Homeಮುಖಪುಟಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳಿಗೆ ಹೋಲಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್‌, ಮುಂಬೈನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಕಂಗನಾ ವಿರುದ್ಧ ಮಾನಹಾನಿ ಪ್ರಕರಣದ ದೂರು ದಾಖಲಿಸಿದ್ದಾರೆ. ಇದಕ್ಕೆ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಷಯವನ್ನು ಶಿವಸೇನೆ ಮುಖಂಡ ಸಂಜಯ್ ರಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ರಿಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್, “ಏಕ್ ಥಿ ಶೆರ್ನಿ… ಓರ್ ಏಕ್‌ ಭೆಡಿಯೋಂಕಾ ಝೂಡ್”  (ಒಬ್ಬಳು ಸಿಂಹಿಣಿ… ಮತ್ತು ಒಂದು ತೋಳಗಳ ಹಿಂಡು) ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳ ಗುಂಪಿಗೆ ಹೋಲಿಸಿದ್ದಾರೆ.

​ಮುಂಬೈನ ಮೆಟ್ರೋಪಾಲಿಟನ್​​ ಕೋರ್ಟ್​​ನಲ್ಲಿ ಕಂಗನಾ ವಿರುದ್ಧ ಐಪಿಸಿ ಸೆಕ್ಷನ್​ 499 ಮತ್ತು 500 ಅಡಿಯಲ್ಲಿ ದೂರು ದಾಖಲಾಗಿದೆ. ನಿನ್ನೆ ಕೂಡ ಕಂಗನಾಗೆ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

ಮಹಾರಾಷ್ಟ್ರದಲ್ಲಿ ಕಂಗನಾ ರಣಾವತ್ ಮತ್ತು ಆಡಳಿತರೂಢ ಶಿವಸೇನೆ ನಡುವೆ ಗುದ್ದಾಟ ನಡೆಯುತ್ತಿದ್ದು, ಇದು ಆಕೆಯ ಪರಸ್ಪರ ವಾಗ್ದಾಳಿಗೆ ಕಾರಣವಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ. ನಟಿ ಕಂಗನಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನೆ, ಉದ್ಧವ್ ಠಾಕ್ರೆ ಸರ್ಕಾರವನ್ನು ನೆರವಾಗಿಯೇ ಟೀಕಿಸುತ್ತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತಿಚೆಗೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಇತ್ತ ಕರ್ನಾಟಕದಲ್ಲಿಯೂ ಕಂಗನಾ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಣಾವತ್ ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....