Homeಕರ್ನಾಟಕಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ.

- Advertisement -
- Advertisement -

ಪಠ್ಯ ಪರಿಷ್ಕರಣೆಯಲ್ಲಿ ನೂರಾರು ಲೋಪಗಳು ಸಂಭವಿಸಿದ್ದರೂ ಸರ್ಕಾರ ಅದೇ ಪಠ್ಯಗಳನ್ನು ಬೋಧಿಸಲು ಮುಂದಾಗುತ್ತಿದ್ದಂತೆ ಹಲವು ವಲಯಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಪಠ್ಯ ಪರಿಷ್ಕರಣೆ ವಿರೋಧಿ ಹೋರಾಟಕ್ಕೆ ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿಗಳು ದನಿಗೂಡಿಸಿದ್ದು, ತಪ್ಪು ಸರಿಪಡಿಸಿಕೊಳ್ಳದಿದ್ದರೆ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಪರಿಷ್ಕರಣೆಯಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ ಪಠ್ಯವನ್ನು ರೋಹಿತ್ ಚಕ್ರತೀರ್ಥ ಸಮಿತಿಯು ಒಂದು ವಾಕ್ಯಕ್ಕೆ ಇಳಿಸಿದೆ ಎಂಬು ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರೀ ಗೊಂದಲ ಸೃಷ್ಟಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಆದಂತಹ ಲೋಪದೋಷಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ ಎಂದು ಮಾಧ್ಯಮಗಳ ಮೂಲಕ ಹೇಳಲು ಇಷ್ಟಪಡುತ್ತೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಶಿಕ್ಷಣವನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂಬುದು ನಮ್ಮ ಧ್ಯೇಯ. ಕುವೆಂಪುರವರ, ಜಗಜ್ಯೋತಿ ಬಸವಣ್ಣನವರ, ಕನಕದಾಸರ ಸತ್ಯವಾದ ಜೀವನ ಚರಿತ್ರೆಯನ್ನು ಎಲ್ಲಾ ಸಮುದಾಯಕ್ಕೆ ಪ್ರಾಮಾಣಿಕವಾಗಿ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಲ್ಲಿ ಕೆಲವೊಂದು ಅಂಶಗಳನ್ನು ಮುಚ್ಚಿಟ್ಟು, ಇಲ್ಲ ಸಲ್ಲದ ಅಂಶಗಳನ್ನು ಮಕ್ಕಳಿಗೆ ಕಲಿಸುವುದು, ಸಮಾಜಕ್ಕೆ ತಿಳಿಸುವುದು ಅಕ್ಷಮ್ಯ. ಈ ತಪ್ಪನ್ನು ನೀವು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೀರಿ ಎಂದು ನಂಬಿದ್ದೇನೆ. ತಪ್ಪಿದ್ದಲ್ಲಿ ನಾವು ಕೂಡ ಎಲ್ಲರ ಜೊತೆಗೂಡಿ ಹೋರಾಟಕ್ಕಿಳಿಯಬೇಕಾಗುತ್ತೆ ಎಂದು ಅವರು ಹೇಳಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ಆದರೆ ಕರ್ನಾಟಕದ ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ. ಪೂರ್ತಿ ವಿವರಗಳಿಗಾಗಿ ಈ ಸುದ್ದಿ ಓದಿ

ಇದನ್ನೂ ಓದಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...