Homeಮುಖಪುಟಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | 'ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು...

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಹೈದರಾಬಾದ್‌ನ ಕಾಂಚ ಗಚಿಬೌಲಿ ಪ್ರದೇಶದಲ್ಲಿ ಅರಣ್ಯನಾಶ ಮಾಡಿದ ತೆಲಂಗಾಣ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.15) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಮತ್ತೆ ಅರಣ್ಯ ಬೆಳೆಸಿ, ಇಲ್ಲವೇ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದೆ.

“ಸರ್ಕಾರ ದೀರ್ಘ ವಾರಾಂತ್ಯದ (ಲಾಂಗ್ ವೀಕೆಂಡ್) ವೇಳೆ ಅರಣ್ಯ ನಾಶ ಮಾಡಿದೆ. ಹಾಗಾಗಿ, ಇದೊಂದು ಪೂರ್ವಯೋಜಿತ ಕೃತ್ಯ ಎಂದು ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಾಂಚ ಗಚಿಬೌಲಿಯ ಅರಣ್ಯದ ಸ್ಥಿತಿಯನ್ನು ಪರಿಶೀಲನೆ ನಡೆಸಿದ ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಆ ಪ್ರದೇಶವನ್ನು ಅರಣ್ಯವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಮತ್ತೆ ಅರಣ್ಯ ಬೆಳೆಸಬೇಕೆಂದು ಶಿಫಾರಸು ಮಾಡಿ ಅಂತಿಮ ವರದಿಯನ್ನು ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮೇಲಿನ ಆದೇಶ ನೀಡಿದೆ.

“ನಾವು ನಿಮ್ಮನ್ನು ಗಮನಿಸುತ್ತಿದ್ದೇವೆ. ನೀವು ನಿಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ಇದರಲ್ಲಿ ಎಲ್ಲಾ ಅಧಿಕಾರಿಗಳು ಭಾಗಿಯಾಗಿರುವುದರಿಂದ ನೀವು ದೊಡ್ಡ ತೊಂದರೆಗೆ ಸಿಲುಕುತ್ತೀರಿ. ದೀರ್ಘ ವಾರಾಂತ್ಯದ ಲಾಭ ಪಡೆದು ನೀವು ಇಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದೀರಿ. ನೀವು ಪೋಟೋಗಳನ್ನು ನೋಡಿದ್ದೀರಾ? ಡಜನ್‌ಗಟ್ಟಲೆ ಬುಲ್ಡೋಜರ್‌ಗಳನ್ನು ತಂದು ನಿಲ್ಲಿಸಲಾಗಿತ್ತು. ಪ್ರಾಥಮಿಕವಾಗಿ, ಇದೆಲ್ಲವೂ ಪೂರ್ವ ಯೋಜಿತವಾಗಿದೆ ಎಂದು ತೋರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

“ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳನ್ನು ತಾತ್ಕಾಲಿಕ ಜೈಲಿಗೆ ಕಳುಹಿಸಬೇಕೆಂದು ನೀವು ಬಯಸಿದರೆ, ನಾವು ಅದನ್ನು ಮಾಡುತ್ತೇವೆ. ನಾವು ಯಾವಾಗಲೂ ಸುಸ್ಥಿರ ಅಭಿವೃದ್ಧಿಯ ಪ್ರತಿಪಾದಕರು, ಇಲ್ಲಿ ಪ್ರಶ್ನೆಯೆಂದರೆ 1,000 ಮರಗಳನ್ನು ತೆರವುಗೊಳಿಸಿರುವುದು ಮತ್ತು ದೀರ್ಘ ರಜೆಯ ಲಾಭವನ್ನು ದುರುಪಯೋಗ ಮಾಡಿಕೊಂಡಿರುವುದು (ಅರಣ್ಯ ನಾಶಕ್ಕೆ ಬಳಸಿರುವುದು)” ಎಂದಿದ್ದಾರೆ.

ತೆಲಂಗಾಣ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು, ವಾರಾಂತ್ಯದಲ್ಲಿ ತರಾತುರಿಯಲ್ಲಿ ಮರ ತೆರವು ಮಾಡಿಲ್ಲ. ಒಂದು ವರ್ಷದ ಸಾಂಸ್ಥಿಕ ಪ್ರಕ್ರಿಯೆ ಬಳಿಕ ತೆರವು ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಅರಣ್ಯ ನಾಶದ ನಿಮ್ಮ ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದರೆ ದೀರ್ಘ ವಾರಾಂತ್ಯದ ಆರಂಭದಲ್ಲಿ ಏಕೆ ಮರಗಳನ್ನು ತೆರವು ಮಾಡಲು ಪ್ರಾರಂಭಿಸಿದಿರಿ? ಪುನಃ ಅರಣ್ಯ ಬೆಳೆಸುವ ಯಾವುದೇ ಬದ್ಧತೆಯಿಲ್ಲದೆ ಸರ್ಕಾರ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಆ ಸ್ಥಳದಲ್ಲಿ ಐಟಿ ಪಾರ್ಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಹಿಂದೆ ತೆಲಂಗಾಣ ಸರ್ಕಾರ ಪರಿಸರ ಅನುಮತಿ ಪಡೆಯುವಲ್ಲಿ ವಿಫಲವಾಗಿರುವುದನ್ನು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ನಿರ್ಮಾಣದ ಒಪ್ಪಿಗೆ’ಗೆ ಮಾತ್ರ ಅರ್ಜಿ ಸಲ್ಲಿಸಿರುವುದನ್ನು ಸಿಇಸಿ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು ಎಂದು ವರದಿಯಾಗಿದೆ.

ಗುರುವಾರ ಸಲ್ಲಿಸಿದ ವರದಿಯಲ್ಲಿ ಕಾಂಚ ಗಚಿಬೌಲಿ ಪ್ರದೇಶ ಅರಣ್ಯದ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿದೆ ಎಂದು ಸಿಇಸಿ ದೃಢಪಡಿಸಿದೆ. ಆ ಪ್ರದೇಶವನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಮೀಸಲು ಅರಣ್ಯ ಎಂದು ಘೋಷಿಸಲು ಶಿಫಾರಸು ಮಾಡಿದೆ.

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದರು. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿತ್ತು. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿತ್ತು.

ಅರಣ್ಯ ನಾಶ ತಡೆಯುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು.

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...