Homeಮುಖಪುಟಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | 'ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು...

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಹೈದರಾಬಾದ್‌ನ ಕಾಂಚ ಗಚಿಬೌಲಿ ಪ್ರದೇಶದಲ್ಲಿ ಅರಣ್ಯನಾಶ ಮಾಡಿದ ತೆಲಂಗಾಣ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.15) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಮತ್ತೆ ಅರಣ್ಯ ಬೆಳೆಸಿ, ಇಲ್ಲವೇ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದೆ.

“ಸರ್ಕಾರ ದೀರ್ಘ ವಾರಾಂತ್ಯದ (ಲಾಂಗ್ ವೀಕೆಂಡ್) ವೇಳೆ ಅರಣ್ಯ ನಾಶ ಮಾಡಿದೆ. ಹಾಗಾಗಿ, ಇದೊಂದು ಪೂರ್ವಯೋಜಿತ ಕೃತ್ಯ ಎಂದು ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಾಂಚ ಗಚಿಬೌಲಿಯ ಅರಣ್ಯದ ಸ್ಥಿತಿಯನ್ನು ಪರಿಶೀಲನೆ ನಡೆಸಿದ ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಆ ಪ್ರದೇಶವನ್ನು ಅರಣ್ಯವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಮತ್ತೆ ಅರಣ್ಯ ಬೆಳೆಸಬೇಕೆಂದು ಶಿಫಾರಸು ಮಾಡಿ ಅಂತಿಮ ವರದಿಯನ್ನು ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮೇಲಿನ ಆದೇಶ ನೀಡಿದೆ.

“ನಾವು ನಿಮ್ಮನ್ನು ಗಮನಿಸುತ್ತಿದ್ದೇವೆ. ನೀವು ನಿಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ. ಇದರಲ್ಲಿ ಎಲ್ಲಾ ಅಧಿಕಾರಿಗಳು ಭಾಗಿಯಾಗಿರುವುದರಿಂದ ನೀವು ದೊಡ್ಡ ತೊಂದರೆಗೆ ಸಿಲುಕುತ್ತೀರಿ. ದೀರ್ಘ ವಾರಾಂತ್ಯದ ಲಾಭ ಪಡೆದು ನೀವು ಇಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದೀರಿ. ನೀವು ಪೋಟೋಗಳನ್ನು ನೋಡಿದ್ದೀರಾ? ಡಜನ್‌ಗಟ್ಟಲೆ ಬುಲ್ಡೋಜರ್‌ಗಳನ್ನು ತಂದು ನಿಲ್ಲಿಸಲಾಗಿತ್ತು. ಪ್ರಾಥಮಿಕವಾಗಿ, ಇದೆಲ್ಲವೂ ಪೂರ್ವ ಯೋಜಿತವಾಗಿದೆ ಎಂದು ತೋರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

“ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳನ್ನು ತಾತ್ಕಾಲಿಕ ಜೈಲಿಗೆ ಕಳುಹಿಸಬೇಕೆಂದು ನೀವು ಬಯಸಿದರೆ, ನಾವು ಅದನ್ನು ಮಾಡುತ್ತೇವೆ. ನಾವು ಯಾವಾಗಲೂ ಸುಸ್ಥಿರ ಅಭಿವೃದ್ಧಿಯ ಪ್ರತಿಪಾದಕರು, ಇಲ್ಲಿ ಪ್ರಶ್ನೆಯೆಂದರೆ 1,000 ಮರಗಳನ್ನು ತೆರವುಗೊಳಿಸಿರುವುದು ಮತ್ತು ದೀರ್ಘ ರಜೆಯ ಲಾಭವನ್ನು ದುರುಪಯೋಗ ಮಾಡಿಕೊಂಡಿರುವುದು (ಅರಣ್ಯ ನಾಶಕ್ಕೆ ಬಳಸಿರುವುದು)” ಎಂದಿದ್ದಾರೆ.

ತೆಲಂಗಾಣ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರು, ವಾರಾಂತ್ಯದಲ್ಲಿ ತರಾತುರಿಯಲ್ಲಿ ಮರ ತೆರವು ಮಾಡಿಲ್ಲ. ಒಂದು ವರ್ಷದ ಸಾಂಸ್ಥಿಕ ಪ್ರಕ್ರಿಯೆ ಬಳಿಕ ತೆರವು ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಅರಣ್ಯ ನಾಶದ ನಿಮ್ಮ ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದರೆ ದೀರ್ಘ ವಾರಾಂತ್ಯದ ಆರಂಭದಲ್ಲಿ ಏಕೆ ಮರಗಳನ್ನು ತೆರವು ಮಾಡಲು ಪ್ರಾರಂಭಿಸಿದಿರಿ? ಪುನಃ ಅರಣ್ಯ ಬೆಳೆಸುವ ಯಾವುದೇ ಬದ್ಧತೆಯಿಲ್ಲದೆ ಸರ್ಕಾರ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಆ ಸ್ಥಳದಲ್ಲಿ ಐಟಿ ಪಾರ್ಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಹಿಂದೆ ತೆಲಂಗಾಣ ಸರ್ಕಾರ ಪರಿಸರ ಅನುಮತಿ ಪಡೆಯುವಲ್ಲಿ ವಿಫಲವಾಗಿರುವುದನ್ನು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ನಿರ್ಮಾಣದ ಒಪ್ಪಿಗೆ’ಗೆ ಮಾತ್ರ ಅರ್ಜಿ ಸಲ್ಲಿಸಿರುವುದನ್ನು ಸಿಇಸಿ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು ಎಂದು ವರದಿಯಾಗಿದೆ.

ಗುರುವಾರ ಸಲ್ಲಿಸಿದ ವರದಿಯಲ್ಲಿ ಕಾಂಚ ಗಚಿಬೌಲಿ ಪ್ರದೇಶ ಅರಣ್ಯದ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿದೆ ಎಂದು ಸಿಇಸಿ ದೃಢಪಡಿಸಿದೆ. ಆ ಪ್ರದೇಶವನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಮೀಸಲು ಅರಣ್ಯ ಎಂದು ಘೋಷಿಸಲು ಶಿಫಾರಸು ಮಾಡಿದೆ.

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದರು. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿತ್ತು. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿತ್ತು.

ಅರಣ್ಯ ನಾಶ ತಡೆಯುವಂತೆ ಕೋರಿ ತೆಲಂಗಾಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು.

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...