Homeಮುಖಪುಟಕನ್ಹಯ್ಯ ಹೇಳಿಕೆ ಅಸತ್ಯ ಮತ್ತು ಭಟ್ಟಂಗಿತನ ಎಂದ ನಟ ಚೇತನ್

ಕನ್ಹಯ್ಯ ಹೇಳಿಕೆ ಅಸತ್ಯ ಮತ್ತು ಭಟ್ಟಂಗಿತನ ಎಂದ ನಟ ಚೇತನ್

- Advertisement -
- Advertisement -

ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಸಿಪಿಐ ಯುವ ನಾಯಕ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್‌ ಇದು ಅಸತ್ಯ ಮತ್ತು ಭಟ್ಟಂಗಿತನ ಎಂದಿದ್ದಾರೆ.

ಸೆಪ್ಟಂಬರ್‌ 28 ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಕನ್ಹಯ್ಯ ಕುಮಾರ್‌, “ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ” ಎಂದು ಹೇಳಿದ್ದರು.

ಕನ್ಹಯ್ಯ ಹೇಳಿಕೆಯನ್ನು ಟೀಕೆ ಮಾಡಿರುವ ನಟ ಚೇತನ್, “ಹೊಸದಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಕನ್ಹಯ್ಯ ಕುಮಾರ್ ಅವರು ‘ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಇದು ಅಸತ್ಯ ಮತ್ತು ಭಟ್ಟಂಗಿತನ” ಎಂದಿದ್ದಾರೆ.

ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

“ಕಾಂಗ್ರೆಸ್ (ಮತ್ತು ಬಿಜೆಪಿಯ) ಅವಕಾಶವಾದ ಮತ್ತು ಬೂಟಾಟಿಕೆಗಳಿಲ್ಲದೆಯೇ ಕರ್ನಾಟಕ ಮತ್ತು ಭಾರತವು ಉತ್ತಮವಾಗಿರುತ್ತದೆ. ವೈಯಕ್ತಿಕ ಅಧಿಕಾರದ ಸಲುವಾಗಿ, ಕನ್ಹಯ್ಯ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ” ಎಂದು ಕನ್ಹಯ್ಯ ವಿರುದ್ಧ ಕಿಡಿ ಕಾರಿದ್ದಾರೆ.

“ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ” ಎಂದು ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸುದ್ದಿಗಾರಿಗೆ ತಿಳಿಸಿದ್ದರು.

ಕನ್ಹಯ್ಯ ಕುಮಾರ್‌ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಇಬ್ಬರು ಸೆಪ್ಟಂಬರ್‌ 28 ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಶಾಸಕ ಜಿಗ್ನೇಶ್ ಮೇವಾನಿ ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ ಎಂದು ಹೇಳಿದರು. ಕನ್ಹಯ್ಯ ಕುಮಾರ್‌ ಕಾಂಗ್ರೆಸ್ ಸೇರ್ಪಡೆಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.


ಇದನ್ನೂ ಓದಿ:  ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...