Homeಮುಖಪುಟಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

- Advertisement -
- Advertisement -

ಮಹಾರಾ‍‍ಷ್ಟ್ರ ಸರ್ಕಾರ ಮತ್ತು ಕಂಗನಾ ರಾಣಾವತ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮುಂಬೈ ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿರುವುದು ಸ್ಪಷ್ಟ ಎಂದು ಮುಂಬೈ ಸಿವಿಲ್ ಕೋರ್ಟ್ ಹೇಳಿದೆ. ಕಂಗನಾ ತನ್ನ ಮೂರು ಫ್ಲ್ಯಾಟ್‌ಗಳನ್ನು ವಿಲೀನಗೊಳಿಸುವಾಗ ಮಂಜೂರಾದ ಯೋಜನೆಯನ್ನು ಉಲ್ಲಂಘಿಸಿದ್ದಾರೆ ಎಂದಿರುವ ಕೋರ್ಟ್ ತನ್ನ ಅನಧಿಕೃತ ಫ್ಲ್ಯಾಟ್‌ ಕೆಡವದಂತೆ ಕಂಗನಾ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

ಬೃಹತ್ ಮುಂಬೈ ಮಹಾನಗರ ಪಾಲಿಕೆಯು ತನ್ನ ಅನಧಿಕೃತ ಕಟ್ಟಡವನ್ನು ಕೆಡವದಂತೆ ತಡೆಯಬೇಕೆಂದು ಕಳೆದ ವಾರ ಕಂಗನಾ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಉಪನಗರ ದಿಂಡೋಶಿಯಲ್ಲಿನ ನ್ಯಾಯಾಧೀಶರಾದ ಎಲ್ ಎಸ್ ಚವಾಣ್ ಕಂಗನಾ ಮನವಿಯನ್ನು ತಿರಸ್ಕರಿಸಿದ್ದಾರೆ.

ಮುಂಬೈನ ಖಾರ್ ಪ್ರದೇಶದಲ್ಲಿ 16 ಅಂತಸ್ತಿನ ಕಟ್ಟಡದ ಐದನೇ ಮಹಡಿಯಲ್ಲಿ ಮೂರು ಫ್ಲ್ಯಾಟ್‌ಗಳನ್ನು ಹೊಂದಿರುವ ಕಂಗನಾ ಅವನ್ನು ಒಂದಾಗಿ ವಿಲೀನಗೊಳಿಸಿದ್ದಾರೆ. ಹಾಗೆ ಮಾಡುವಾಗ ಫ್ಲ್ಯಾಟ್‌ಗಳ ಸಾಮಾನ್ಯ ಹಾದಿ, ಹೊರಾಂಡ, ಬಾಲ್ಕನಿ ಸೇರಿದಂತೆ ಇತರರಿಗೂ ಸೇರಿದ ಹಲವು ಜಾಗಗಳನ್ನು ನಿಯಮಬಾಹಿರವಾಗಿ ವಾಸಯೋಗ್ಯ ಪ್ರದೇಶವಾಗಿ ಪರಿವರ್ತಿಸಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

“ಇವು ಮಂಜೂರಾದ ಯೋಜನೆಯ ಗಂಭೀರ ಉಲ್ಲಂಘನೆಯಾಗಿದ್ದು, ಇದಕ್ಕಾಗಿ ಸಮರ್ಥ ಪ್ರಾಧಿಕಾರದ ಅನುಮತಿ ಅಗತ್ಯ” ಎಂದು ನ್ಯಾಯಾಲಯ ಹೇಳಿದೆ.

ಬೃಹತ್ ಮುಂಬೈ ಮಹಾನಗರ ಪಾಲಿಕೆಯು 2018ರ ಮಾರ್ಚ್‌ನಲ್ಲಿಯೇ ಇದು ಅನಧಿಕೃತ ನಿರ್ಮಾಣವೆಂದು ಕಂಗನಾ ರಾಣವತ್‌ಗೆ ನೋಟಿಸ್ ನೀಡಿತ್ತು. ಅಲ್ಲದೇ ಮತ್ತೊಂದು ನೋಟಿಸ್‌ನಲ್ಲಿ ಈ ಫ್ಲ್ಯಾಟ್‌ಗಳ ವಿಲೀನವನ್ನು ಮೊದಲಿದ್ದ ಯಥಾಸ್ಥಿತಿಗೆ ತರಬೇಕೆಂದು ಹೇಳಿ, ಇಲ್ಲದಿದ್ದಲ್ಲಿ ಅನಧಿಕೃತ ಭಾಗವನ್ನು ತೆರವುಗೊಳಿಸುವುದಾಗಿ ಎಚ್ಚರಿಕೆ ನೀಡಿತ್ತು.

ಈ ತೆರವು ನೋಟಿಸ್‌ ಅನ್ನು ಕೋರ್ಟ್‌ನಲ್ಲಿ ಕಂಗನಾ ಪ್ರಶ್ನಿಸಿ, ಮಹಾನಗರ ಪಾಲಿಕೆಯು ತೆರವು ಕಾರ್ಯಾಚರಣೆ ನಡೆಸದಂತೆ ಒತ್ತಾಯಿಸಿದ್ದರು. ಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿತ್ತು.

ಇತ್ತೀಚಿಗಿನ ಡಿಸೆಂಬರ್ 23ರ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ಮುಂಬೈ ಸಿವಿಲ್ ಕೋರ್ಟ್ ಕಂಗನಾ ಅರ್ಜಿಯನ್ನು ವಜಾಗೊಳಿಸಿದ್ದಲ್ಲದೆ ಈ ಕೋರ್ಟ್‌ನ ಮಧ್ಯಪ್ರವೇಶ ಅಗತ್ಯವಿಲ್ಲ. ಹಾಗಿದ್ದರೂ ಇನ್ನು ಆರು ವಾರಗಳಲ್ಲಿ ಮುಂಬೈ ಹೈಕೋರ್ಟ್‌ ಅನ್ನು ಸಂಪರ್ಕಿಸಬಹುದೆಂದು ಹೇಳಿತ್ತು.

ಸೆಪ್ಟೆಂಬರ್ 9 ರಂದು, “ಅನಧಿಕೃತ” ನಿರ್ಮಾಣದ ಆರೋಪದ ಮೇಲೆ ಬಿಎಂಸಿಯು ಪಾಲಿ ಹಿಲ್ ಪ್ರದೇಶದಲ್ಲಿನ ಕಂಗನಾರ ಬಂಗಲೆಯ ಕೆಲ ಭಾಗಗಳನ್ನು ನೆಲಸಮ ಮಾಡಿತ್ತು. ಅವರು ಅದರ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬಿಎಂಸಿಯ ಕ್ರಮವನ್ನು ಕಾನೂನುಬಾಹಿರ ಮತ್ತು ದುರುದ್ದೇಶಪೂರಿತ ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...