Homeಮುಖಪುಟಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಅಮೆರಿಕನ್‌ ಜೀನ್ಸ್ ಬಗ್ಗೆ ಕಂಗನಾ ಟ್ವೀಟ್: ಹಳೆಯ ಫೋಟೋಗಳನ್ನು ಶೇರ್ ಮಾಡಿ ಕಾಲೆಳೆದ ನೆಟ್ಟಿಗರು

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

’ಪ್ರಸ್ತುತ ಸಾಧಕರನ್ನು ಗುರುತಿಸಲು ಹೊರಟಾಗ ಅವರೆಲ್ಲಾ ಹರಿದ ಟೋನ್ಡ್ ಅಮೆರಿಕನ್ ಜೀನ್ಸ್‌ಗಳನ್ನು ಧರಿಸಿರುತ್ತಾರೆ ಎಂದು, ಟೋನ್ಡ್ ಅಮೆರಿಕನ್ ಜೀನ್ಸ್ ಧರಿಸಿಸುವವರನ್ನು ಪರೋಕ್ಷವಾಗಿ ಟೀಕಿಸಿದ್ದ ನಟಿ ಕಂಗನಾ ರಣಾವತ್ ಅವರನ್ನು ನೆಟ್ಟಿಗರು ಅವರದ್ದೇ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ.

ಬುಧವಾರ (ಮಾರ್ಚ್ 3) ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಭಾರತ, ಜಪಾನ್ ಮತ್ತು ಸಿರಿಯಾದ ಮೂವರು “ಪ್ರಾಚೀನ” ಮಹಿಳೆಯರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರತಿಯೊಬ್ಬರೂ ತಮ್ಮ ದೇಶಗಳ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ. 1885 ರಲ್ಲಿ ತೆಗೆದಿರುವ ಈ ಛಾಯಾಚಿತ್ರದಲ್ಲಿರುವ ಮೂವರು ಮಹಿಳೆಯರು, ತಮ್ಮ ತಮ್ಮ ದೇಶದ ಮೊದಲ ಪರವಾನಗಿ ಪಡೆದ ಮಹಿಳಾ ವೈದ್ಯರು ಎಂದು ಹೇಳಲಾಗಿದೆ.

ಈ ಚಿತ್ರದ ಜೊತೆ ಇವರ ಸಂಸ್ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟಿ,  ಇಂದಿನ ಸಾಧಕರನ್ನು ಗುರುತಿಸಲು ಹೊರಟರೇ ಅವರೆಲ್ಲಾ ಹರಿದ ಅಮೆರಿಕನ್ ಜೀನ್ಸ್ ಮತ್ತು ರಾಗ್‌ಗಳನ್ನು ಬ್ಲೌಸ್‌ನಂತೆ ಧರಿಸಿರುತ್ತಾರೆ. ಇದು ಅಮೆರಿಕನ್ ಮಾರ್ಕೆಟಿಂಗ್ ಅನ್ನು ಹೊರತುಪಡಿಸಿ ಏನನ್ನೂ ಪ್ರತಿನಿಧಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾಗದ ಕಂಗನಾ ರಣಾವತ್‌ಗೆ ವಾರೆಂಟ್!

ಈ ಟ್ವೀಟ್‌ಗೆ ಪ್ರತಿಟ್ವೀಟ್ ಮಾಡಿರುವ ನೆಟ್ಟಿಗರು ಅವರು ಟೋನ್ಡ್ ಜೀನ್ಸ್‌ಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡು, ಇದು ಯಾವ ಮಾರ್ಕೆಟಿಂಗ್ ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೂಟಾಟಿಕೆಯನ್ನು ಎಲ್ಲೂ ಕಾಣಲು ಸಾಧ್ಯವಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು ನಟಿ ಕಂಗನಾ ರಣಾವತ್ ಧರಿಸಿರುವ ಹಲವು ವಿದೇಶಿ ಶೈಲಿಯ ಧಿರಿಸುಗಳ ಕುರಿತು ವಿವರವಾಗಿ ದಾಖಲಿಸಿ, ವಿದೇಶಿ ಮಾರ್ಕೆಟಿಂಗ್ ಅಂದರೆ ಇದು ಎಂದಿದ್ದಾರೆ.

ಟ್ವೀಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಿಶಾದ್ ಸಿಂಗ್ ಎನ್ನುವ ಟ್ವಿಟರ್‌ ಬಳಕೆದಾರರು ಕಂಗನಾ ರಣಾವತ್ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಅವರು ನಿಜವಾದ ದೇಶಭಕ್ತರಾಗಿದ್ದರೇ ರಾಮ್‌ದೇವ್ ಅವರ ಜೀನ್ಸ್ ಧರಿಸಲು ಹೇಳಿ ಎಂದಿದ್ದಾರೆ.

ದಿ ವರ್ಲ್ಡ್‌ನ ಸಾರ್ವಜನಿಕ ರೇಡಿಯೊ ಕಾರ್ಯಕ್ರಮ ಮತ್ತು ಪಾಡ್‌ಕ್ಯಾಸ್ಟ್ ಪ್ರಕಟಿಸಿದ ವರದಿಯ ಪ್ರಕಾರ, ನಟಿ ಕಂಗನಾ ರಣಾವತ್ ಅವರು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿನ ಮಹಿಳೆಯರು ಪೆನ್ಸಿಲ್ವೇನಿಯಾದ ಮಹಿಳಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. ಚಿತ್ರ ಈಗ ಡ್ರೆಕ್ಸೆಲ್ ವಿಶ್ವವಿದ್ಯಾಲಯದ ಆರ್ಕೈವ್‌ಗಳಲ್ಲಿದೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.


ಇದನ್ನೂ ಓದಿ: ಕಂಗನಾ ಟ್ವಿಟರ್ ಖಾತೆ ಅಮಾನತುಗೊಳಿಸಿ ಅರ್ಜಿ: ಮಾರ್ಚ್ 9 ರಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...