Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...