Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...