Homeಮುಖಪುಟಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

ಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್‌ರವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕೆಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾದ ಸ್ವಾತಿ ಮಾಲಿವಾಲ್‌ರವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ, ತಮ್ಮ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಭಗತ್‌ಸಿಂಗ್‌ರಂತಹ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಕಂಗನಾ ರಣಾವತ್‌ರವರಿಗೆ ನೀಡಬೇಕಿರುವುದು ಚಿಕಿತ್ಸೆಯನ್ನು ಹೊರತು ಪದ್ಮಶ್ರೀಯಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

1857ರ ಭಾರತದ ಪ್ರಥಮ ಸ್ವಾತಂತ್ರ್ಯ ದಂಗೆ, ಖಿಲಾಫತ್ ಚಳವಳಿ, ಚಂಪರಣ್ಯ ಸತ್ಯಾಗ್ರಹ, ಭಾರತ ಬಿಟ್ಟು ತೊಲಗಿ ಚಳವಳಿ ಸೇರಿದಂತೆ ಸ್ವಾತಂತ್ರ್ಯ ಚಳವಳಿಯ ಹಲವು ಹೋರಾಟಗಳನ್ನು ಪಟ್ಟಿಮಾಡಿರುವ ಸ್ವಾತಿ ಮಾಲಿವಾಲ್ ಇವುಗಳನ್ನು ಕಂಗನಾ ಅವಮಾನಿಸಿರುವುದನ್ನು ಖಂಡಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಜಲಿಯನ್ ವಾಲಾಬಾಗ್‌ನಲ್ಲಿ ಒಟ್ಟುಗೂಡಿದ ಸಾವಿರಾರು ಜನರನ್ನು, ನಂತರ ನಡೆದ ಹತ್ಯಾಕಾಂಡವನ್ನು ಹೇಗೆ ಮರೆಯಲು ಸಾಧ್ಯ ಎಂದು ಪ್ರಶ್ನಿಸಿರುವ ಮಾಲಿವಾಲ್, ಇತಿಹಾಸದ ಈ ಪುಟಗಳು ಭಿಕ್ಷೆಯೇ ಎಂದು ಕಿಡಿಕಾರಿದ್ದಾರೆ.

“ಇದು ಕಂಗನಾ ಬಾಯಿ ತಪ್ಪಿ ಮಾತನಾಡಿದ್ದಲ್ಲ. ಅವರು ನಮ್ಮ ದೇಶದ ಜನರ ವಿರುದ್ಧ ವಿಷ ಉಗುಳುತ್ತಿರುವುದರಿಂದ ಅವರು ಸದೃಢ ಮನಸ್ಸಿನವರಾಗಿ ಕಾಣುತ್ತಿಲ್ಲ. ಅವರ ಅಭಿಪ್ರಾಯಕ್ಕೆ ಸಹಮತವಿಲ್ಲದವರ ಮೇಲೆ ಆಕ್ರಮಣ ಮಾಡಲು ಪದೇ ಪದೇ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಸ್ವಾತಿ ಮಾಲಿವಾಲ್ ಕಿಡಿಕಾರಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಈ ಕುರಿತು ಮತ್ತೆ ಪ್ರತಿಕ್ರಿಯಿಸಿರುವ ಕಂಗನಾ, “ಭಾರತದಲ್ಲಿ ಬ್ರಿಟಿಷರು ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ಹೊಣೆಗಾರರಾಗದಿರುವುದು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ತೋರಿದ ಅಗೌರವ” ಎಂದಿದ್ದಾರೆ.

ಸ್ವಾತಂತ್ರ್ಯದ ಸಮಯದಲ್ಲಿ ನಮ್ಮ ದೇಶದ ಸಂಪತ್ತನ್ನು ಲೂಟಿ ಮಾಡುವುದರಿಂದ ಹಿಡಿದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ದಯವಾಗಿ ಕೊಂದು ನಮ್ಮ ದೇಶವನ್ನು ಎರಡು ಭಾಗಗಳಾಗಿ ವಿಭಜಿಸುವವರೆಗೆ ಭಾರತದಲ್ಲಿ ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ನಮ್ಮ ರಾಷ್ಟ್ರ ನಿರ್ಮಾತೃಗಳು ಬ್ರಿಟಿಷರನ್ನು ಹೊಣೆಗಾರರನ್ನಾಗಿ ಮಾಡಲಿಲ್ಲ. ಎರಡನೇ ವಿಶ್ವಯುದ್ಧದ ನಂತರ ಬ್ರಿಟಿಷರು ತಮ್ಮ ಬಿಡುವಿನ ವೇಳೆಯಲ್ಲಿ ಭಾರತವನ್ನು ತೊರೆದರು. ವಿನ್‌ಸ್ಟನ್ ಚರ್ಚಿಲ್ ಅವರನ್ನು ಯುದ್ಧ ವೀರ ಎಂದು ಪ್ರಶಂಸಿಸಲಾಯಿತು. ಬಂಗಾಳದ ಕ್ಷಾಮಕ್ಕೆ ಕಾರಣವಾದ ಅದೇ ವ್ಯಕ್ತಿ; ಅವರು ತನ್ನ ಅಪರಾಧಗಳಿಗಾಗಿ ಸ್ವತಂತ್ರ ಭಾರತದ ನ್ಯಾಯಾಲಯಗಳಲ್ಲಿ ಎಂದಾದರೂ ವಿಚಾರಣೆಗೆ ಒಳಗಾಗಿದ್ದಾರೆಯೇ? ಇಲ್ಲ ಎಂದು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...