Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...