Homeಮುಖಪುಟಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

ಕಂಗನಾಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆದು ಚಿಕಿತ್ಸೆ ಕೊಡಿಸಿ: ರಾಷ್ಟ್ರಪತಿಗೆ ಪತ್ರ ಬರೆದ DCW ಅಧ್ಯಕ್ಷೆ

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್‌ರವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕೆಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾದ ಸ್ವಾತಿ ಮಾಲಿವಾಲ್‌ರವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ, ತಮ್ಮ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಭಗತ್‌ಸಿಂಗ್‌ರಂತಹ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಕಂಗನಾ ರಣಾವತ್‌ರವರಿಗೆ ನೀಡಬೇಕಿರುವುದು ಚಿಕಿತ್ಸೆಯನ್ನು ಹೊರತು ಪದ್ಮಶ್ರೀಯಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

1857ರ ಭಾರತದ ಪ್ರಥಮ ಸ್ವಾತಂತ್ರ್ಯ ದಂಗೆ, ಖಿಲಾಫತ್ ಚಳವಳಿ, ಚಂಪರಣ್ಯ ಸತ್ಯಾಗ್ರಹ, ಭಾರತ ಬಿಟ್ಟು ತೊಲಗಿ ಚಳವಳಿ ಸೇರಿದಂತೆ ಸ್ವಾತಂತ್ರ್ಯ ಚಳವಳಿಯ ಹಲವು ಹೋರಾಟಗಳನ್ನು ಪಟ್ಟಿಮಾಡಿರುವ ಸ್ವಾತಿ ಮಾಲಿವಾಲ್ ಇವುಗಳನ್ನು ಕಂಗನಾ ಅವಮಾನಿಸಿರುವುದನ್ನು ಖಂಡಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಜಲಿಯನ್ ವಾಲಾಬಾಗ್‌ನಲ್ಲಿ ಒಟ್ಟುಗೂಡಿದ ಸಾವಿರಾರು ಜನರನ್ನು, ನಂತರ ನಡೆದ ಹತ್ಯಾಕಾಂಡವನ್ನು ಹೇಗೆ ಮರೆಯಲು ಸಾಧ್ಯ ಎಂದು ಪ್ರಶ್ನಿಸಿರುವ ಮಾಲಿವಾಲ್, ಇತಿಹಾಸದ ಈ ಪುಟಗಳು ಭಿಕ್ಷೆಯೇ ಎಂದು ಕಿಡಿಕಾರಿದ್ದಾರೆ.

“ಇದು ಕಂಗನಾ ಬಾಯಿ ತಪ್ಪಿ ಮಾತನಾಡಿದ್ದಲ್ಲ. ಅವರು ನಮ್ಮ ದೇಶದ ಜನರ ವಿರುದ್ಧ ವಿಷ ಉಗುಳುತ್ತಿರುವುದರಿಂದ ಅವರು ಸದೃಢ ಮನಸ್ಸಿನವರಾಗಿ ಕಾಣುತ್ತಿಲ್ಲ. ಅವರ ಅಭಿಪ್ರಾಯಕ್ಕೆ ಸಹಮತವಿಲ್ಲದವರ ಮೇಲೆ ಆಕ್ರಮಣ ಮಾಡಲು ಪದೇ ಪದೇ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಸ್ವಾತಿ ಮಾಲಿವಾಲ್ ಕಿಡಿಕಾರಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಈ ಕುರಿತು ಮತ್ತೆ ಪ್ರತಿಕ್ರಿಯಿಸಿರುವ ಕಂಗನಾ, “ಭಾರತದಲ್ಲಿ ಬ್ರಿಟಿಷರು ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ಹೊಣೆಗಾರರಾಗದಿರುವುದು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ತೋರಿದ ಅಗೌರವ” ಎಂದಿದ್ದಾರೆ.

ಸ್ವಾತಂತ್ರ್ಯದ ಸಮಯದಲ್ಲಿ ನಮ್ಮ ದೇಶದ ಸಂಪತ್ತನ್ನು ಲೂಟಿ ಮಾಡುವುದರಿಂದ ಹಿಡಿದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ದಯವಾಗಿ ಕೊಂದು ನಮ್ಮ ದೇಶವನ್ನು ಎರಡು ಭಾಗಗಳಾಗಿ ವಿಭಜಿಸುವವರೆಗೆ ಭಾರತದಲ್ಲಿ ಮಾಡಿದ ಲೆಕ್ಕವಿಲ್ಲದಷ್ಟು ಅಪರಾಧಗಳಿಗೆ ನಮ್ಮ ರಾಷ್ಟ್ರ ನಿರ್ಮಾತೃಗಳು ಬ್ರಿಟಿಷರನ್ನು ಹೊಣೆಗಾರರನ್ನಾಗಿ ಮಾಡಲಿಲ್ಲ. ಎರಡನೇ ವಿಶ್ವಯುದ್ಧದ ನಂತರ ಬ್ರಿಟಿಷರು ತಮ್ಮ ಬಿಡುವಿನ ವೇಳೆಯಲ್ಲಿ ಭಾರತವನ್ನು ತೊರೆದರು. ವಿನ್‌ಸ್ಟನ್ ಚರ್ಚಿಲ್ ಅವರನ್ನು ಯುದ್ಧ ವೀರ ಎಂದು ಪ್ರಶಂಸಿಸಲಾಯಿತು. ಬಂಗಾಳದ ಕ್ಷಾಮಕ್ಕೆ ಕಾರಣವಾದ ಅದೇ ವ್ಯಕ್ತಿ; ಅವರು ತನ್ನ ಅಪರಾಧಗಳಿಗಾಗಿ ಸ್ವತಂತ್ರ ಭಾರತದ ನ್ಯಾಯಾಲಯಗಳಲ್ಲಿ ಎಂದಾದರೂ ವಿಚಾರಣೆಗೆ ಒಳಗಾಗಿದ್ದಾರೆಯೇ? ಇಲ್ಲ ಎಂದು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...