Homeಮುಖಪುಟಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ.

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ದೇಶಾದ್ಯಂತ ಟೀಕೆ, ಖಂಡನೆ ವ್ಯಕ್ತವಾದ ಬೆನ್ನಲ್ಲೆ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಕೂಡ ಅವರ ಹೇಳಿಕೆಯನ್ನು ಸಂಪೂರ್ಣ ತಪ್ಪು ಎಂದು ಕರೆದಿದ್ದಾರೆ.

ದೇಶದ ಸ್ವಾತಂತ್ರ್ಯ ಹೋರಾಟದ ಕುರಿತು ಕಂಗನಾ ರಣಾವತ್‌ರವರ ಹೇಳಿಕೆ ಸಂಪೂರ್ಣ ತಪ್ಪು. ಸ್ವಾತಂತ್ರ್ಯ ಚಳವಳಿಯ ಕುರಿತು ನಕರಾತ್ಮಕ ಹೇಳಿಕೆ ನೀಡುವ ಯಾರಿಗೂ ಇಲ್ಲ. ಅವರ ಯಾವ ಭಾವನೆಯಿಟ್ಟುಕೊಂಡು ಆ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

2014ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಮಾನ್ಯ ಜನರು ಸಹ ಸ್ವಾತಂತ್ರ್ಯ ಅನುಭವಿಸುವಂತಾಗಿದೆ. ಇಂದು ದೇಶದಲ್ಲಿ ಯಾರೂ ಕೂಡ ಎರಡೊತ್ತಿನ ಊಟ ಇಲ್ಲದೆ ಮಲಗುತ್ತಿಲ್ಲ. ಕೇವಲ 105 ರೂಗೆ ಮೋದಿ ಸರ್ಕಾರವು 35 ಕೆಜಿ ಪಡಿತರವನ್ನು ವಿತರಿಸುತ್ತಿದೆ. ಹಾಗಾಗಿ ಕಂಗನಾ ರಣಾವತ್‌ರವರು ಮೋದಿ ಸರ್ಕಾರದ ಸಾಧನೆಗಳನ್ನು ಹೊಗಳಬಹುದು. ಆದರೆ ಸ್ವಾತಂತ್ರ್ಯ ಹೋರಾಟವನ್ನು ತೆಗಳುವ ಹಕ್ಕು ಇಲ್ಲ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಪ್ರೀತಿ ಮೆನನ್ ಅವರು ಈ ದೂರು ದಾಖಲಿಸಿದ್ದು, ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಂಗನಾ ರಣಾವತ್ ನೀಡಿರುವ ದೇಶದ್ರೋಹಿ ಮತ್ತು ಪ್ರಚೋದಕ ಹೇಳಿಕೆಗಳಿಗಾಗಿ ಸೆಕ್ಷನ್ 504, 505 ಮತ್ತು 124A ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿ ಮುಂಬೈ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಪ್ರೀತಿ ಮೆನನ್ ಟ್ವೀಟ್ ಮಾಡಿದ್ದಾರೆ.

ಕಂಗನಾ ರಣಾವತ್ ವಿರುದ್ಧ ಬಿಜೆಪಿ ನಾಯಕ ವರುಣ್ ಗಾಂಧಿ ಕೂಡಾ ವಾಗ್ದಾಳಿ ನಡೆಸಿದ್ದು, ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಬೇಕೋ…ದೇಶದ್ರೋಹ ಎನ್ನಬೇಕೋ..? ಎಂದು ಪ್ರಶ್ನಿಸಿದ್ದಾರೆ. “ಒಮ್ಮೆ ಮಹಾತ್ಮಾ ಗಾಂಧಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಕೆಲವೊಮ್ಮೆ ಅವರ ಕೊಲೆಗಾರನಿಗೆ ಗೌರವ. ಈಗ ಹುತಾತ್ಮ ಮಂಗಲ್ ಪಾಂಡೆಯಿಂದ ಹಿಡಿದು ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆ ತಿರಸ್ಕಾರ. ಇಂತಹ ಆಲೋಚನೆಯನ್ನು ನಾನು ಹುಚ್ಚುತನ ಎನ್ನಲೋ…ದೇಶದ್ರೋಹ ಎನ್ನಲೋ…” ಎಂದು ವರುಣ್ ಗಾಂಧಿ ಪ್ರಶ್ನಿಸಿದ್ದಾರೆ.

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ವೀರ ಸಾವರ್ಕರ್ ಅವರ ಕ್ಷಮಾದಾನ ಅರ್ಜಿಗಳನ್ನು ಉಲ್ಲೇಖಿಸಿ, ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದೆ. ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಬರೆದಿದ್ದಾರೆ.


ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...