Homeಅಂತರಾಷ್ಟ್ರೀಯಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಅಮೆರಿಕಾದಲ್ಲಿ ಒಬ್ಬ ವ್ಯಕ್ತಿಯ ಆಯ್ಕೆಯಲ್ಲಿ ಆ ವ್ಯಕ್ತಿಯ ಜನಾಂಗ ಮತ್ತು ಲಿಂಗವು ಅತ್ಯಂತ ನಿರ್ಣಾಯಕ ಮಾನದಂಡಗಳಾಗಿವೆ. ಅಂತಹ ರಾಷ್ಟ್ರದಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಜೋ ಬಿಡನ್, ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷ ಅಭ್ಯರ್ಥಿಯಾಗಿ ಘೋಷಿಸಿದರು.

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದ ಮೂಲದ ಕಮಲಾ ಹ್ಯಾರಿಸ್ ಅಮೆರಿಕಾ ಸೆನೆಟರ್ ಆದ ದಕ್ಷಿಣ ಏಷ್ಯಾದ ಮೊದಲ ಮಹಿಳೆ. ಹ್ಯಾರಿಸ್ ತಂದೆ ಜಮೈಕಾದವರು, ತಾಯಿ ದಕ್ಷಿಣ ಭಾರತದವರು, ತಂದೆಯಿಂದ ಬೇರ್ಪಟ್ಟು ತಾಯಿಯೊಂದಿಗೆ ಬೆಳೆದಿದ್ದಾರೆ.

ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಉನ್ನತ ವ್ಯಾಸಂಗಕ್ಕಾಗಿ ಬರ್ಕ್ಲಿ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಅಲ್ಲಿ ಅವರು ನಾಗರಿಕ ಹಕ್ಕುಗಳ ಚಳುವಳಿಯಲ್ಲಿ ತಮ್ಮ ಭಾವಿ ಪತಿ ಡೊನಾಲ್ಡ್ ಜೆ ಹ್ಯಾರಿಸ್‌ರನ್ನು ಭೇಟಿಯಾದರು.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ಹ್ಯಾರಿಸ್ ತಮ್ಮ ಮಾತುಗಳಲ್ಲಿ ಆಗ್ಗಾಗೆ ತನ್ನ ಮತ್ತು ಭಾರತದ ಸಂಬಂಧವನ್ನು ನೆನಪಿಸಿಕೊಂಡಿದ್ದಾರೆ. ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದ್ದು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು.

“ಆಕೆಯಲ್ಲಿ ಭಾರತೀಯ ಪರಂಪರೆ ಇನ್ನೂ ಇರುವುದರಿಂದ, ಕೆಲವೊಮ್ಮೆ ತನ್ನ ವೈಯಕ್ತಿಕ ಕಥೆಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಾರೆ” ಎಂದು 2019ರ ಅಕ್ಟೋಬರ್‌ನಲ್ಲಿ ಅಮೆರಿಕಾದ LA ಟೈಮ್ಸ್ ವರದಿ ಮಾಡಿತ್ತು.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇತ್ತಿಚೆಗೆ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್ ಮತ್ತು ಯಾವುದೇ ರೀತಿಯ ಟಿಕ್ಕಾ ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಭಾರತದ ಬಗ್ಗೆ ತನ್ನ ಮೂಲ ಭಾರತದ್ದು ಎಂಬುದನ್ನು ಹ್ಯಾರಿಸ್ ಎಂದಿಗೂ ಬಿಟ್ಟುಕೊಟ್ಟಿಲ್ಲ. ಸಿಗುವ ಪ್ರತಿ ಅವಕಾಶದಲ್ಲೂ ಭಾರತದ ಬಗೆಗಿನ ತಮ್ಮ ಪ್ರೀತಿಯನ್ನು ಒತ್ತಿ ಹೇಳುತ್ತಾ ಬಂದಿದ್ದಾರೆ.

Kamala Harris's husband and potential 'second gentleman' - BBC News
PC: BBC

ಡೊನಾಲ್ಡ್ ಟ್ರಂಪ್ ಅವರಿಂದ ಕಮ್ಯೂನಿಸ್ಟ್ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದ ಹ್ಯಾರಿಸ್ ಅಧ್ಯಯನ ಕೂಡ ಕಪ್ಪು ಜನರ ಅಧ್ಯಯನಗಳು, ನಾಯಕರು ಮತ್ತು ಸಂಸ್ಕೃತಿ ಕ್ಷೇತ್ರಕ್ಕೆ ಹತ್ತಿರವಾಗಿತ್ತು. ಹ್ಯಾರಿಸ್ “ಐತಿಹಾಸಿಕವಾಗಿ ಕಪ್ಪು ಕಾಲೇಜು ಮತ್ತು ವಿಶ್ವವಿದ್ಯಾಲಯ” ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಅಧ್ಯಯನ ಮಾಡಿದ್ದರು.

ಕಪ್ಪು ಮಹಿಳೆಯಾಗಿ ಹ್ಯಾರಿಸ್ ಹೆಸರು “ಬ್ಲ್ಯಾಕ್ ಲೈವ್ಸ್ ಮ್ಯಾಟರ್”(ಕಪ್ಪು ಜನರ ಜೀವನವೂ ಮುಖ್ಯ) ಚಳವಳಿಯ ಮುಂಚೂಣಿಯಲ್ಲಿದೆ. ಇದು 1960ರ ನಾಗರಿಕ ಹಕ್ಕುಗಳ ಚಳವಳಿಯ ನಂತರ ಅಮೆರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಕಪ್ಪು ಜನಾಂಗದ ಬಗ್ಗೆ ನಡೆದ ದೊಡ್ಡ ಪ್ರತಿಭಟನೆಗಳು.

13% ಇರುವ ಕಪ್ಪು ಜನಾಂಗದ ಮತದಾರರಿಗೆ ಹೋಲಿಸಿದರೆ ಏಷ್ಯಾದ ಅಮೆರಿಕನ್ನರು ಕೇವಲ 5% ಮತದಾರರನ್ನು ಹೊಂದಿದ್ದಾರೆ. ಅಮೆರಿಕಾದಲ್ಲಿ ಜನಾಂಗದ ಅಡಿಪಾಯವು ಕಪ್ಪು ಮತ್ತು ಬಿಳಿ ರಾಜಕೀಯದ ಮೇಲೆ ಸ್ಥಿರವಾಗಿದೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಉಪಾಧ್ಯಕ್ಷ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಲು ಕಾರಣವಾದ ಅಂಶಗಳು

ಈ ಬಾರಿಯ ಅಮೆರಿಕಾ ಚುನಾವಣೆಯ ಬದಲಾವಣೆಯ ಪರ್ವ ಬೈಡನ್‌ಗೆ, ಕಪ್ಪು, ಭಾರತೀಯ-ಅಮೆರಿಕನ್ ಮಹಿಳಾ ಅಭ್ಯರ್ಥಿ ಸುರಕ್ಷಿತ ಆಯ್ಕೆ ಎಂಬುದನ್ನು ತಿಳಿಸಿ ಕೊಟ್ಟಿತ್ತು. ಆಗ ಅವರ ಕಣ್ಣಿಗೆ ಬಿದ್ದವರು ಸೆನೆಟರ್‌ ಕಮಲಾ ಹ್ಯಾರಿಸ್.

ಆರಂಭದಲ್ಲಿ, ಬೈಡೆನ್‌ರ ಆಯ್ಕೆಗಳ ಸರಣಿಯು ಬಹುತೇಕ ಮಹಿಳೆಯರೆ ಆಗಿದ್ದರು. ಆದರೆ ಮೇ ತಿಂಗಳಲ್ಲಿ “ಬ್ಲ್ಯಾಕ್ ಲೈವ್ಸ್ ಮ್ಯಾಟರ್” ಚಳವಳಿ ಸ್ಫೋಟಗೊಂಡ ನಂತರ, ಬೈಡೆನ್‌ಗೆ ಕಪ್ಪು ಜನಾಂಗದ ವ್ಯಕ್ತಿಯನ್ನು ಆಯ್ಕೆ ಮಾಡಲು ಒತ್ತಡ ಉಂಟು ಮಾಡಿತ್ತು.

ನಂತರ ಬೈಡನ್ ಕಪ್ಪು ಮಹಿಳೆಯನ್ನು ಆಯ್ಕೆ ಮಾಡುವ ಉದ್ದೇಶವನ್ನು ಜೂನ್‌ನಲ್ಲಿ ಘೋಷಿಸಿದರು. ಹ್ಯಾರಿಸ್ ಅವರ ಆಯ್ಕೆಯು ಬೈಡನ್ ಅವರ ಮಧ್ಯಮ ಮತ್ತು ಸ್ಥಾಪನೆಯ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತದೆ. ರಾಜಕೀಯ ತಜ್ಞರು ಕಮಲಾ ಹ್ಯಾರಿಸ್ ಆಯ್ಕೆ ಮಾರ್ಚ್‌ನಲ್ಲಿಯೇ ನಿರ್ಧರಿಸಲಾಗಿದೆ ಎಂದಿದ್ದರು.

Senator Kamala Harris
PC:Daily News.com

ಸೆನೆಟ್ನಲ್ಲಿ ನಾಲ್ಕು ವರ್ಷಗಳಿಗಿಂತ ಕಡಿಮೆ ಅವಧಿಯ ಸೇವೆ ಸಲ್ಲಿಸುತ್ತಿರುವಾಗಲೇ, ಹ್ಯಾರಿಸ್ ಅನ್ನು ಡೆಮಾಕ್ರಟಿಕ್ ಪಕ್ಷದ ಮುಖ್ಯವಾಹಿನಿಯೊಳಗೆ ದೃಢವಾಗಿರಿಸಲಾಗಿದೆ. ಇತರ ಮಾಜಿ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಬರ್ನಿ ಸ್ಯಾಂಡರ್ಸ್ ಮತ್ತು ಎಲಿಜಬೆತ್ ವಾರೆನ್‌ರಂತೆಯೂ ಇಲ್ಲ, ಇತ್ತ ಬೈಡೆನ್‌ನಂತೆ ಕೇಂದ್ರಿಯವೂ ಆಗಿಲ್ಲ.

ಡೊನಾಲ್ಡ್ ಜೆ ಹ್ಯಾರಿಸ್, ಶ್ಯಾಮಲಾ ಗೋಪಾಲನ್ ಹ್ಯಾರಿಸ್ ಮಗಳಾಗಿ ಕಮಲಾ ದೇವಿ ಹ್ಯಾರಿಸ್ 1964ರ ಅಕ್ಟೋಬರ್ 20 ರಂದು ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ನಲ್ಲಿ ಜನಿಸಿದವರು. ಕಮಲಾ ಕೋಟ್-ಡೆಸ್-ನೀಗಸ್ ರಸ್ತೆಯ ನೊಟ್ರೆ-ಡೇಮ್-ಡೆಸ್-ನೀಗಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ನಂತರ ವೆಸ್ಟ್ಮೌಂಟ್ ನಿಂದ 1981 ರಲ್ಲಿ ಪದವಿ ಪಡೆದರು. ಆಗಸ್ಟ್ 22, 2014 ರಂದು, ಹ್ಯಾರಿಸ್ ಬ್ರೂಕ್ಲಿನ್ ಮೂಲದ ವಕೀಲ ಡೌಗ್ಲಾಸ್ ಎಮ್ಹಾಫ್ ಎಂಬ ಅವರನ್ನು ವಿವಾಹವಾದರು.

ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಕಮಲಾ ತಮ್ಮ ವೃತ್ತಿಜೀವನವನ್ನು ಅಲ್ಮೇಡಾ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿ ಕಚೇರಿಯಲ್ಲಿ ಪ್ರಾರಂಭಿಸಿದರು. ಅಲ್ಲಿ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದರು. 2003ರಲ್ಲಿ, ಅವರು ಸ್ಯಾನ್ ಫ್ರಾನ್ಸಿಸ್ಕೋದ ಜಿಲ್ಲಾ ವಕೀಲರಾದರು. ಎರಡು ಅವಧಿಯ ಅಧಿಕಾರದ ನಂತರ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆ ಮತ್ತು ಮೊದಲ ಕಪ್ಪು ವ್ಯಕ್ತಿಯಾಗಿ ಆಯ್ಕೆಯಾದರು. ಅಲ್ಲಿ ಕಮಲಾ ಅವರು 2011 ರಿಂದ 2017 ರವರೆಗೆ ಈ ಹುದ್ದೆಯನ್ನು ಅಲಂಕರಿಸಿದ್ದರು.

2017 ರಲ್ಲಿ ಕ್ಯಾಲಿಫೋರ್ನಿಯಾದ ಯುನೈಟೆಡ್ ಸ್ಟೇಟ್ಸ್ ಸೆನೆಟರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಆಫ್ರಿಕನ್-ಅಮೆರಿಕನ್ ಮಹಿಳೆ ಮತ್ತು ಇತಿಹಾಸದಲ್ಲಿ ಮೊದಲ ದಕ್ಷಿಣ ಏಷ್ಯಾ-ಅಮೆರಿಕನ್ ಸೆನೆಟರ್ ಆಗಿ ಹೊರಹೊಮ್ಮಿದರು. ಅವರು ಹೋಮ್ಲ್ಯಾಂಡ್ ಸೆಕ್ಯುರಿಟಿ ಮತ್ತು ಸರ್ಕಾರಿ ವ್ಯವಹಾರಗಳ ಸಮಿತಿ, ಗುಪ್ತಚರ ಆಯ್ಕೆ ಸಮಿತಿ, ನ್ಯಾಯಾಂಗ ಸಮಿತಿ ಮತ್ತು ಬಜೆಟ್ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಾರೆ.

ಸದ್ಯ ಕಮಲಾ ಹ್ಯಾರಿಸ್ ಗೆಲುವು ಅಮೆರಿಕಾದ ಕಪ್ಪು ಜನಾಂಗದ ಗೆಲುವಷ್ಟೆ ಅಲ್ಲದೇ ದಕ್ಷಿಣ ಭಾರತಿಯರಿಗೂ ಆಕೆ ಮನೆ ಮಗಳು. ತಮಿಳುನಾಡಿನ ತುಲಸೇಂದ್ರಪುರಂದಲ್ಲಿ ಆಕೆಯ ಗೆಲುವಿಗಾಗಿ ವಿಶೇಷ ಪೂಜೆ-ಪ್ರಾರ್ಥನೆಗಳನ್ನು ಮಾಡಿ ಹಾರೈಸಿದ್ದು ಕೂಡ ಇದೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...