Homeಮುಖಪುಟಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುದ್ಧ ನಡೆಯುತ್ತಿರುವ ತನಿಖೆಯ ವರದಿ ಸಲ್ಲಿಸುವಂತೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಆಕ್ಷೇಪಾರ್ಹ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ಕಳೆದ ಅಕ್ಟೋಬರ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ಡಿಸೆಂಬರ್ 5 ರೊಳಗೆ ವರದಿ ಸಲ್ಲಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಉಪನಗರ ಅಂಬೋಲಿ ಪೊಲೀಸರಿಗೆ ಸೂಚಿಸಿತ್ತು.

ಆದರೆ ನ್ಯಾಯಾಲಯವು ನೀಡಿದ ಸಮಯದೊಳಗೆ ವರದಿಯನ್ನು ಸಲ್ಲಿಸಲು ಪೊಲೀಸರು ವಿಫಲರಾಗಿದ್ದರು. ನಂತರ ಗಡುವನ್ನು ಜನವರಿ 5 ಕ್ಕೆ ವಿಸ್ತರಿಸಿತು. ಆಗಲೂ ಕೂಡ ಪೊಲೀಸರು ವರದಿ ಸಲ್ಲಿಸಿಲ್ಲ. ಪೊಲೀಸರಿಗೆ ಫೆಬ್ರವರಿ 5 ರವರೆಗೆ ಹೊಸ ಗಡುವು ನೀಡಲಾಯಿತು, ಆದರೆ ಪೊಲೀಸರು ಈ ಬಗ್ಗೆ ನಡೆಸಿದ ವಿಚಾರಣೆಯ ವರದಿಯನ್ನು ಇನ್ನೂ ಸಲ್ಲಿಸಿಲ್ಲ.

ಇದನ್ನೂ ಓದಿ: ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ಪೊಲೀಸರು ತನಿಖೆಯ ವರದಿ ಸಲ್ಲಿಸಲು ವಿಫಲವಾಗಿದ್ದರಿಂದ ಪ್ರಕ್ರಿಯೆಯನ್ನು ನೇರವಾಗಿ ಆರೋಪಿಗಳಿಗೆ ನೀಡಿ ಎಂದು ನಾನು ಮನವಿ ಮಾಡಿದ್ದೇನೆ ಎಂದು ದೂರುದಾರರಾದ ವಕೀಲ ಅಲಿ ಕಾಶಿಫ್ ಖಾನ್ ದೇಶ್ಮುಖ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕ್ರಿಯೆ ನೀಡುವುದು ಕಾನೂನು ವಿಧಾನವಾಗಿದ್ದು, ಆ ಮೂಲಕ ಆರೋಪಿಯು (ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ) ನ್ಯಾಯಾಲಯಕ್ಕೆ ಹಾಜರಾಗಬೇಕು ಅಥವಾ ಅವನ / ಅವಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗುತ್ತದೆ.

ಸಿಆರ್‌ಪಿಸಿಯ ಸೆಕ್ಷನ್ 202 ರ ಅಡಿಯಲ್ಲಿ ವಿಚಾರಣೆಗೆ ಪ್ರಾಥಮಿಕ ಸಾಕ್ಷ್ಯಳಿವೆಯೇ ಮತ್ತು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಯಲು ಸಾಕಷ್ಟು ಆಧಾರವಿದೆಯೇ ಎಂದು ನಿರ್ಧರಿಸಲು ಆದೇಶಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 04ಕ್ಕೆ ಮುಂದೂಡಲಾಗಿದೆ.

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಟ್ವಿಟ್ಟರ್‌ನಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಂದೇಶವನ್ನು ಪೋಸ್ಟ್ ಮಾಡಿದ್ದರು. ನಂತರ ಅವರ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಅದೇ ಸಮಯದಲ್ಲಿ ತನ್ನ ಸಹೋದರಿಯ ಬೆಂಬಲಕ್ಕೆ ಕಂಗನಾ ನಿಂತಿದ್ದರು ಮತ್ತು ನಿರ್ದಿಷ್ಟ ಸಮುದಾಯವನ್ನು ಭಯೋತ್ಪಾದಕರು ಎಂದು ಕರೆದಿದ್ದರು ಎಂದು ದೂರಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಹಿಂಸಾತ್ಮಕ, ಪ್ರಚೋದಾನಾತ್ಮಕ ಪೋಸ್ಟ್‌ಗಳಿಗೆ ಕಂಗನಾ ಕುಖ್ಯಾತಿಯಾಗಿದ್ದಾರೆ. ಈ ಕುರಿತು ಹತ್ತಾರು ದೂರುಗಳು ಅವರ ಮೇಲೆ ದಾಖಲಾಗಿದ್ದು ವಿಚಾರಣೆ ನಡೆಯುತ್ತಿವೆ.


ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...