Homeಅಂತರಾಷ್ಟ್ರೀಯಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಅಮೆರಿಕಾದಲ್ಲಿ ಒಬ್ಬ ವ್ಯಕ್ತಿಯ ಆಯ್ಕೆಯಲ್ಲಿ ಆ ವ್ಯಕ್ತಿಯ ಜನಾಂಗ ಮತ್ತು ಲಿಂಗವು ಅತ್ಯಂತ ನಿರ್ಣಾಯಕ ಮಾನದಂಡಗಳಾಗಿವೆ. ಅಂತಹ ರಾಷ್ಟ್ರದಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಜೋ ಬಿಡನ್, ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷ ಅಭ್ಯರ್ಥಿಯಾಗಿ ಘೋಷಿಸಿದರು.

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದ ಮೂಲದ ಕಮಲಾ ಹ್ಯಾರಿಸ್ ಅಮೆರಿಕಾ ಸೆನೆಟರ್ ಆದ ದಕ್ಷಿಣ ಏಷ್ಯಾದ ಮೊದಲ ಮಹಿಳೆ. ಹ್ಯಾರಿಸ್ ತಂದೆ ಜಮೈಕಾದವರು, ತಾಯಿ ದಕ್ಷಿಣ ಭಾರತದವರು, ತಂದೆಯಿಂದ ಬೇರ್ಪಟ್ಟು ತಾಯಿಯೊಂದಿಗೆ ಬೆಳೆದಿದ್ದಾರೆ.

ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಉನ್ನತ ವ್ಯಾಸಂಗಕ್ಕಾಗಿ ಬರ್ಕ್ಲಿ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಅಲ್ಲಿ ಅವರು ನಾಗರಿಕ ಹಕ್ಕುಗಳ ಚಳುವಳಿಯಲ್ಲಿ ತಮ್ಮ ಭಾವಿ ಪತಿ ಡೊನಾಲ್ಡ್ ಜೆ ಹ್ಯಾರಿಸ್‌ರನ್ನು ಭೇಟಿಯಾದರು.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ಹ್ಯಾರಿಸ್ ತಮ್ಮ ಮಾತುಗಳಲ್ಲಿ ಆಗ್ಗಾಗೆ ತನ್ನ ಮತ್ತು ಭಾರತದ ಸಂಬಂಧವನ್ನು ನೆನಪಿಸಿಕೊಂಡಿದ್ದಾರೆ. ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದ್ದು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು.

“ಆಕೆಯಲ್ಲಿ ಭಾರತೀಯ ಪರಂಪರೆ ಇನ್ನೂ ಇರುವುದರಿಂದ, ಕೆಲವೊಮ್ಮೆ ತನ್ನ ವೈಯಕ್ತಿಕ ಕಥೆಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಾರೆ” ಎಂದು 2019ರ ಅಕ್ಟೋಬರ್‌ನಲ್ಲಿ ಅಮೆರಿಕಾದ LA ಟೈಮ್ಸ್ ವರದಿ ಮಾಡಿತ್ತು.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇತ್ತಿಚೆಗೆ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್ ಮತ್ತು ಯಾವುದೇ ರೀತಿಯ ಟಿಕ್ಕಾ ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಭಾರತದ ಬಗ್ಗೆ ತನ್ನ ಮೂಲ ಭಾರತದ್ದು ಎಂಬುದನ್ನು ಹ್ಯಾರಿಸ್ ಎಂದಿಗೂ ಬಿಟ್ಟುಕೊಟ್ಟಿಲ್ಲ. ಸಿಗುವ ಪ್ರತಿ ಅವಕಾಶದಲ್ಲೂ ಭಾರತದ ಬಗೆಗಿನ ತಮ್ಮ ಪ್ರೀತಿಯನ್ನು ಒತ್ತಿ ಹೇಳುತ್ತಾ ಬಂದಿದ್ದಾರೆ.

Kamala Harris's husband and potential 'second gentleman' - BBC News
PC: BBC

ಡೊನಾಲ್ಡ್ ಟ್ರಂಪ್ ಅವರಿಂದ ಕಮ್ಯೂನಿಸ್ಟ್ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದ ಹ್ಯಾರಿಸ್ ಅಧ್ಯಯನ ಕೂಡ ಕಪ್ಪು ಜನರ ಅಧ್ಯಯನಗಳು, ನಾಯಕರು ಮತ್ತು ಸಂಸ್ಕೃತಿ ಕ್ಷೇತ್ರಕ್ಕೆ ಹತ್ತಿರವಾಗಿತ್ತು. ಹ್ಯಾರಿಸ್ “ಐತಿಹಾಸಿಕವಾಗಿ ಕಪ್ಪು ಕಾಲೇಜು ಮತ್ತು ವಿಶ್ವವಿದ್ಯಾಲಯ” ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಅಧ್ಯಯನ ಮಾಡಿದ್ದರು.

ಕಪ್ಪು ಮಹಿಳೆಯಾಗಿ ಹ್ಯಾರಿಸ್ ಹೆಸರು “ಬ್ಲ್ಯಾಕ್ ಲೈವ್ಸ್ ಮ್ಯಾಟರ್”(ಕಪ್ಪು ಜನರ ಜೀವನವೂ ಮುಖ್ಯ) ಚಳವಳಿಯ ಮುಂಚೂಣಿಯಲ್ಲಿದೆ. ಇದು 1960ರ ನಾಗರಿಕ ಹಕ್ಕುಗಳ ಚಳವಳಿಯ ನಂತರ ಅಮೆರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಕಪ್ಪು ಜನಾಂಗದ ಬಗ್ಗೆ ನಡೆದ ದೊಡ್ಡ ಪ್ರತಿಭಟನೆಗಳು.

13% ಇರುವ ಕಪ್ಪು ಜನಾಂಗದ ಮತದಾರರಿಗೆ ಹೋಲಿಸಿದರೆ ಏಷ್ಯಾದ ಅಮೆರಿಕನ್ನರು ಕೇವಲ 5% ಮತದಾರರನ್ನು ಹೊಂದಿದ್ದಾರೆ. ಅಮೆರಿಕಾದಲ್ಲಿ ಜನಾಂಗದ ಅಡಿಪಾಯವು ಕಪ್ಪು ಮತ್ತು ಬಿಳಿ ರಾಜಕೀಯದ ಮೇಲೆ ಸ್ಥಿರವಾಗಿದೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಉಪಾಧ್ಯಕ್ಷ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಲು ಕಾರಣವಾದ ಅಂಶಗಳು

ಈ ಬಾರಿಯ ಅಮೆರಿಕಾ ಚುನಾವಣೆಯ ಬದಲಾವಣೆಯ ಪರ್ವ ಬೈಡನ್‌ಗೆ, ಕಪ್ಪು, ಭಾರತೀಯ-ಅಮೆರಿಕನ್ ಮಹಿಳಾ ಅಭ್ಯರ್ಥಿ ಸುರಕ್ಷಿತ ಆಯ್ಕೆ ಎಂಬುದನ್ನು ತಿಳಿಸಿ ಕೊಟ್ಟಿತ್ತು. ಆಗ ಅವರ ಕಣ್ಣಿಗೆ ಬಿದ್ದವರು ಸೆನೆಟರ್‌ ಕಮಲಾ ಹ್ಯಾರಿಸ್.

ಆರಂಭದಲ್ಲಿ, ಬೈಡೆನ್‌ರ ಆಯ್ಕೆಗಳ ಸರಣಿಯು ಬಹುತೇಕ ಮಹಿಳೆಯರೆ ಆಗಿದ್ದರು. ಆದರೆ ಮೇ ತಿಂಗಳಲ್ಲಿ “ಬ್ಲ್ಯಾಕ್ ಲೈವ್ಸ್ ಮ್ಯಾಟರ್” ಚಳವಳಿ ಸ್ಫೋಟಗೊಂಡ ನಂತರ, ಬೈಡೆನ್‌ಗೆ ಕಪ್ಪು ಜನಾಂಗದ ವ್ಯಕ್ತಿಯನ್ನು ಆಯ್ಕೆ ಮಾಡಲು ಒತ್ತಡ ಉಂಟು ಮಾಡಿತ್ತು.

ನಂತರ ಬೈಡನ್ ಕಪ್ಪು ಮಹಿಳೆಯನ್ನು ಆಯ್ಕೆ ಮಾಡುವ ಉದ್ದೇಶವನ್ನು ಜೂನ್‌ನಲ್ಲಿ ಘೋಷಿಸಿದರು. ಹ್ಯಾರಿಸ್ ಅವರ ಆಯ್ಕೆಯು ಬೈಡನ್ ಅವರ ಮಧ್ಯಮ ಮತ್ತು ಸ್ಥಾಪನೆಯ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತದೆ. ರಾಜಕೀಯ ತಜ್ಞರು ಕಮಲಾ ಹ್ಯಾರಿಸ್ ಆಯ್ಕೆ ಮಾರ್ಚ್‌ನಲ್ಲಿಯೇ ನಿರ್ಧರಿಸಲಾಗಿದೆ ಎಂದಿದ್ದರು.

Senator Kamala Harris
PC:Daily News.com

ಸೆನೆಟ್ನಲ್ಲಿ ನಾಲ್ಕು ವರ್ಷಗಳಿಗಿಂತ ಕಡಿಮೆ ಅವಧಿಯ ಸೇವೆ ಸಲ್ಲಿಸುತ್ತಿರುವಾಗಲೇ, ಹ್ಯಾರಿಸ್ ಅನ್ನು ಡೆಮಾಕ್ರಟಿಕ್ ಪಕ್ಷದ ಮುಖ್ಯವಾಹಿನಿಯೊಳಗೆ ದೃಢವಾಗಿರಿಸಲಾಗಿದೆ. ಇತರ ಮಾಜಿ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಬರ್ನಿ ಸ್ಯಾಂಡರ್ಸ್ ಮತ್ತು ಎಲಿಜಬೆತ್ ವಾರೆನ್‌ರಂತೆಯೂ ಇಲ್ಲ, ಇತ್ತ ಬೈಡೆನ್‌ನಂತೆ ಕೇಂದ್ರಿಯವೂ ಆಗಿಲ್ಲ.

ಡೊನಾಲ್ಡ್ ಜೆ ಹ್ಯಾರಿಸ್, ಶ್ಯಾಮಲಾ ಗೋಪಾಲನ್ ಹ್ಯಾರಿಸ್ ಮಗಳಾಗಿ ಕಮಲಾ ದೇವಿ ಹ್ಯಾರಿಸ್ 1964ರ ಅಕ್ಟೋಬರ್ 20 ರಂದು ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ನಲ್ಲಿ ಜನಿಸಿದವರು. ಕಮಲಾ ಕೋಟ್-ಡೆಸ್-ನೀಗಸ್ ರಸ್ತೆಯ ನೊಟ್ರೆ-ಡೇಮ್-ಡೆಸ್-ನೀಗಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ನಂತರ ವೆಸ್ಟ್ಮೌಂಟ್ ನಿಂದ 1981 ರಲ್ಲಿ ಪದವಿ ಪಡೆದರು. ಆಗಸ್ಟ್ 22, 2014 ರಂದು, ಹ್ಯಾರಿಸ್ ಬ್ರೂಕ್ಲಿನ್ ಮೂಲದ ವಕೀಲ ಡೌಗ್ಲಾಸ್ ಎಮ್ಹಾಫ್ ಎಂಬ ಅವರನ್ನು ವಿವಾಹವಾದರು.

ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಕಮಲಾ ತಮ್ಮ ವೃತ್ತಿಜೀವನವನ್ನು ಅಲ್ಮೇಡಾ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿ ಕಚೇರಿಯಲ್ಲಿ ಪ್ರಾರಂಭಿಸಿದರು. ಅಲ್ಲಿ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದರು. 2003ರಲ್ಲಿ, ಅವರು ಸ್ಯಾನ್ ಫ್ರಾನ್ಸಿಸ್ಕೋದ ಜಿಲ್ಲಾ ವಕೀಲರಾದರು. ಎರಡು ಅವಧಿಯ ಅಧಿಕಾರದ ನಂತರ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆ ಮತ್ತು ಮೊದಲ ಕಪ್ಪು ವ್ಯಕ್ತಿಯಾಗಿ ಆಯ್ಕೆಯಾದರು. ಅಲ್ಲಿ ಕಮಲಾ ಅವರು 2011 ರಿಂದ 2017 ರವರೆಗೆ ಈ ಹುದ್ದೆಯನ್ನು ಅಲಂಕರಿಸಿದ್ದರು.

2017 ರಲ್ಲಿ ಕ್ಯಾಲಿಫೋರ್ನಿಯಾದ ಯುನೈಟೆಡ್ ಸ್ಟೇಟ್ಸ್ ಸೆನೆಟರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಆಫ್ರಿಕನ್-ಅಮೆರಿಕನ್ ಮಹಿಳೆ ಮತ್ತು ಇತಿಹಾಸದಲ್ಲಿ ಮೊದಲ ದಕ್ಷಿಣ ಏಷ್ಯಾ-ಅಮೆರಿಕನ್ ಸೆನೆಟರ್ ಆಗಿ ಹೊರಹೊಮ್ಮಿದರು. ಅವರು ಹೋಮ್ಲ್ಯಾಂಡ್ ಸೆಕ್ಯುರಿಟಿ ಮತ್ತು ಸರ್ಕಾರಿ ವ್ಯವಹಾರಗಳ ಸಮಿತಿ, ಗುಪ್ತಚರ ಆಯ್ಕೆ ಸಮಿತಿ, ನ್ಯಾಯಾಂಗ ಸಮಿತಿ ಮತ್ತು ಬಜೆಟ್ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಾರೆ.

ಸದ್ಯ ಕಮಲಾ ಹ್ಯಾರಿಸ್ ಗೆಲುವು ಅಮೆರಿಕಾದ ಕಪ್ಪು ಜನಾಂಗದ ಗೆಲುವಷ್ಟೆ ಅಲ್ಲದೇ ದಕ್ಷಿಣ ಭಾರತಿಯರಿಗೂ ಆಕೆ ಮನೆ ಮಗಳು. ತಮಿಳುನಾಡಿನ ತುಲಸೇಂದ್ರಪುರಂದಲ್ಲಿ ಆಕೆಯ ಗೆಲುವಿಗಾಗಿ ವಿಶೇಷ ಪೂಜೆ-ಪ್ರಾರ್ಥನೆಗಳನ್ನು ಮಾಡಿ ಹಾರೈಸಿದ್ದು ಕೂಡ ಇದೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...