Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...