Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...