‘ಟೈಮ್ಸ್ ನೌ ಸಮ್ಮಿಟ್’ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ “ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್” ಎಂದು ಹೇಳುವ ಮೂಲಕ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ನಗೆ ಪಾಟಲಿಗೀಡಾಗಿದ್ದಾರೆ.
ಕಂಗನಾ ಹೇಳಿಕೆಯ ವಿಡಿಯೋವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಮತ್ತು ರಾಜಕೀಯ, ಸಾಮಾಜಿಕ ಮುಖಂಡರು ಹಂಚಿಕೊಂಡಿದ್ದು, ವೈರಲ್ ಆಗಿದೆ.
ಕಾರ್ಯಕ್ರಮದ ನಿರೂಪಕಿ ನವಿಕಾ ಕುಮಾರ್ ಅವರು ಸುಭಾಷ್ ಚಂದ್ರ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಅಲ್ಲ ಎಂದು ಹೇಳಿದಾಗ, ಕಂಗನಾ “ಹಾಗಾದರೆ ಅವರೇಕೆ ಪ್ರಧಾನಿಯಾಗಲಿಲ್ಲ?” ಎಂದು ಮರು ಪ್ರಶ್ನಿಸಿದ್ದಾರೆ. ಕಂಗನಾರ ಈ ಸಂದರ್ಶನ ನಡೆದು ಒಂದು ವಾರದ ಬಳಿಕ ಈ ಹೇಳಿಕೆ ಸುದ್ದಿಯಾಗಿದೆ.
ಇನ್ಸ್ಟಾಗ್ರಾಂನಲ್ಲಿ ಕಂಗನಾ ಹೇಳಿಕೆಯನ್ನು ಟ್ರೋಲ್ ಮಾಡಿರುವ ಕಾಂಗ್ರೆಸ್, “ಕಂಗನಾ ಜಿ ಇತಿಹಾಸದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿದ್ದಾರೆ. ಇಂತಹ ಇನ್ನೂ ನಾಲ್ಕು ಉದಾಹರಣೆಗಳನ್ನು ಮುಂದಿಟ್ಟರೆ ಬಿಜೆಪಿ ಪ್ರಧಾನಿ ಹುದ್ದೆಗೆ ಪ್ರಬಲ ಸ್ಪರ್ಧಿಯಾಗಬಹುದು” ಎಂದಿದೆ.
View this post on Instagram
ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ಬಿ ವಿ ಶ್ರೀನಿವಾಸ್ ಅವರು, ‘ಹೇ ಪ್ರಭು’ ಎಂದು ಹೇಳಿ ಹಂಚಿಕೊಂಡಿದ್ದಾರೆ.
Hey Prabhu 🙏 pic.twitter.com/G0hbuH7MvA
— Srinivas BV (@srinivasiyc) April 4, 2024
ನಟ ಪ್ರಕಾಶ್ ರಾಜ್ ಅವರು, “ಮಹಾಪ್ರಭುವಿನ ಆಸ್ಥಾನ ವಿದೂಷಕರು” ಎಂದು ಉಲ್ಲೇಖಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕಾಲೆಳೆದಿದ್ದಾರೆ.
Clowns of Supreme Joker’s Party… what a Disgrace..#justasking .. ಮಹಾಪ್ರಭುವಿನ ಆಸ್ಥಾನ ವಿದೂಷಕರು… https://t.co/Q17wagFd0M
— Prakash Raj (@prakashraaj) April 4, 2024
ಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಕಂಗನಾ ಹೇಳಿಕೆಯ ವಿಡಿಯೋಗೆ ಪ್ರತಿಕ್ರಿಯಿಸಿದ್ದು, “ವಿದ್ಯಾವಂತ ಮತ್ತು ಪ್ರಜ್ಞಾವಂತರಿಗೆ ಮತ ನೀಡಿ” ಎಂದಿದ್ದಾರೆ.
Vote for educated and sensible people pic.twitter.com/NlnwaHpQKg
— Swati Maliwal (@SwatiJaiHind) April 4, 2024
ಕಂಗನಾ ಹೇಳಿಕೆ ಎಲ್ಲೆಡೆ ಟ್ರೋಲ್ ಆಗಿದ್ದರೂ, ಇದೊಂದು ಗಂಭೀರ ವಿಚಾರ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರನ್ನು ಸದಾ ಟೀಕಿಸುವ ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಈ ಹಿಂದೆಯೂ ನೆಹರೂ ಅಲ್ಲ, ಸುಭಾಷ್ ಚಂದ್ರ ಬೋಸ್ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂಬ ಹೇಳಿಕೆ ನೀಡಿದ್ದರು. ಅದನ್ನೇ ಕಂಗನಾ ರಣಾವತ್ ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ: ಕ್ರೂರ ಭಯೋತ್ಪಾದನೆ, ಭ್ರಷ್ಟಾಚಾರ ವಿರೋಧಿ ಕಾನೂನುಗಳನ್ನು ಕೊನೆಗೊಳಿಸುತ್ತೇವೆ: ಸಿಪಿಐ(ಎಂ) ಪ್ರಣಾಳಿಕೆ