Homeಮುಖಪುಟ'ಕಾಂಚ ಗಚಿಬೌಲಿ' ಭೂ ವಿವಾದ: ಮೂವರು ಸಚಿವರ ಸಮಿತಿ ರಚಿಸಿದ ತೆಲಂಗಾಣ ಸರ್ಕಾರ

‘ಕಾಂಚ ಗಚಿಬೌಲಿ’ ಭೂ ವಿವಾದ: ಮೂವರು ಸಚಿವರ ಸಮಿತಿ ರಚಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ (ಹೆಚ್‌ಒಯು) ಜಮೀನಿಗೆ ಹೊಂದಿಕೊಂಡಿರುವ ‘ಕಾಂಚ ಗಚಿಬೌಲಿ’ಯ 400 ಎಕರೆ ಅರಣ್ಯ ನಾಶ ವಿವಾದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ತೆಲಂಗಾಣ ಸರ್ಕಾರ ಗುರುವಾರ (ಏ.3) ಮೂವರು ಸಚಿವರ ಸಮಿತಿ ರಚಿಸಿದೆ.

ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ, ಕೈಗಾರಿಕೆ ಮತ್ತು ಹಾಗೂ ಐಟಿ ಸಚಿವ ಡಿ. ಶ್ರೀಧರ್ ಬಾಬು ಮತ್ತು ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಸಮಿತಿಯಲ್ಲಿದ್ದಾರೆ.

ಈ ಸಮಿತಿಯು ಭೂ ವಿವಾದವನ್ನು ಪರಿಹರಿಸಲು ಹೈದರಾಬಾದ್ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ, ಜಂಟಿ ಕ್ರಿಯಾ ಸಮಿತಿ (ಜೆಎಸಿ) ಮತ್ತು ನಾಗರಿಕ ಗುಂಪುಗಳು, ವಿದ್ಯಾರ್ಥಿಗಳ ನಿಯೋಗ ಸೇರಿದಂತೆ ಈ ಪ್ರಕರಣದ ಎಲ್ಲಾ ಪಕ್ಷಕಾರರೊಂದಿಗೆ ಸಮಾಲೋಚನೆ ನಡೆಸಲಿದೆ.

ವಿವಾದಿತ ಭೂಮಿಯಲ್ಲಿ ಮರಗಳ ತೆರವು ಕಾರ್ಯಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಮುಂದಿನ ಆದೇಶದವರೆಗೆ ಮರಗಳನ್ನು ಉರುಳಿಸದಂತೆ ನೋಡಿಕೊಳ್ಳಲು ತೆಲಂಗಾಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ತೆಲಂಗಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ (ನ್ಯಾಯಾಂಗ) ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಸರ್ಕಾರ ಅರಣ್ಯ ನಾಶ ಮುಂದುವರೆಸಬಾರದು ಎಂದು ಹೈದರಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

ಪ್ರತಿಪಕ್ಷಗಳಾದ ಬಿಆರ್‌ಎಸ್, ಬಿಜೆಪಿ, ಸಿಪಿಐ, ಸಿಪಿಐ-ಎಂ ಮತ್ತು ಅವುಗಳಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿ ಗುಂಪುಗಳು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸಿವೆ.

ಕಳೆದ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಸಚಿವರಾದ ಮಲ್ಲು ಭಟ್ಟಿ ವಿಕ್ರಮಾರ್ಕ, ಶ್ರೀಧರ್ ಬಾಬು ಮತ್ತು ಶ್ರೀನಿವಾಸ್ ರೆಡ್ಡಿ, “ರಾಜಕೀಯ ಲಾಭಕ್ಕಾಗಿ ಜಮೀನಿನ ಬಗ್ಗೆ ಪ್ರತಿಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿ ಸುಳ್ಳುಗಳನ್ನು ಹರಡುತ್ತಿವೆ” ಎಂದು ವಾಗ್ದಾಳಿ ನಡೆಸಿದ್ದರು. ವಿರೋಧ ಪಕ್ಷಗಳ ಮಾತು ಕೇಳಿ ದಾರಿ ತಪ್ಪದಂತೆ ವಿದ್ಯಾರ್ಥಿಗಳಲ್ಲಿ ಅವರು ಮನವಿ ಮಾಡಿದ್ದರು.

ಸರ್ಕಾರಿ ಕೆಲಸಗಳು ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದರು.

ವಕ್ಫ್‌ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...