Homeಮುಖಪುಟಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಪಕ್ಷಾಂತರಿಗಳನ್ನು ಶತಾಯಗತಾಯ ಸೋಲಿಸಬೇಕೆಂದು ಪಟತೊಟ್ಟಿದ್ದ ಮಾಜಿ ಸಿಎಂ ಕಮಲ್‌ನಾಥ್‌ಗೆ ಚುನಾವಣಾ ಆಯೋಗ ಅಡ್ಡಗಾಲು ಹಾಕಿದೆ. ಚುನಾವಣೆಗೆ ಕೇವಲ ಮೂರು ದಿನ ಇರುವಾಗ ಕೊನೆಕ್ಷಣದಲ್ಲಿ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಟ್ಟಿರುವುದಾಗಿ ಆಯೋಗ ತಿಳಿಸಿದೆ.

ಹಲವು ಎಚ್ಚರಿಕೆಗಳ ಹೊರತಾಗಿಯೂ ಮಾದರಿ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ ಆರೋಪದ ಮೇಲೆ ಆಯೋಗ ಈ ಕ್ರಮ ಕೈಗೊಂಡಿದೆ. ರಾಜಕೀಯ ಪಕ್ಷದ ಮುಖಂಡರಾಗಿದ್ದುಕೊಂಡು ಕಮಲ್ ನಾಥ್‌ರವರು ನೈತಿಕ ಮತ್ತು ಘನತೆಯ ನಡವಳಿಕೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗ ದೂರಿದೆ.

ಆಯೋಗದ ಈ ನಿರ್ಧಾರದಿಂದಾಗಿ ಈಗ ಯಾವುದೇ ಅಭ್ಯರ್ಥಿಯ ಪರವಾಗಿ ಕಮಲ್‌ ನಾಥ್ ಪ್ರಚಾರದಲ್ಲಿ ಭಾಗಿಯಾದರೆ ಆ ಕಾರ್ಯಕ್ರಮದ ಪೂರ್ತಿ ಖರ್ಚು ಅಭ್ಯರ್ಥಿಯ ಮಿತಿಗೆ ದಾಖಲಾಗುತ್ತದೆ. ಸ್ಟಾರ್ ಪ್ರಚಾರಕರಾಗಿ ಭಾಗಿಯಾದರೆ ಆ ಖರ್ಚು ಪಕ್ಷದ ಖಾತೆಗೆ ದಾಖಲಾಗುತ್ತದೆ. ಪಕ್ಷಕ್ಕೆ ಇಂತಿಷ್ಟೇ ಖರ್ಚು ಮಾಡಬೇಕೆಂಬ ಮಿತಿ ಇರುವುದಿಲ್ಲ.

ಈ ಕುರಿತು ಕೆಂಡಾಮಂಡಲವಾಗಿರುವ ಕಮಲ್‌ನಾಥ್ ಆಯೋಗದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಚಾರಕರನ್ನು ನೇಮಿಸುವುದು ಎಲ್ಲಾ ಪಕ್ಷಗಳ ಹಕ್ಕು. ಪಕ್ಷದ ತೀರ್ಮಾನಗಳಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡುವಂತಿಲ್ಲ. ಆಯೋಗದ ಈ ನಿರ್ಧಾರವು ಅಭಿವ್ಯಕ್ತಿ ಮತ್ತು ಚಳವಳಿಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ನನ್ನನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡುವ ಕುರಿತು ಆಯೋಗ ಮುಂಚಿತವಾಗಿ ಯಾವುದೇ ನೋಟಿಸ್ ನೀಡಿಲ್ಲ ಎಂದು ಕಮಲ್‌ನಾಥ್ ಆರೋಪಿಸಿದ್ದಾರೆ.

ಮಧ್ಯಪ್ರದೇಶ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ಮಾಜಿ ಮುಖ್ಯಮಂತ್ರಿ ಕಮಲನಾಥ್​​, ದಾಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಭಾಷಣದಲ್ಲಿ ಸುರೇಶ್ ರಾಜೆ​​ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ನಾಯಕಿ ಇಮಾರ್ತಿ ದೇವಿ ಅವರನ್ನು ಐಟಂ​ ಎಂದು ಕರೆದಿದ್ದರು. ಇದಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ನಂತರ ಅವರು ನಾನು 9 ಬಾರಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ಲೋಕಸಭೆಯಲ್ಲಿ ಅಜೆಂಡಾ ಶೀಟ್ ಮಂಡಿಸುತ್ತಾರೆ. ಅದರಲ್ಲಿ ಐಟಂ ನಂಬರ್ 1, ಐಟಂ ನಂಬರ್ 2… ಎಂದು ಬರೆದಿರುತ್ತದೆ. ಅದು ನನ್ನ ಮನಸ್ಸನಲ್ಲಿತ್ತು. ನಾನು ಯಾರಿಗೂ ನೋವಾಗುವ ಉದ್ದೇಶದಿಂದ ಅದನ್ನು ಬಳಸಿರಲಿಲ್ಲ. ಆದರೂ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದರು.

ಅಲ್ಲದೇ ಅಕ್ಟೋಬರ್ 13 ರಂದು ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್ ರನ್ನು ನೌಟಂಕಿ ಕಲಾಕಾರ್ ಎಂದು ಕರೆದಿದ್ದರು. ಈ ಹೇಳಿಕೆಗಳಿಗೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ನವೆಂಬರ್ 3 ರಂದು ರಾಜ್ಯದ 28 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಅದರಲ್ಲಿ 22 ಜನ ಕಾಂಗ್ರೆಸ್ ಸದಸ್ಯರು ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...