Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...