Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...