Homeಕರ್ನಾಟಕಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ.

- Advertisement -
- Advertisement -

ಪಠ್ಯ ಪರಿಷ್ಕರಣೆಯಲ್ಲಿ ನೂರಾರು ಲೋಪಗಳು ಸಂಭವಿಸಿದ್ದರೂ ಸರ್ಕಾರ ಅದೇ ಪಠ್ಯಗಳನ್ನು ಬೋಧಿಸಲು ಮುಂದಾಗುತ್ತಿದ್ದಂತೆ ಹಲವು ವಲಯಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಪಠ್ಯ ಪರಿಷ್ಕರಣೆ ವಿರೋಧಿ ಹೋರಾಟಕ್ಕೆ ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿಗಳು ದನಿಗೂಡಿಸಿದ್ದು, ತಪ್ಪು ಸರಿಪಡಿಸಿಕೊಳ್ಳದಿದ್ದರೆ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಪರಿಷ್ಕರಣೆಯಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ ಪಠ್ಯವನ್ನು ರೋಹಿತ್ ಚಕ್ರತೀರ್ಥ ಸಮಿತಿಯು ಒಂದು ವಾಕ್ಯಕ್ಕೆ ಇಳಿಸಿದೆ ಎಂಬು ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಉದ್ಧಟತನಗಳು, ಕಾರ್ಯವೈಖರಿಗಳು ಇದೇ ರೀತಿಯಾಗಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರೀ ಗೊಂದಲ ಸೃಷ್ಟಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಆದಂತಹ ಲೋಪದೋಷಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ ಎಂದು ಮಾಧ್ಯಮಗಳ ಮೂಲಕ ಹೇಳಲು ಇಷ್ಟಪಡುತ್ತೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಶಿಕ್ಷಣವನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂಬುದು ನಮ್ಮ ಧ್ಯೇಯ. ಕುವೆಂಪುರವರ, ಜಗಜ್ಯೋತಿ ಬಸವಣ್ಣನವರ, ಕನಕದಾಸರ ಸತ್ಯವಾದ ಜೀವನ ಚರಿತ್ರೆಯನ್ನು ಎಲ್ಲಾ ಸಮುದಾಯಕ್ಕೆ ಪ್ರಾಮಾಣಿಕವಾಗಿ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಲ್ಲಿ ಕೆಲವೊಂದು ಅಂಶಗಳನ್ನು ಮುಚ್ಚಿಟ್ಟು, ಇಲ್ಲ ಸಲ್ಲದ ಅಂಶಗಳನ್ನು ಮಕ್ಕಳಿಗೆ ಕಲಿಸುವುದು, ಸಮಾಜಕ್ಕೆ ತಿಳಿಸುವುದು ಅಕ್ಷಮ್ಯ. ಈ ತಪ್ಪನ್ನು ನೀವು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೀರಿ ಎಂದು ನಂಬಿದ್ದೇನೆ. ತಪ್ಪಿದ್ದಲ್ಲಿ ನಾವು ಕೂಡ ಎಲ್ಲರ ಜೊತೆಗೂಡಿ ಹೋರಾಟಕ್ಕಿಳಿಯಬೇಕಾಗುತ್ತೆ ಎಂದು ಅವರು ಹೇಳಿದ್ದಾರೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ಆದರೆ ಕರ್ನಾಟಕದ ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ. ಪೂರ್ತಿ ವಿವರಗಳಿಗಾಗಿ ಈ ಸುದ್ದಿ ಓದಿ

ಇದನ್ನೂ ಓದಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...