Homeಮುಖಪುಟಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುದ್ಧ ನಡೆಯುತ್ತಿರುವ ತನಿಖೆಯ ವರದಿ ಸಲ್ಲಿಸುವಂತೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಆಕ್ಷೇಪಾರ್ಹ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ಕಳೆದ ಅಕ್ಟೋಬರ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ಡಿಸೆಂಬರ್ 5 ರೊಳಗೆ ವರದಿ ಸಲ್ಲಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಉಪನಗರ ಅಂಬೋಲಿ ಪೊಲೀಸರಿಗೆ ಸೂಚಿಸಿತ್ತು.

ಆದರೆ ನ್ಯಾಯಾಲಯವು ನೀಡಿದ ಸಮಯದೊಳಗೆ ವರದಿಯನ್ನು ಸಲ್ಲಿಸಲು ಪೊಲೀಸರು ವಿಫಲರಾಗಿದ್ದರು. ನಂತರ ಗಡುವನ್ನು ಜನವರಿ 5 ಕ್ಕೆ ವಿಸ್ತರಿಸಿತು. ಆಗಲೂ ಕೂಡ ಪೊಲೀಸರು ವರದಿ ಸಲ್ಲಿಸಿಲ್ಲ. ಪೊಲೀಸರಿಗೆ ಫೆಬ್ರವರಿ 5 ರವರೆಗೆ ಹೊಸ ಗಡುವು ನೀಡಲಾಯಿತು, ಆದರೆ ಪೊಲೀಸರು ಈ ಬಗ್ಗೆ ನಡೆಸಿದ ವಿಚಾರಣೆಯ ವರದಿಯನ್ನು ಇನ್ನೂ ಸಲ್ಲಿಸಿಲ್ಲ.

ಇದನ್ನೂ ಓದಿ: ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ಪೊಲೀಸರು ತನಿಖೆಯ ವರದಿ ಸಲ್ಲಿಸಲು ವಿಫಲವಾಗಿದ್ದರಿಂದ ಪ್ರಕ್ರಿಯೆಯನ್ನು ನೇರವಾಗಿ ಆರೋಪಿಗಳಿಗೆ ನೀಡಿ ಎಂದು ನಾನು ಮನವಿ ಮಾಡಿದ್ದೇನೆ ಎಂದು ದೂರುದಾರರಾದ ವಕೀಲ ಅಲಿ ಕಾಶಿಫ್ ಖಾನ್ ದೇಶ್ಮುಖ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕ್ರಿಯೆ ನೀಡುವುದು ಕಾನೂನು ವಿಧಾನವಾಗಿದ್ದು, ಆ ಮೂಲಕ ಆರೋಪಿಯು (ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ) ನ್ಯಾಯಾಲಯಕ್ಕೆ ಹಾಜರಾಗಬೇಕು ಅಥವಾ ಅವನ / ಅವಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗುತ್ತದೆ.

ಸಿಆರ್‌ಪಿಸಿಯ ಸೆಕ್ಷನ್ 202 ರ ಅಡಿಯಲ್ಲಿ ವಿಚಾರಣೆಗೆ ಪ್ರಾಥಮಿಕ ಸಾಕ್ಷ್ಯಳಿವೆಯೇ ಮತ್ತು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಯಲು ಸಾಕಷ್ಟು ಆಧಾರವಿದೆಯೇ ಎಂದು ನಿರ್ಧರಿಸಲು ಆದೇಶಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 04ಕ್ಕೆ ಮುಂದೂಡಲಾಗಿದೆ.

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಟ್ವಿಟ್ಟರ್‌ನಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಂದೇಶವನ್ನು ಪೋಸ್ಟ್ ಮಾಡಿದ್ದರು. ನಂತರ ಅವರ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಅದೇ ಸಮಯದಲ್ಲಿ ತನ್ನ ಸಹೋದರಿಯ ಬೆಂಬಲಕ್ಕೆ ಕಂಗನಾ ನಿಂತಿದ್ದರು ಮತ್ತು ನಿರ್ದಿಷ್ಟ ಸಮುದಾಯವನ್ನು ಭಯೋತ್ಪಾದಕರು ಎಂದು ಕರೆದಿದ್ದರು ಎಂದು ದೂರಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಹಿಂಸಾತ್ಮಕ, ಪ್ರಚೋದಾನಾತ್ಮಕ ಪೋಸ್ಟ್‌ಗಳಿಗೆ ಕಂಗನಾ ಕುಖ್ಯಾತಿಯಾಗಿದ್ದಾರೆ. ಈ ಕುರಿತು ಹತ್ತಾರು ದೂರುಗಳು ಅವರ ಮೇಲೆ ದಾಖಲಾಗಿದ್ದು ವಿಚಾರಣೆ ನಡೆಯುತ್ತಿವೆ.


ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...