Homeಮುಖಪುಟಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

ಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

- Advertisement -
- Advertisement -

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೊನೆಗೂ ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರೊಂದಿಗೆ ಕ್ಷಮೆ ಕೇಳಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ನಟಿ ಕಂಗನಾ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಶುಕ್ರವಾರ ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಂಡಿದ್ದಾಗಿ ಅವರು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ

ಮುಂಬೈಯಲ್ಲಿ ಶುಕ್ರವಾರ ಇಬ್ಬರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಪರಸ್ಪರರ ವಿರುದ್ಧ ಸಲ್ಲಿಸಿದ್ದ ದೂರುಗಳನ್ನು ಹಿಂಪಡೆಯುವ ನಿರ್ಧಾರವನ್ನು ತಿಳಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ನಂತರ, ಅಖ್ತರ್ ಜೊತೆಗೆ ತಾನು ಇರುವ ಪೋಟೋ ಪೋಸ್ಟ್‌ ಮಾಡಿರುವ ಕಂಗನಾ, ಕಾನೂನು ವಿವಾದವನ್ನು ಪರಿಹರಿಸಿದ್ದೇವೆ ಎಂದು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ

ಈ ಬಗ್ಗೆ ಕಂಗನಾ ಅವರು ತನ್ನ ಇನ್ಸ್‌ಟಾಗ್ರಾಂನಲ್ಲಿ ಬರೆದಿದ್ದು, “ಇಂದು, ಜಾವೇದ್‌ ಅವರು ಮತ್ತು ನಾನು ನಮ್ಮ ನಡುವಿನ ಕಾನೂನು ಪ್ರಕರಣವನ್ನು (ಮಾನನಷ್ಟ ಪ್ರಕರಣ) ಮಧ್ಯಸ್ಥಿಕೆಯ ಮೂಲಕ ಪರಿಹರಿಸಿದ್ದೇವೆ. ಮಧ್ಯಸ್ಥಿಕೆಯಲ್ಲಿ ಜಾವೇದ್ ಅವರು ತುಂಬಾ ದಯೆ ಮತ್ತು ದಾಕ್ಷಿಣ್ಯ ಹೊಂದಿದ್ದರು. ಅವರು ನನ್ನ ಮುಂದಿನ ನಿರ್ದೇಶನದ ಚಿತ್ರಕ್ಕಾಗಿ ಹಾಡುಗಳನ್ನು ಬರೆಯಲು ಕೂಡಾ ಒಪ್ಪಿಕೊಂಡರು” ಎಂದು ಬರೆದಿದ್ದಾರೆ.

ಅದಾಗ್ಯೂ, ನ್ಯಾಯಾಲಯವು ನಂತರ ಈ ಬಗ್ಗೆ ಔಪಚಾರಿಕ ಆದೇಶವನ್ನು ನೀಡಲಿದೆ ಎಂದು ವರದಿಯಾಗಿದೆ. ತಪ್ಪು ತಿಳುವಳಿಕೆಯಿಂದಾಗಿ ಅಖ್ತರ್ ವಿರುದ್ಧ ಹೇಳಿಕೆ ನೀಡಿರುವುದಾಗಿ ನಟ ಹೇಳಿದ್ದು, ಅದರಿಂದ ಅವರಿಗೆ ಉಂಟಾದ ಅನಾನುಕೂಲತೆಗೆ ಕ್ಷಮೆಯಾಚಿಸಿದರು ಎಂದು TNIE ವರದಿ ಹೇಳಿದೆ.

2020 ರಲ್ಲಿ ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧ ದೂರು ದಾಖಲಿಸಿದ್ದರು. ಆ ವರ್ಷದ ಜುಲೈನಲ್ಲಿ ಕಂಗನಾ ಅವರು ಸುದ್ದಿ ಚಾನೆಲ್‌ಗೆ ಸಂದರ್ಶನವೊಂದನ್ನು ನೀಡಿದ್ದರು. ಈ ವೇಳೆ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ವಿಚಾರದಲ್ಲಿ ಜಾವೇದ್ ಹೆಸರನ್ನು ಎಳೆದು ತಂದಿದ್ದರು. ಈ ಬಗ್ಗೆ ದೂರು ದಾಖಲಿಸಿದ್ದ ಜಾವೇದ್ ಅವರು, ಕಂಗನಾ ತನ್ನ ‘ಖ್ಯಾತಿ’ಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದರ ನಂತರ ಕಂಗನಾ ಅವರು ಕೂಡಾ ಜಾವೇದ್ ಅಖ್ತರ್ ವಿರುದ್ಧ ಕ್ರಿಮಿನಲ್ ಬೆದರಿಕೆ ಮತ್ತು ಘನತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದರು. ತನ್ನ ದೂರಿನಲ್ಲಿ ಅವರು, 2016 ರಲ್ಲಿ ಜಾವೇದ್ ಅಖ್ತರ್ ಅವರನ್ನು ತಾನು ಭೇಟಿಯಾಗಿದ್ದೆ. ಈ ವೇಳೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಹೇಳಿಕೊಂಡಿದ್ದರು.

ಕಂಗನಾ ಅವರ ಪರ ವಕೀಲ ರಿಜ್ವಾನ್ ಸಿದ್ದಿಕಿ ಮತ್ತು ಜಾವೇದ್ ಅಖ್ತರ್ ಅವರ ವಕೀಲ ಜಯ ಕುಮಾರ್ ಭಾರದ್ವಾಜ್ ಅವರು ಬಾಂದ್ರಾದ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಒಂದು ಗಂಟೆಯ ಮಧ್ಯಸ್ಥಿಕೆಯ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದ್ದಾರೆ. ತಾನು ತಪ್ಪು ತಿಳುವಳಿಕೆಯಿಂದಾಗಿ ಹೇಳಿಕೆ ನೀಡಿದ್ದೇನೆ ಎಂದು ಮಧ್ಯವರ್ತಿ ಮುಂದೆ ಕಂಗನಾ ಹೇಳಿದ್ದಾರೆ ಮತ್ತು ಅದನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಭಾರದ್ವಾಜ್ ಪಿಟಿಐಗೆ ತಿಳಿಸಿದ್ದಾರೆ.

ತನ್ನ ಹೇಳಿಕೆಯಿಂದ ಉಂಟಾದ ಅನಾನುಕೂಲತೆಗಾಗಿ ಕಂಗನಾ ಕ್ಷಮೆಯಾಚಿಸಿದ್ದು, ಭವಿಷ್ಯದಲ್ಲಿ ಅಂತಹ ಹೇಳಿಕೆ ನೀಡುವುದಿಲ್ಲ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾವು ಬಹಳ ಸಮಯದಿಂದ ಮಧ್ಯಸ್ಥಿಕೆಗಾಗಿ ಹುಡುಕುತ್ತಿದ್ದೆವು. ನಾವು ಕರಡುಗಳನ್ನು ಸಹ ವಿನಿಮಯ ಮಾಡಿಕೊಂಡಿದ್ದೇವೆ. ಅಂತಿಮವಾಗಿ ನಾವು ಪ್ರಕರಣವನ್ನು ಪರಿಹರಿಸಿದ್ದೇವೆ ಎಂದು ಕಂಗನಾ ಪರ ವಕೀಲ ಸಿದ್ದಿಕ್ ಹೇಳಿದ್ದಾರೆ. “ಯಾವುದೇ ಸಮಸ್ಯೆಗಳಿರಲಿಲ್ಲ, ಪದಗಳನ್ನು ಮಾತ್ರ ನಿರ್ಧರಿಸಬೇಕಾಗಿತ್ತು, ಅದನ್ನು ಇಂದು ಮಾಡಲಾಯಿತು. ನಾವು ಕರಡನ್ನು ಸಿದ್ಧಪಡಿಸಿದ್ದು, ಅದಕ್ಕೆ ಸಹಿ ಹಾಕಿದ್ದೇವೆ. ಜೊತೆಗೆ ಎರಡೂ ಪ್ರಕರಣಗಳನ್ನು ಇಂದು ಹಿಂತೆಗೆದುಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಪ್ರಕರಣವನ್ನು ಆರಂಭದಲ್ಲಿ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಚಾರಣೆ ನಡೆಸಿತು. 2024 ರಲ್ಲಿ, ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ನಂತರ, ಪ್ರಕರಣವನ್ನು ಸಂಸದ ಮತ್ತು ಶಾಸಕರ ಪ್ರಕರಣಗಳಿಗಾಗಿ ಇರುವ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಬಾಲಿವುಡ್‌ನಲ್ಲಿ ಅಸ್ತಿತ್ವದಲ್ಲಿರುವ ‘ಕೂಟ’ವನ್ನು ಉಲ್ಲೇಖಿಸುವಾಗ ಕಂಗನಾ ಸಂದರ್ಶನವೊಂದರಲ್ಲಿ ತಮ್ಮ ಹೆಸರನ್ನು ಎಳೆದು ತಂದಿದ್ದಾರೆ ಎಂದು ಜಾವೇದ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...