Homeಮುಖಪುಟಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

ಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

- Advertisement -
- Advertisement -

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೊನೆಗೂ ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರೊಂದಿಗೆ ಕ್ಷಮೆ ಕೇಳಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ನಟಿ ಕಂಗನಾ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಶುಕ್ರವಾರ ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಂಡಿದ್ದಾಗಿ ಅವರು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ

ಮುಂಬೈಯಲ್ಲಿ ಶುಕ್ರವಾರ ಇಬ್ಬರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಪರಸ್ಪರರ ವಿರುದ್ಧ ಸಲ್ಲಿಸಿದ್ದ ದೂರುಗಳನ್ನು ಹಿಂಪಡೆಯುವ ನಿರ್ಧಾರವನ್ನು ತಿಳಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ನಂತರ, ಅಖ್ತರ್ ಜೊತೆಗೆ ತಾನು ಇರುವ ಪೋಟೋ ಪೋಸ್ಟ್‌ ಮಾಡಿರುವ ಕಂಗನಾ, ಕಾನೂನು ವಿವಾದವನ್ನು ಪರಿಹರಿಸಿದ್ದೇವೆ ಎಂದು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ

ಈ ಬಗ್ಗೆ ಕಂಗನಾ ಅವರು ತನ್ನ ಇನ್ಸ್‌ಟಾಗ್ರಾಂನಲ್ಲಿ ಬರೆದಿದ್ದು, “ಇಂದು, ಜಾವೇದ್‌ ಅವರು ಮತ್ತು ನಾನು ನಮ್ಮ ನಡುವಿನ ಕಾನೂನು ಪ್ರಕರಣವನ್ನು (ಮಾನನಷ್ಟ ಪ್ರಕರಣ) ಮಧ್ಯಸ್ಥಿಕೆಯ ಮೂಲಕ ಪರಿಹರಿಸಿದ್ದೇವೆ. ಮಧ್ಯಸ್ಥಿಕೆಯಲ್ಲಿ ಜಾವೇದ್ ಅವರು ತುಂಬಾ ದಯೆ ಮತ್ತು ದಾಕ್ಷಿಣ್ಯ ಹೊಂದಿದ್ದರು. ಅವರು ನನ್ನ ಮುಂದಿನ ನಿರ್ದೇಶನದ ಚಿತ್ರಕ್ಕಾಗಿ ಹಾಡುಗಳನ್ನು ಬರೆಯಲು ಕೂಡಾ ಒಪ್ಪಿಕೊಂಡರು” ಎಂದು ಬರೆದಿದ್ದಾರೆ.

ಅದಾಗ್ಯೂ, ನ್ಯಾಯಾಲಯವು ನಂತರ ಈ ಬಗ್ಗೆ ಔಪಚಾರಿಕ ಆದೇಶವನ್ನು ನೀಡಲಿದೆ ಎಂದು ವರದಿಯಾಗಿದೆ. ತಪ್ಪು ತಿಳುವಳಿಕೆಯಿಂದಾಗಿ ಅಖ್ತರ್ ವಿರುದ್ಧ ಹೇಳಿಕೆ ನೀಡಿರುವುದಾಗಿ ನಟ ಹೇಳಿದ್ದು, ಅದರಿಂದ ಅವರಿಗೆ ಉಂಟಾದ ಅನಾನುಕೂಲತೆಗೆ ಕ್ಷಮೆಯಾಚಿಸಿದರು ಎಂದು TNIE ವರದಿ ಹೇಳಿದೆ.

2020 ರಲ್ಲಿ ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧ ದೂರು ದಾಖಲಿಸಿದ್ದರು. ಆ ವರ್ಷದ ಜುಲೈನಲ್ಲಿ ಕಂಗನಾ ಅವರು ಸುದ್ದಿ ಚಾನೆಲ್‌ಗೆ ಸಂದರ್ಶನವೊಂದನ್ನು ನೀಡಿದ್ದರು. ಈ ವೇಳೆ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ವಿಚಾರದಲ್ಲಿ ಜಾವೇದ್ ಹೆಸರನ್ನು ಎಳೆದು ತಂದಿದ್ದರು. ಈ ಬಗ್ಗೆ ದೂರು ದಾಖಲಿಸಿದ್ದ ಜಾವೇದ್ ಅವರು, ಕಂಗನಾ ತನ್ನ ‘ಖ್ಯಾತಿ’ಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದರ ನಂತರ ಕಂಗನಾ ಅವರು ಕೂಡಾ ಜಾವೇದ್ ಅಖ್ತರ್ ವಿರುದ್ಧ ಕ್ರಿಮಿನಲ್ ಬೆದರಿಕೆ ಮತ್ತು ಘನತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದರು. ತನ್ನ ದೂರಿನಲ್ಲಿ ಅವರು, 2016 ರಲ್ಲಿ ಜಾವೇದ್ ಅಖ್ತರ್ ಅವರನ್ನು ತಾನು ಭೇಟಿಯಾಗಿದ್ದೆ. ಈ ವೇಳೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕ್ರಿಮಿನಲ್ ರೀತಿಯಲ್ಲಿ ಬೆದರಿಸಿದ್ದಾರೆ ಎಂದು ಹೇಳಿಕೊಂಡಿದ್ದರು.

ಕಂಗನಾ ಅವರ ಪರ ವಕೀಲ ರಿಜ್ವಾನ್ ಸಿದ್ದಿಕಿ ಮತ್ತು ಜಾವೇದ್ ಅಖ್ತರ್ ಅವರ ವಕೀಲ ಜಯ ಕುಮಾರ್ ಭಾರದ್ವಾಜ್ ಅವರು ಬಾಂದ್ರಾದ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಒಂದು ಗಂಟೆಯ ಮಧ್ಯಸ್ಥಿಕೆಯ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದ್ದಾರೆ. ತಾನು ತಪ್ಪು ತಿಳುವಳಿಕೆಯಿಂದಾಗಿ ಹೇಳಿಕೆ ನೀಡಿದ್ದೇನೆ ಎಂದು ಮಧ್ಯವರ್ತಿ ಮುಂದೆ ಕಂಗನಾ ಹೇಳಿದ್ದಾರೆ ಮತ್ತು ಅದನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಭಾರದ್ವಾಜ್ ಪಿಟಿಐಗೆ ತಿಳಿಸಿದ್ದಾರೆ.

ತನ್ನ ಹೇಳಿಕೆಯಿಂದ ಉಂಟಾದ ಅನಾನುಕೂಲತೆಗಾಗಿ ಕಂಗನಾ ಕ್ಷಮೆಯಾಚಿಸಿದ್ದು, ಭವಿಷ್ಯದಲ್ಲಿ ಅಂತಹ ಹೇಳಿಕೆ ನೀಡುವುದಿಲ್ಲ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾವು ಬಹಳ ಸಮಯದಿಂದ ಮಧ್ಯಸ್ಥಿಕೆಗಾಗಿ ಹುಡುಕುತ್ತಿದ್ದೆವು. ನಾವು ಕರಡುಗಳನ್ನು ಸಹ ವಿನಿಮಯ ಮಾಡಿಕೊಂಡಿದ್ದೇವೆ. ಅಂತಿಮವಾಗಿ ನಾವು ಪ್ರಕರಣವನ್ನು ಪರಿಹರಿಸಿದ್ದೇವೆ ಎಂದು ಕಂಗನಾ ಪರ ವಕೀಲ ಸಿದ್ದಿಕ್ ಹೇಳಿದ್ದಾರೆ. “ಯಾವುದೇ ಸಮಸ್ಯೆಗಳಿರಲಿಲ್ಲ, ಪದಗಳನ್ನು ಮಾತ್ರ ನಿರ್ಧರಿಸಬೇಕಾಗಿತ್ತು, ಅದನ್ನು ಇಂದು ಮಾಡಲಾಯಿತು. ನಾವು ಕರಡನ್ನು ಸಿದ್ಧಪಡಿಸಿದ್ದು, ಅದಕ್ಕೆ ಸಹಿ ಹಾಕಿದ್ದೇವೆ. ಜೊತೆಗೆ ಎರಡೂ ಪ್ರಕರಣಗಳನ್ನು ಇಂದು ಹಿಂತೆಗೆದುಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಪ್ರಕರಣವನ್ನು ಆರಂಭದಲ್ಲಿ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಚಾರಣೆ ನಡೆಸಿತು. 2024 ರಲ್ಲಿ, ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ನಂತರ, ಪ್ರಕರಣವನ್ನು ಸಂಸದ ಮತ್ತು ಶಾಸಕರ ಪ್ರಕರಣಗಳಿಗಾಗಿ ಇರುವ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಬಾಲಿವುಡ್‌ನಲ್ಲಿ ಅಸ್ತಿತ್ವದಲ್ಲಿರುವ ‘ಕೂಟ’ವನ್ನು ಉಲ್ಲೇಖಿಸುವಾಗ ಕಂಗನಾ ಸಂದರ್ಶನವೊಂದರಲ್ಲಿ ತಮ್ಮ ಹೆಸರನ್ನು ಎಳೆದು ತಂದಿದ್ದಾರೆ ಎಂದು ಜಾವೇದ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...