Homeಮುಖಪುಟಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ.

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ದೇಶಾದ್ಯಂತ ಟೀಕೆ, ಖಂಡನೆ ವ್ಯಕ್ತವಾದ ಬೆನ್ನಲ್ಲೆ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಕೂಡ ಅವರ ಹೇಳಿಕೆಯನ್ನು ಸಂಪೂರ್ಣ ತಪ್ಪು ಎಂದು ಕರೆದಿದ್ದಾರೆ.

ದೇಶದ ಸ್ವಾತಂತ್ರ್ಯ ಹೋರಾಟದ ಕುರಿತು ಕಂಗನಾ ರಣಾವತ್‌ರವರ ಹೇಳಿಕೆ ಸಂಪೂರ್ಣ ತಪ್ಪು. ಸ್ವಾತಂತ್ರ್ಯ ಚಳವಳಿಯ ಕುರಿತು ನಕರಾತ್ಮಕ ಹೇಳಿಕೆ ನೀಡುವ ಯಾರಿಗೂ ಇಲ್ಲ. ಅವರ ಯಾವ ಭಾವನೆಯಿಟ್ಟುಕೊಂಡು ಆ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

2014ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಮಾನ್ಯ ಜನರು ಸಹ ಸ್ವಾತಂತ್ರ್ಯ ಅನುಭವಿಸುವಂತಾಗಿದೆ. ಇಂದು ದೇಶದಲ್ಲಿ ಯಾರೂ ಕೂಡ ಎರಡೊತ್ತಿನ ಊಟ ಇಲ್ಲದೆ ಮಲಗುತ್ತಿಲ್ಲ. ಕೇವಲ 105 ರೂಗೆ ಮೋದಿ ಸರ್ಕಾರವು 35 ಕೆಜಿ ಪಡಿತರವನ್ನು ವಿತರಿಸುತ್ತಿದೆ. ಹಾಗಾಗಿ ಕಂಗನಾ ರಣಾವತ್‌ರವರು ಮೋದಿ ಸರ್ಕಾರದ ಸಾಧನೆಗಳನ್ನು ಹೊಗಳಬಹುದು. ಆದರೆ ಸ್ವಾತಂತ್ರ್ಯ ಹೋರಾಟವನ್ನು ತೆಗಳುವ ಹಕ್ಕು ಇಲ್ಲ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಪ್ರೀತಿ ಮೆನನ್ ಅವರು ಈ ದೂರು ದಾಖಲಿಸಿದ್ದು, ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಂಗನಾ ರಣಾವತ್ ನೀಡಿರುವ ದೇಶದ್ರೋಹಿ ಮತ್ತು ಪ್ರಚೋದಕ ಹೇಳಿಕೆಗಳಿಗಾಗಿ ಸೆಕ್ಷನ್ 504, 505 ಮತ್ತು 124A ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿ ಮುಂಬೈ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಪ್ರೀತಿ ಮೆನನ್ ಟ್ವೀಟ್ ಮಾಡಿದ್ದಾರೆ.

ಕಂಗನಾ ರಣಾವತ್ ವಿರುದ್ಧ ಬಿಜೆಪಿ ನಾಯಕ ವರುಣ್ ಗಾಂಧಿ ಕೂಡಾ ವಾಗ್ದಾಳಿ ನಡೆಸಿದ್ದು, ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಬೇಕೋ…ದೇಶದ್ರೋಹ ಎನ್ನಬೇಕೋ..? ಎಂದು ಪ್ರಶ್ನಿಸಿದ್ದಾರೆ. “ಒಮ್ಮೆ ಮಹಾತ್ಮಾ ಗಾಂಧಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಕೆಲವೊಮ್ಮೆ ಅವರ ಕೊಲೆಗಾರನಿಗೆ ಗೌರವ. ಈಗ ಹುತಾತ್ಮ ಮಂಗಲ್ ಪಾಂಡೆಯಿಂದ ಹಿಡಿದು ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆ ತಿರಸ್ಕಾರ. ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಲೋ…ದೇಶದ್ರೋಹ ಎನ್ನಲೋ…” ಎಂದು ವರುಣ್ ಗಾಂಧಿ ಪ್ರಶ್ನಿಸಿದ್ದಾರೆ.

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ವೀರ ಸಾವರ್ಕರ್ ಅವರ ಕ್ಷಮಾದಾನ ಅರ್ಜಿಗಳನ್ನು ಉಲ್ಲೇಖಿಸಿ, ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದೆ. ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಬರೆದಿದ್ದಾರೆ.


ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...