕ ಹಾಕುತ್ತಿದ್ದಾರೆ.

ನಿಮ್ಮ ಹಿಂದಿನ ಎರಡು ಭಾಷಣಗಳಲ್ಲಿ ನೀವು ಅಗತ್ಯ ಸೌಕರ್ಯಗಳು ಬೇಕಿರುವ ಜನರನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದೀರಿ. ಆದರೆ, ಅದಕ್ಕಿಂತಲೂ ಮುಖ್ಯವಾದ ಒಂದು ವಿಚಾರವಿದೆ. ನಿಮ್ಮ ಸೈಕೋಥೆರಪಿ ತಂತ್ರಗಾರಿಕೆಯ ಮಾತುಗಳು ಬಾಲ್ಕನಿ ಹೊಂದಿದ್ದು, ಅದರ ಮೇಲೆ ನಿಂತು ನಿಮಗೆ ಜಯಘೋಷ ಹಾಕುವವರ ಪ್ರಾಥಮಿಕ ಆತಂಕಗಳನ್ನು ದೂರ ಮಾಡಬಹುದು. ಆದರೆ, ತಲೆಯ ಮೇಲೆ ಸೂರೇ ಇಲ್ಲದವರ ಬಗ್ಗೆ ಆಲೋಚಿಸಿ. ನನಗೆ ಖಂಡಿತವಾಗಿಯೂ ಭರವಸೆಯಿದೆ, ನಿಮ್ಮದು ಕೇವಲ ಬಾಲ್ಕನಿ ಹೊಂದಿರುವವರ ಸರಕಾರವಾಗಿರಲಾರದು. ಬದಲಿಗೆ, ಈ ದೇಶದಲ್ಲಿ ವಾಸಿಸುವ ಬಾಲ್ಕನಿ ರಹಿತ ಬಹುದೊಡ್ಡ ಸಮಾಜದ ಸರಕಾರವೂ ಆಗುವುದು ಎಂದು ನಂಬಿದ್ದೇನೆ. ಈ ದೇಶದ ವ್ಯವಸ್ಥೆ ಹಾಗೂ ನಿರ್ಮಾಣವು ಮಧ್ಯಮ ವರ್ಗದವರಿಂದ ಆಗಿದೆ ಎಂಬುದೇನೋ ನಿಜ. ಸ್ಥಿತಿವಂತರು ಮತ್ತು ಶ್ರೀಮಂತರು ತಮ್ಮ ಬದುಕನ್ನು ಕಟ್ಟಿಕೊಳ್ಳಬಲ್ಲರು. ಆದರೆ, ಬಡವರ್ಗದ ಜನರು ಯಾವತ್ತೂ ಸಮಾಜದ ಮುನ್ನೆಲೆಯಲ್ಲಿ ಕಾಣಿಸಿಕೊಳ್ಳಲಾರರು. ಹಾಗೆಂದು, ದೇಶದ ಬೆಳವಣಿಗೆ ಮತ್ತು ಜಿಡಿಪಿಯಲ್ಲಿ ಅವರ ಪಾತ್ರವೇ ಇಲ್ಲ ಎಂದು ನಿರ್ಲಕ್ಷಿಸಲಾಗದು. ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!

ಆದರೆ, ಪ್ರಸ್ತುತ ಎದುರಾಗಿರುವ ಬಿಕ್ಕಟ್ಟು ಯಾರನ್ನೂ ಬಿಟ್ಟಿಲ್ಲ. ಸಮಾಜದ ಮೇಲ್ವರ್ಗದ ಜನರಿಂದ ಹಿಡಿದು ಕೆಳವರ್ಗದ ಜನರ ತನಕ ಅದು ಯಾರನ್ನೂ ಬಿಟ್ಟಿಲ್ಲ. ಆದುದರಿಂದ ಪ್ರತಿಯೊಬ್ಬರನ್ನೂ ಈ ಸಂಕಷ್ಟದಿಂದ ಪಾರುಮಾಡಬೇಕಿಗಿದೆ. ಕೋಟಿಗಟ್ಟಲೆ ಸಂಖ್ಯೆಯಲ್ಲಿರುವ ದಿನಗೂಲಿ ನೌಕರರು, ಬೀದಿಬದಿ ವ್ಯಾಪಾರಸ್ಥರು, ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ಮತ್ತು ಅಸಹಾಯಕ ವಲಸೆ ಕಾರ್ಮಿಕರು ಇವರೆಲ್ಲರೂ ಸುರಂಗದ ಕೊನೆಯಲ್ಲಿ ಬೆಳಕು ಕಾಣುತ್ತದೆಯೋ ಎಂಬ ಹುಡುಕಾಟದಲ್ಲಿದ್ದರೆ, ನಾವು ಸುರಕ್ಷಿತವಾಗಿರುವ ಮಧ್ಯಮ ವರ್ಗವನ್ನಷ್ಟೇ ನೋಡುತ್ತಿದ್ದೇವೆ. ಅದನ್ನು ನಾನು ತಪ್ಪೆಂದು ಹೇಳಲಾರೆ. ಆದರೆ, ನನ್ನ ಕಾಳಜಿಯೆಂದರೆ, ಈ ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಮಲಗುವ ಸ್ಥಿತಿ ಬರಕೂಡದು. ಕೋವಿಡ್‌-19ಗಿಂತಲೂ ಭವಿಷ್ಯದಲ್ಲಿ ಹಸಿವು, ಆಯಾಸ ಹಾಗೂ ಅಭಾವಗಳೇ (HED-20) ಹೆಚ್ಚಿನ ಸಂತ್ರಸ್ತರನ್ನು ಹುಟ್ಟು ಹಾಕಲಿವೆ.

ಪ್ರತೀ ಬಾರಿಯೂ ನೀವು ಚುನಾವಣಾ ಸಂದರ್ಭದಲ್ಲಿ ಮಾತನಾಡಿದಂತೆಯೇ ಮಾತನಾಡುತ್ತೀರಿ. ಆದುದರಿಂದ ನೀವು ನಾಗರಿಕರು ಹಾಗೂ ರಾಜ್ಯ ಸರಕಾರಗಳ ಮೇಲೆ ಜವಾಬ್ದಾರಿ ಹೊರಿಸಿ, ಈ ಮೂಲಕ ನೀವು ವರ್ತಮಾನ ಮತ್ತು ಭವಿಷ್ಯದ ದಿನಗಳನ್ನು ಚಾಣಕ್ಷತನದಿಂದ ಕಳೆಯಲು ಉದ್ದೇಶಿಸಿರುವಂತೆ ತೋರುತ್ತಿದೆ. ನೀವೇನಾದರೂ ನಿಮ್ಮನ್ನು ಹಾಗೂ ಸರಕಾರವನ್ನು ಚಾಣಕ್ಷ ಎಂದು ಕಲ್ಪಿಸಿಕೊಂಡಿದ್ದರೆ, ಕ್ಷಮಿಸಿ ಬಿಡಿ. ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಚೆನ್ನಾಗಿ ಅರಿತಿದ್ದೇನೆ, ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

ಗೊತ್ತು ಗುರಿಯಿಲ್ಲದ ವಿಚಾರಗಳಿಂದಾಗಿ ಜೀವ ಉಳಿಸುವ ವಿಷಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ. ಇದರ ಪರಿಣಾಮವಾಗಿ ಕಾನೂನು ಉಲ್ಲಂಘಿಸಿ ಗುಂಪು ಸೇರುವ ಮೂರ್ಖ ಜನರು, ರೋಗ ಹರಡಲೂ ಕಾರಣರಾಗುತ್ತಿದ್ದಾರೆ. ಇವರ ನಿರ್ಲಕ್ಷ್ಯದಿಂದ ಇತರರು ಪ್ರಾಣ ಕಳೆದುಕೊಂಡರೆ ಯಾರು ಹೊಣೆ?

ಚೀನಾ ಸರಕಾರ ವಿಶ್ವ ಆರೋಗ್ಯ ಸಂಸ್ಥೆಗೆ ಒದಗಿಸಿದ ಮಾಹಿತಿ ಪ್ರಕಾರ, ಡಿಸೆಂಬರ್‌ 8ನೇ ತಾರೀಕಿಗೆ ಚೀನಾದಲ್ಲಿ ಮೊದಲ ಕರೋನಾ ಸೋಂಕು ಪತ್ತೆಯಾಗಿತ್ತು. ಆದರೆ, ಜಗತ್ತಿಗೆ ಇದರ ಪರಿಣಾಮವನ್ನು ತಿಳಿದುಕೊಳ್ಳಲು ಸಮಯ ಬೇಕಾಯಿತು. ಭಾರತದಲ್ಲಿ ಜನವರಿ 30ಕ್ಕೆ ಪ್ರಥಮ ಸೋಂಕು ಪತ್ತೆಯಾಯಿತಾದರೂ ಇಟೆಲಿಯಲ್ಲಾದ ದುರಂತದವರೆಗೂ ನಾವು ಎಚ್ಚೆತ್ತುಕೊಂಡಿರಲಿಲ್ಲ. ಆದರೆ, ಮಾರ್ಚ್‌ 23ರಂದು ರಾತೋರಾತ್ರಿ ಮುಂದಿನ ನಾಲ್ಕು ಗಂಟೆಗಳೊಗಾಗಿ ದೇಶವನ್ನೇ ಲಾಕ್‌ಡೌನ್‌ ಮಾಡಲು ತಿಳಿಸಿದಿರಿ. ಆ ಆದೇಶವು 140 ಕೋಟಿ ಜನಸಂಖ್ಯೆ ಹೊಂದಿದ ಇಡೀ ದೇಶಕ್ಕೆ ಅನ್ವಯಿಸಿತ್ತು.

ಆದರೆ ಈ ಬಾರಿ ನೀವು ಈ ವಿಚಾರದಲ್ಲಿ ವಿಫಲರಾಗಿದ್ದೀರಿ ಎಂದು ಹೇಳಲು ನನಗೆ ವಿಷಾದವಿದೆ. ನಿಮ್ಮ ಸರಕಾರ ಹಾಗೂ ಸರಕಾರದ ಪ್ರತಿನಿಧಿಗಳು ಟೀಕೆಗಳಿಗೆ ಉತ್ತರಿಸುವ ಮೂಲಕ ಸಮಯ ವ್ಯರ್ಥ ಮಾಡುತ್ತಿದ್ದಾರೆ. ದೇಶದ ಹಿತದೃಷ್ಟಿಯಿಂದ ಯಾರಾದರೂ ಮಾತನಾಡಿದರೆ ಅವರನ್ನು ಮೂದಲಿಸಿ ಟ್ರೋಲ್‌ ಮಾಡುವ ನಿಮ್ಮ ಪಡೆ ಅವರನ್ನು ʼದೇಶ ವಿರೋಧಿʼ ಎಂದು ಕರೆಯುತ್ತಿದೆ.

ಈ ಸಮಯದಲ್ಲಿ ನನ್ನನ್ನು ದೇಶ ವಿರೋಧಿ ಎಂದು ಕರೆಯಲಿ ಎಂದು ಅಂತವರಿಗೆಲ್ಲ ನಾನು ಬಹಿರಂಗವಾಗಿ ಸವಾಲು ಒಡ್ಡುತ್ತೇನೆ.  ಈ ಸಂಧಿಗ್ಧತೆಯಲ್ಲಿ ಸಾಮಾನ್ಯ ಜನರು ಸರಕಾರವನ್ನು ದೂರಲಾರರು. ಆದರೆ, ನೀವು ಅವರನ್ನು ದೂರುವಂತೆ ಮಾಡುತ್ತಿದ್ದೀರಿ. ಏಕೆಂದರೆ, ಜನರೂ ತಮ್ಮ ಸುರಕ್ಷಿತ ಜೀವನಕ್ಕಾಗಿಯೇ ಈ ಸರಕಾರವನ್ನು ಆಯ್ಕೆ ಮಾಡಿದ್ದಾರೆ ಮತ್ತು ಅವರು ಅದಕ್ಕಾಗಿ ಸರಕಾರಕ್ಕೆ ತೆರಿಗೆ ಪಾವತಿ ಮಾಡುವವರೂ ಆಗಿದ್ದಾರೆ.

ಸರ್‌, ಇದು ನಿಜಕ್ಕೂ ಕಾಳಜಿ ತೋರುವವರ ಮಾತುಗಳನ್ನೂ ಕೇಳಬೇಕಾದ ಸಮಯ. ನಾನೂ ಕಾಳಜಿ ವಹಿಸುತ್ತಿದ್ದೇನೆ. ಈ ಸಮಯದಲ್ಲಿ ಎಲ್ಲರನ್ನೂ ನೀವು ಸಹಾಯಕ್ಕಾಗಿ ಕೇಳಿಕೊಳ್ಳಬೇಕಿದೆ . ಈ ದೇಶದ ಬಹುದೊಡ್ಡ ಆಸ್ತಿಯೆಂದರೆ, ಈ ದೇಶದ ಮಾನವ ಸಾಮರ್ಥ್ಯ. ಈ ಹಿಂದೆಯೂ ನಾವು ದೊಡ್ಡ ದೊಡ್ಡ ಸಂಕಷ್ಟಗಳನ್ನು ಈ ಮೂಲಕ ಎದುರಿಸಿದ್ದೇವೆ. ಜೊತೆಗೆ ಎಲ್ಲರನ್ನೂ ಒಂದುಗೂಡಿಸಿ, ಯಾವುದೇ ಒಂದು ಕಡೆಗೆ ವಾಲದೆ ಸಮತೋಲನದಲ್ಲಿ ಇದ್ದರೆ, ಇದರಲ್ಲೂ ನಾವು ಜಯಗಳಿಸುತ್ತೇವೆ.

ನಿಮ್ಮ ಮೇಲೆ ಕೋಪವಿದೆ; ಆದರೂ, ನಿಮ್ಮ ಜೊತೆಗಿದ್ದೇನೆ.

ಜೈ ಹಿಂದ್.‌

ಕಮಲಹಾಸನ್‌,

ಅಧ್ಯಕ್ಷ, ಮಕ್ಕಳ್‌ ನೀದಿ ಮೈಯಾಮ್

ಸಂಗ್ರಹಾನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

    • ಜನಪರ ಮಾಧ್ಯಮವು ಜನರ ವಂತಿಗೆಯಿಂದಷ್ಟೇ ಬೆಳೆಯಲು ಸಾಧ್ಯ. ಉದಾರವಾಗಿ ವಂತಿಗೆ ನೀಡಿ.
      ಅಕೌಂಟ್ ವಿವರ:
      Account name: Gauri Media trust, Account number: 510101006500878 Bank: corporation bank, shrinivasa nagara bangalore. IFSC: CORP0000215

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...