Homeಕರ್ನಾಟಕಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ.

- Advertisement -
- Advertisement -

ಪಠ್ಯ ಪರಿಷ್ಕರಣೆಯಲ್ಲಿ ನೂರಾರು ಲೋಪಗಳು ಸಂಭವಿಸಿದ್ದರೂ ಸರ್ಕಾರ ಅದೇ ಪಠ್ಯಗಳನ್ನು ಬೋಧಿಸಲು ಮುಂದಾಗುತ್ತಿದ್ದಂತೆ ಹಲವು ವಲಯಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಪಠ್ಯ ಪರಿಷ್ಕರಣೆ ವಿರೋಧಿ ಹೋರಾಟಕ್ಕೆ ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿಗಳು ದನಿಗೂಡಿಸಿದ್ದು, ತಪ್ಪು ಸರಿಪಡಿಸಿಕೊಳ್ಳದಿದ್ದರೆ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಪರಿಷ್ಕರಣೆಯಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ ಪಠ್ಯವನ್ನು ರೋಹಿತ್ ಚಕ್ರತೀರ್ಥ ಸಮಿತಿಯು ಒಂದು ವಾಕ್ಯಕ್ಕೆ ಇಳಿಸಿದೆ ಎಂಬು ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರೀ ಗೊಂದಲ ಸೃಷ್ಟಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಆದಂತಹ ಲೋಪದೋಷಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ ಎಂದು ಮಾಧ್ಯಮಗಳ ಮೂಲಕ ಹೇಳಲು ಇಷ್ಟಪಡುತ್ತೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಶಿಕ್ಷಣವನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂಬುದು ನಮ್ಮ ಧ್ಯೇಯ. ಕುವೆಂಪುರವರ, ಜಗಜ್ಯೋತಿ ಬಸವಣ್ಣನವರ, ಕನಕದಾಸರ ಸತ್ಯವಾದ ಜೀವನ ಚರಿತ್ರೆಯನ್ನು ಎಲ್ಲಾ ಸಮುದಾಯಕ್ಕೆ ಪ್ರಾಮಾಣಿಕವಾಗಿ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಲ್ಲಿ ಕೆಲವೊಂದು ಅಂಶಗಳನ್ನು ಮುಚ್ಚಿಟ್ಟು, ಇಲ್ಲ ಸಲ್ಲದ ಅಂಶಗಳನ್ನು ಮಕ್ಕಳಿಗೆ ಕಲಿಸುವುದು, ಸಮಾಜಕ್ಕೆ ತಿಳಿಸುವುದು ಅಕ್ಷಮ್ಯ. ಈ ತಪ್ಪನ್ನು ನೀವು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೀರಿ ಎಂದು ನಂಬಿದ್ದೇನೆ. ತಪ್ಪಿದ್ದಲ್ಲಿ ನಾವು ಕೂಡ ಎಲ್ಲರ ಜೊತೆಗೂಡಿ ಹೋರಾಟಕ್ಕಿಳಿಯಬೇಕಾಗುತ್ತೆ ಎಂದು ಅವರು ಹೇಳಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ಆದರೆ ಕರ್ನಾಟಕದ ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ. ಪೂರ್ತಿ ವಿವರಗಳಿಗಾಗಿ ಈ ಸುದ್ದಿ ಓದಿ

ಇದನ್ನೂ ಓದಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...