Homeಮುಖಪುಟಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

ಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್‌ರವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕೆಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾದ ಸ್ವಾತಿ ಮಾಲಿವಾಲ್‌ರವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ, ತಮ್ಮ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಭಗತ್‌ಸಿಂಗ್‌ರಂತಹ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಕಂಗನಾ ರಣಾವತ್‌ರವರಿಗೆ ನೀಡಬೇಕಿರುವುದು ಚಿಕಿತ್ಸೆಯನ್ನು ಹೊರತು ಪದ್ಮಶ್ರೀಯಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

1857ರ ಭಾರತದ ಪ್ರಥಮ ಸ್ವಾತಂತ್ರ್ಯ ದಂಗೆ, ಖಿಲಾಫತ್ ಚಳವಳಿ, ಚಂಪರಣ್ಯ ಸತ್ಯಾಗ್ರಹ, ಭಾರತ ಬಿಟ್ಟು ತೊಲಗಿ ಚಳವಳಿ ಸೇರಿದಂತೆ ಸ್ವಾತಂತ್ರ್ಯ ಚಳವಳಿಯ ಹಲವು ಹೋರಾಟಗಳನ್ನು ಪಟ್ಟಿಮಾಡಿರುವ ಸ್ವಾತಿ ಮಾಲಿವಾಲ್ ಇವುಗಳನ್ನು ಕಂಗನಾ ಅವಮಾನಿಸಿರುವುದನ್ನು ಖಂಡಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಜಲಿಯನ್ ವಾಲಾಬಾಗ್‌ನಲ್ಲಿ ಒಟ್ಟುಗೂಡಿದ ಸಾವಿರಾರು ಜನರನ್ನು, ನಂತರ ನಡೆದ ಹತ್ಯಾಕಾಂಡವನ್ನು ಹೇಗೆ ಮರೆಯಲು ಸಾಧ್ಯ ಎಂದು ಪ್ರಶ್ನಿಸಿರುವ ಮಾಲಿವಾಲ್, ಇತಿಹಾಸದ ಈ ಪುಟಗಳು ಭಿಕ್ಷೆಯೇ ಎಂದು ಕಿಡಿಕಾರಿದ್ದಾರೆ.

“ಇದು ಕಂಗನಾ ಬಾಯಿ ತಪ್ಪಿ ಮಾತನಾಡಿದ್ದಲ್ಲ. ಅವರು ನಮ್ಮ ದೇಶದ ಜನರ ವಿರುದ್ಧ ವಿಷ ಉಗುಳುತ್ತಿರುವುದರಿಂದ ಅವರು ಸದೃಢ ಮನಸ್ಸಿನವರಾಗಿ ಕಾಣುತ್ತಿಲ್ಲ. ಅವರ ಅಭಿಪ್ರಾಯಕ್ಕೆ ಸಹಮತವಿಲ್ಲದವರ ಮೇಲೆ ಆಕ್ರಮಣ ಮಾಡಲು ಪದೇ ಪದೇ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಸ್ವಾತಿ ಮಾಲಿವಾಲ್ ಕಿಡಿಕಾರಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಈ ಕುರಿತು ಮತ್ತೆ ಪ್ರತಿಕ್ರಿಯಿಸಿರುವ ಕಂಗನಾ, “ಭಾರತದಲ್ಲಿ ಬ್ರಿಟಿಷರು ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ಹೊಣೆಗಾರರಾಗದಿರುವುದು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ತೋರಿದ ಅಗೌರವ” ಎಂದಿದ್ದಾರೆ.

ಸ್ವಾತಂತ್ರ್ಯದ ಸಮಯದಲ್ಲಿ ನಮ್ಮ ದೇಶದ ಸಂಪತ್ತನ್ನು ಲೂಟಿ ಮಾಡುವುದರಿಂದ ಹಿಡಿದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ದಯವಾಗಿ ಕೊಂದು ನಮ್ಮ ದೇಶವನ್ನು ಎರಡು ಭಾಗಗಳಾಗಿ ವಿಭಜಿಸುವವರೆಗೆ ಭಾರತದಲ್ಲಿ ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ನಮ್ಮ ರಾಷ್ಟ್ರ ನಿರ್ಮಾತೃಗಳು ಬ್ರಿಟಿಷರನ್ನು ಹೊಣೆಗಾರರನ್ನಾಗಿ ಮಾಡಲಿಲ್ಲ. ಎರಡನೇ ವಿಶ್ವಯುದ್ಧದ ನಂತರ ಬ್ರಿಟಿಷರು ತಮ್ಮ ಬಿಡುವಿನ ವೇಳೆಯಲ್ಲಿ ಭಾರತವನ್ನು ತೊರೆದರು. ವಿನ್‌ಸ್ಟನ್ ಚರ್ಚಿಲ್ ಅವರನ್ನು ಯುದ್ಧ ವೀರ ಎಂದು ಪ್ರಶಂಸಿಸಲಾಯಿತು. ಬಂಗಾಳದ ಕ್ಷಾಮಕ್ಕೆ ಕಾರಣವಾದ ಅದೇ ವ್ಯಕ್ತಿ; ಅವರು ತನ್ನ ಅಪರಾಧಗಳಿಗಾಗಿ ಸ್ವತಂತ್ರ ಭಾರತದ ನ್ಯಾಯಾಲಯಗಳಲ್ಲಿ ಎಂದಾದರೂ ವಿಚಾರಣೆಗೆ ಒಳಗಾಗಿದ್ದಾರೆಯೇ? ಇಲ್ಲ ಎಂದು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...