Homeಮುಖಪುಟಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ.

ಬುಧವಾರ (ಮಾರ್ಚ್ 3) ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಭಾರತ, ಜಪಾನ್ ಮತ್ತು ಸಿರಿಯಾದ ಮೂವರು “ಪ್ರಾಚೀನ” ಮಹಿಳೆಯರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರತಿಯೊಬ್ಬರೂ ತಮ್ಮ ದೇಶಗಳ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ. 1885 ರಲ್ಲಿ ತೆಗೆದಿರುವ ಈ ಛಾಯಾಚಿತ್ರದಲ್ಲಿರುವ ಮೂವರು ಮಹಿಳೆಯರು, ತಮ್ಮ ತಮ್ಮ ದೇಶದ ಮೊದಲ ಪರವಾನಗಿ ಪಡೆದ ಮಹಿಳಾ ವೈದ್ಯರು ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆ ಇವರ ಸಂಸ್ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟಿ,  ಇಂದಿನ ಸಾಧಕರನ್ನು ಗುರುತಿಸಲು ಹೊರಟರೇ ಅವರೆಲ್ಲಾ ಹರಿದ ಅಮೆರಿಕನ್ ಜೀನ್ಸ್ ಮತ್ತು ರಾಗ್‌ಗಳನ್ನು ಬ್ಲೌಸ್‌ನಂತೆ ಧರಿಸಿರುತ್ತಾರೆ. ಇದು ಅಮೆರಿಕನ್ ಮಾರ್ಕೆಟಿಂಗ್ ಅನ್ನು ಹೊರತುಪಡಿಸಿ ಏನನ್ನೂ ಪ್ರತಿನಿಧಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾಗದ ಕಂಗನಾ ರಣಾವತ್‌ಗೆ ವಾರೆಂಟ್!

ಈ ಟ್ವೀಟ್‌ಗೆ ಪ್ರತಿಟ್ವೀಟ್ ಮಾಡಿರುವ ನೆಟ್ಟಿಗರು ಅವರು ಟೋನ್ಡ್ ಜೀನ್ಸ್‌ಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡು, ಇದು ಯಾವ ಮಾರ್ಕೆಟಿಂಗ್ ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು ನಟಿ ಕಂಗನಾ ರಣಾವತ್ ಧರಿಸಿರುವ ಹಲವು ವಿದೇಶಿ ಶೈಲಿಯ ಧಿರಿಸುಗಳ ಕುರಿತು ವಿವರವಾಗಿ ದಾಖಲಿಸಿ, ವಿದೇಶಿ ಮಾರ್ಕೆಟಿಂಗ್ ಅಂದರೆ ಇದು ಎಂದಿದ್ದಾರೆ.

ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಿಶಾದ್ ಸಿಂಗ್ ಎನ್ನುವ ಟ್ವಿಟರ್‌ ಬಳಕೆದಾರರು ಕಂಗನಾ ರಣಾವತ್ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಅವರು ನಿಜವಾದ ದೇಶಭಕ್ತರಾಗಿದ್ದರೇ ರಾಮ್‌ದೇವ್ ಅವರ ಜೀನ್ಸ್ ಧರಿಸಲು ಹೇಳಿ ಎಂದಿದ್ದಾರೆ.

ದಿ ವರ್ಲ್ಡ್‌ನ ಸಾರ್ವಜನಿಕ ರೇಡಿಯೊ ಕಾರ್ಯಕ್ರಮ ಮತ್ತು ಪಾಡ್‌ಕ್ಯಾಸ್ಟ್ ಪ್ರಕಟಿಸಿದ ವರದಿಯ ಪ್ರಕಾರ, ನಟಿ ಕಂಗನಾ ರಣಾವತ್ ಅವರು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿನ ಮಹಿಳೆಯರು ಪೆನ್ಸಿಲ್ವೇನಿಯಾದ ಮಹಿಳಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. ಚಿತ್ರ ಈಗ ಡ್ರೆಕ್ಸೆಲ್ ವಿಶ್ವವಿದ್ಯಾಲಯದ ಆರ್ಕೈವ್‌ಗಳಲ್ಲಿದೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.


ಇದನ್ನೂ ಓದಿ: ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...