Homeಮುಖಪುಟಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳಿಗೆ ಹೋಲಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್‌, ಮುಂಬೈನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಕಂಗನಾ ವಿರುದ್ಧ ಮಾನಹಾನಿ ಪ್ರಕರಣದ ದೂರು ದಾಖಲಿಸಿದ್ದಾರೆ. ಇದಕ್ಕೆ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಷಯವನ್ನು ಶಿವಸೇನೆ ಮುಖಂಡ ಸಂಜಯ್ ರಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ರಿಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್, “ಏಕ್ ಥಿ ಶೆರ್ನಿ… ಓರ್ ಏಕ್‌ ಭೆಡಿಯೋಂಕಾ ಝೂಡ್”  (ಒಬ್ಬಳು ಸಿಂಹಿಣಿ… ಮತ್ತು ಒಂದು ತೋಳಗಳ ಹಿಂಡು) ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳ ಗುಂಪಿಗೆ ಹೋಲಿಸಿದ್ದಾರೆ.

​ಮುಂಬೈನ ಮೆಟ್ರೋಪಾಲಿಟನ್​​ ಕೋರ್ಟ್​​ನಲ್ಲಿ ಕಂಗನಾ ವಿರುದ್ಧ ಐಪಿಸಿ ಸೆಕ್ಷನ್​ 499 ಮತ್ತು 500 ಅಡಿಯಲ್ಲಿ ದೂರು ದಾಖಲಾಗಿದೆ. ನಿನ್ನೆ ಕೂಡ ಕಂಗನಾಗೆ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

ಮಹಾರಾಷ್ಟ್ರದಲ್ಲಿ ಕಂಗನಾ ರಣಾವತ್ ಮತ್ತು ಆಡಳಿತರೂಢ ಶಿವಸೇನೆ ನಡುವೆ ಗುದ್ದಾಟ ನಡೆಯುತ್ತಿದ್ದು, ಇದು ಆಕೆಯ ಪರಸ್ಪರ ವಾಗ್ದಾಳಿಗೆ ಕಾರಣವಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ. ನಟಿ ಕಂಗನಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನೆ, ಉದ್ಧವ್ ಠಾಕ್ರೆ ಸರ್ಕಾರವನ್ನು ನೆರವಾಗಿಯೇ ಟೀಕಿಸುತ್ತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತಿಚೆಗೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಇತ್ತ ಕರ್ನಾಟಕದಲ್ಲಿಯೂ ಕಂಗನಾ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಣಾವತ್ ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...