Homeಮುಖಪುಟಸ್ವತಂತ್ರ ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದ ಕಂಗನಾ: ವ್ಯಾಪಕ ಟ್ರೋಲ್

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದ ಕಂಗನಾ: ವ್ಯಾಪಕ ಟ್ರೋಲ್

- Advertisement -
- Advertisement -

‘ಟೈಮ್ಸ್‌ ನೌ ಸಮ್ಮಿಟ್‌’ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ “ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್” ಎಂದು ಹೇಳುವ ಮೂಲಕ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ನಗೆ ಪಾಟಲಿಗೀಡಾಗಿದ್ದಾರೆ.

ಕಂಗನಾ ಹೇಳಿಕೆಯ ವಿಡಿಯೋವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಮತ್ತು ರಾಜಕೀಯ, ಸಾಮಾಜಿಕ ಮುಖಂಡರು ಹಂಚಿಕೊಂಡಿದ್ದು, ವೈರಲ್ ಆಗಿದೆ.

ಕಾರ್ಯಕ್ರಮದ ನಿರೂಪಕಿ ನವಿಕಾ ಕುಮಾರ್ ಅವರು ಸುಭಾಷ್ ಚಂದ್ರ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಅಲ್ಲ ಎಂದು ಹೇಳಿದಾಗ, ಕಂಗನಾ “ಹಾಗಾದರೆ ಅವರೇಕೆ ಪ್ರಧಾನಿಯಾಗಲಿಲ್ಲ?” ಎಂದು ಮರು ಪ್ರಶ್ನಿಸಿದ್ದಾರೆ. ಕಂಗನಾರ ಈ ಸಂದರ್ಶನ ನಡೆದು ಒಂದು ವಾರದ ಬಳಿಕ ಈ ಹೇಳಿಕೆ ಸುದ್ದಿಯಾಗಿದೆ.

ಇನ್‌ಸ್ಟಾಗ್ರಾಂನಲ್ಲಿ ಕಂಗನಾ ಹೇಳಿಕೆಯನ್ನು ಟ್ರೋಲ್ ಮಾಡಿರುವ ಕಾಂಗ್ರೆಸ್‌, “ಕಂಗನಾ ಜಿ ಇತಿಹಾಸದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿದ್ದಾರೆ. ಇಂತಹ ಇನ್ನೂ ನಾಲ್ಕು ಉದಾಹರಣೆಗಳನ್ನು ಮುಂದಿಟ್ಟರೆ ಬಿಜೆಪಿ ಪ್ರಧಾನಿ ಹುದ್ದೆಗೆ ಪ್ರಬಲ ಸ್ಪರ್ಧಿಯಾಗಬಹುದು” ಎಂದಿದೆ.

 

View this post on Instagram

 

A post shared by Congress (@incindia)

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ಬಿ ವಿ ಶ್ರೀನಿವಾಸ್‌ ಅವರು, ‘ಹೇ ಪ್ರಭು’ ಎಂದು ಹೇಳಿ ಹಂಚಿಕೊಂಡಿದ್ದಾರೆ.

ನಟ ಪ್ರಕಾಶ್ ರಾಜ್ ಅವರು, “ಮಹಾಪ್ರಭುವಿನ ಆಸ್ಥಾನ ವಿದೂಷಕರು” ಎಂದು ಉಲ್ಲೇಖಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕಾಲೆಳೆದಿದ್ದಾರೆ.

ಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಕಂಗನಾ ಹೇಳಿಕೆಯ ವಿಡಿಯೋಗೆ ಪ್ರತಿಕ್ರಿಯಿಸಿದ್ದು, “ವಿದ್ಯಾವಂತ ಮತ್ತು ಪ್ರಜ್ಞಾವಂತರಿಗೆ ಮತ ನೀಡಿ” ಎಂದಿದ್ದಾರೆ.

ಕಂಗನಾ ಹೇಳಿಕೆ ಎಲ್ಲೆಡೆ ಟ್ರೋಲ್ ಆಗಿದ್ದರೂ, ಇದೊಂದು ಗಂಭೀರ ವಿಚಾರ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರನ್ನು ಸದಾ ಟೀಕಿಸುವ ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಈ ಹಿಂದೆಯೂ ನೆಹರೂ ಅಲ್ಲ, ಸುಭಾಷ್ ಚಂದ್ರ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂಬ ಹೇಳಿಕೆ ನೀಡಿದ್ದರು. ಅದನ್ನೇ ಕಂಗನಾ ರಣಾವತ್ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಕ್ರೂರ ಭಯೋತ್ಪಾದನೆ, ಭ್ರಷ್ಟಾಚಾರ ವಿರೋಧಿ ಕಾನೂನುಗಳನ್ನು ಕೊನೆಗೊಳಿಸುತ್ತೇವೆ: ಸಿಪಿಐ(ಎಂ) ಪ್ರಣಾಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...