Homeಮುಖಪುಟಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | 'ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು...

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಹೈದರಾಬಾದ್‌ನ ಕಾಂಚ ಗಚಿಬೌಲಿ ಪ್ರದೇಶದಲ್ಲಿ ಅರಣ್ಯನಾಶ ಮಾಡಿದ ತೆಲಂಗಾಣ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.15) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಮತ್ತೆ ಅರಣ್ಯ ಬೆಳೆಸಿ, ಇಲ್ಲವೇ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದೆ.

“ಸರ್ಕಾರ ದೀರ್ಘ ವಾರಾಂತ್ಯದ (ಲಾಂಗ್ ವೀಕೆಂಡ್) ವೇಳೆ ಅರಣ್ಯ ನಾಶ ಮಾಡಿದೆ. ಹಾಗಾಗಿ, ಇದೊಂದು ಪೂರ್ವಯೋಜಿತ ಕೃತ್ಯ ಎಂದು ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಾಂಚ ಗಚಿಬೌಲಿಯ ಅರಣ್ಯದ ಸ್ಥಿತಿಯನ್ನು ಪರಿಶೀಲನೆ ನಡೆಸಿದ ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಆ ಪ್ರದೇಶವನ್ನು ಅರಣ್ಯವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಮತ್ತೆ ಅರಣ್ಯ ಬೆಳೆಸಬೇಕೆಂದು ಶಿಫಾರಸು ಮಾಡಿ ಅಂತಿಮ ವರದಿಯನ್ನು ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮೇಲಿನ ಆದೇಶ ನೀಡಿದೆ.

“ನಾವು ನಿಮ್ಮನ್ನು ಗಮನಿಸುತ್ತಿದ್ದೇವೆ. ನೀವು ನಿಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ಇದರಲ್ಲಿ ಎಲ್ಲಾ ಅಧಿಕಾರಿಗಳು ಭಾಗಿಯಾಗಿರುವುದರಿಂದ ನೀವು ದೊಡ್ಡ ತೊಂದರೆಗೆ ಸಿಲುಕುತ್ತೀರಿ. ದೀರ್ಘ ವಾರಾಂತ್ಯದ ಲಾಭ ಪಡೆದು ನೀವು ಇಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದೀರಿ. ನೀವು ಪೋಟೋಗಳನ್ನು ನೋಡಿದ್ದೀರಾ? ಡಜನ್‌ಗಟ್ಟಲೆ ಬುಲ್ಡೋಜರ್‌ಗಳನ್ನು ತಂದು ನಿಲ್ಲಿಸಲಾಗಿತ್ತು. ಪ್ರಾಥಮಿಕವಾಗಿ, ಇದೆಲ್ಲವೂ ಪೂರ್ವ ಯೋಜಿತವಾಗಿದೆ ಎಂದು ತೋರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

“ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳನ್ನು ತಾತ್ಕಾಲಿಕ ಜೈಲಿಗೆ ಕಳುಹಿಸಬೇಕೆಂದು ನೀವು ಬಯಸಿದರೆ, ನಾವು ಅದನ್ನು ಮಾಡುತ್ತೇವೆ. ನಾವು ಯಾವಾಗಲೂ ಸುಸ್ಥಿರ ಅಭಿವೃದ್ಧಿಯ ಪ್ರತಿಪಾದಕರು, ಇಲ್ಲಿ ಪ್ರಶ್ನೆಯೆಂದರೆ 1,000 ಮರಗಳನ್ನು ತೆರವುಗೊಳಿಸಿರುವುದು ಮತ್ತು ದೀರ್ಘ ರಜೆಯ ಲಾಭವನ್ನು ದುರುಪಯೋಗ ಮಾಡಿಕೊಂಡಿರುವುದು (ಅರಣ್ಯ ನಾಶಕ್ಕೆ ಬಳಸಿರುವುದು)” ಎಂದಿದ್ದಾರೆ.

ತೆಲಂಗಾಣ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು, ವಾರಾಂತ್ಯದಲ್ಲಿ ತರಾತುರಿಯಲ್ಲಿ ಮರ ತೆರವು ಮಾಡಿಲ್ಲ. ಒಂದು ವರ್ಷದ ಸಾಂಸ್ಥಿಕ ಪ್ರಕ್ರಿಯೆ ಬಳಿಕ ತೆರವು ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಅರಣ್ಯ ನಾಶದ ನಿಮ್ಮ ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದರೆ ದೀರ್ಘ ವಾರಾಂತ್ಯದ ಆರಂಭದಲ್ಲಿ ಏಕೆ ಮರಗಳನ್ನು ತೆರವು ಮಾಡಲು ಪ್ರಾರಂಭಿಸಿದಿರಿ? ಪುನಃ ಅರಣ್ಯ ಬೆಳೆಸುವ ಯಾವುದೇ ಬದ್ಧತೆಯಿಲ್ಲದೆ ಸರ್ಕಾರ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಆ ಸ್ಥಳದಲ್ಲಿ ಐಟಿ ಪಾರ್ಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಹಿಂದೆ ತೆಲಂಗಾಣ ಸರ್ಕಾರ ಪರಿಸರ ಅನುಮತಿ ಪಡೆಯುವಲ್ಲಿ ವಿಫಲವಾಗಿರುವುದನ್ನು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ನಿರ್ಮಾಣದ ಒಪ್ಪಿಗೆ’ಗೆ ಮಾತ್ರ ಅರ್ಜಿ ಸಲ್ಲಿಸಿರುವುದನ್ನು ಸಿಇಸಿ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು ಎಂದು ವರದಿಯಾಗಿದೆ.

ಗುರುವಾರ ಸಲ್ಲಿಸಿದ ವರದಿಯಲ್ಲಿ ಕಾಂಚ ಗಚಿಬೌಲಿ ಪ್ರದೇಶ ಅರಣ್ಯದ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿದೆ ಎಂದು ಸಿಇಸಿ ದೃಢಪಡಿಸಿದೆ. ಆ ಪ್ರದೇಶವನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಮೀಸಲು ಅರಣ್ಯ ಎಂದು ಘೋಷಿಸಲು ಶಿಫಾರಸು ಮಾಡಿದೆ.

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದರು. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿತ್ತು. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿತ್ತು.

ಅರಣ್ಯ ನಾಶ ತಡೆಯುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು.

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...