Homeಮುಖಪುಟಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | 'ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು...

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಹೈದರಾಬಾದ್‌ನ ಕಾಂಚ ಗಚಿಬೌಲಿ ಪ್ರದೇಶದಲ್ಲಿ ಅರಣ್ಯನಾಶ ಮಾಡಿದ ತೆಲಂಗಾಣ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.15) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಮತ್ತೆ ಅರಣ್ಯ ಬೆಳೆಸಿ, ಇಲ್ಲವೇ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದೆ.

“ಸರ್ಕಾರ ದೀರ್ಘ ವಾರಾಂತ್ಯದ (ಲಾಂಗ್ ವೀಕೆಂಡ್) ವೇಳೆ ಅರಣ್ಯ ನಾಶ ಮಾಡಿದೆ. ಹಾಗಾಗಿ, ಇದೊಂದು ಪೂರ್ವಯೋಜಿತ ಕೃತ್ಯ ಎಂದು ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಾಂಚ ಗಚಿಬೌಲಿಯ ಅರಣ್ಯದ ಸ್ಥಿತಿಯನ್ನು ಪರಿಶೀಲನೆ ನಡೆಸಿದ ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಆ ಪ್ರದೇಶವನ್ನು ಅರಣ್ಯವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಮತ್ತೆ ಅರಣ್ಯ ಬೆಳೆಸಬೇಕೆಂದು ಶಿಫಾರಸು ಮಾಡಿ ಅಂತಿಮ ವರದಿಯನ್ನು ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮೇಲಿನ ಆದೇಶ ನೀಡಿದೆ.

“ನಾವು ನಿಮ್ಮನ್ನು ಗಮನಿಸುತ್ತಿದ್ದೇವೆ. ನೀವು ನಿಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ಇದರಲ್ಲಿ ಎಲ್ಲಾ ಅಧಿಕಾರಿಗಳು ಭಾಗಿಯಾಗಿರುವುದರಿಂದ ನೀವು ದೊಡ್ಡ ತೊಂದರೆಗೆ ಸಿಲುಕುತ್ತೀರಿ. ದೀರ್ಘ ವಾರಾಂತ್ಯದ ಲಾಭ ಪಡೆದು ನೀವು ಇಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದೀರಿ. ನೀವು ಪೋಟೋಗಳನ್ನು ನೋಡಿದ್ದೀರಾ? ಡಜನ್‌ಗಟ್ಟಲೆ ಬುಲ್ಡೋಜರ್‌ಗಳನ್ನು ತಂದು ನಿಲ್ಲಿಸಲಾಗಿತ್ತು. ಪ್ರಾಥಮಿಕವಾಗಿ, ಇದೆಲ್ಲವೂ ಪೂರ್ವ ಯೋಜಿತವಾಗಿದೆ ಎಂದು ತೋರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

“ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳನ್ನು ತಾತ್ಕಾಲಿಕ ಜೈಲಿಗೆ ಕಳುಹಿಸಬೇಕೆಂದು ನೀವು ಬಯಸಿದರೆ, ನಾವು ಅದನ್ನು ಮಾಡುತ್ತೇವೆ. ನಾವು ಯಾವಾಗಲೂ ಸುಸ್ಥಿರ ಅಭಿವೃದ್ಧಿಯ ಪ್ರತಿಪಾದಕರು, ಇಲ್ಲಿ ಪ್ರಶ್ನೆಯೆಂದರೆ 1,000 ಮರಗಳನ್ನು ತೆರವುಗೊಳಿಸಿರುವುದು ಮತ್ತು ದೀರ್ಘ ರಜೆಯ ಲಾಭವನ್ನು ದುರುಪಯೋಗ ಮಾಡಿಕೊಂಡಿರುವುದು (ಅರಣ್ಯ ನಾಶಕ್ಕೆ ಬಳಸಿರುವುದು)” ಎಂದಿದ್ದಾರೆ.

ತೆಲಂಗಾಣ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು, ವಾರಾಂತ್ಯದಲ್ಲಿ ತರಾತುರಿಯಲ್ಲಿ ಮರ ತೆರವು ಮಾಡಿಲ್ಲ. ಒಂದು ವರ್ಷದ ಸಾಂಸ್ಥಿಕ ಪ್ರಕ್ರಿಯೆ ಬಳಿಕ ತೆರವು ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಅರಣ್ಯ ನಾಶದ ನಿಮ್ಮ ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದರೆ ದೀರ್ಘ ವಾರಾಂತ್ಯದ ಆರಂಭದಲ್ಲಿ ಏಕೆ ಮರಗಳನ್ನು ತೆರವು ಮಾಡಲು ಪ್ರಾರಂಭಿಸಿದಿರಿ? ಪುನಃ ಅರಣ್ಯ ಬೆಳೆಸುವ ಯಾವುದೇ ಬದ್ಧತೆಯಿಲ್ಲದೆ ಸರ್ಕಾರ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಆ ಸ್ಥಳದಲ್ಲಿ ಐಟಿ ಪಾರ್ಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಹಿಂದೆ ತೆಲಂಗಾಣ ಸರ್ಕಾರ ಪರಿಸರ ಅನುಮತಿ ಪಡೆಯುವಲ್ಲಿ ವಿಫಲವಾಗಿರುವುದನ್ನು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ನಿರ್ಮಾಣದ ಒಪ್ಪಿಗೆ’ಗೆ ಮಾತ್ರ ಅರ್ಜಿ ಸಲ್ಲಿಸಿರುವುದನ್ನು ಸಿಇಸಿ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು ಎಂದು ವರದಿಯಾಗಿದೆ.

ಗುರುವಾರ ಸಲ್ಲಿಸಿದ ವರದಿಯಲ್ಲಿ ಕಾಂಚ ಗಚಿಬೌಲಿ ಪ್ರದೇಶ ಅರಣ್ಯದ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿದೆ ಎಂದು ಸಿಇಸಿ ದೃಢಪಡಿಸಿದೆ. ಆ ಪ್ರದೇಶವನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಮೀಸಲು ಅರಣ್ಯ ಎಂದು ಘೋಷಿಸಲು ಶಿಫಾರಸು ಮಾಡಿದೆ.

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದರು. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿತ್ತು. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿತ್ತು.

ಅರಣ್ಯ ನಾಶ ತಡೆಯುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು.

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...